Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಪ್ಘಾನರಿಗೆ ಅಂತಾರಾಷ್ಟ್ರೀಯ ನೆರವು...

ಅಪ್ಘಾನರಿಗೆ ಅಂತಾರಾಷ್ಟ್ರೀಯ ನೆರವು ಒದಗಿಸಲು ಅವಕಾಶ ನೀಡಿ: ಭಾರತ

ವಾರ್ತಾಭಾರತಿವಾರ್ತಾಭಾರತಿ24 Aug 2021 11:45 PM IST
share
ಅಪ್ಘಾನರಿಗೆ ಅಂತಾರಾಷ್ಟ್ರೀಯ ನೆರವು ಒದಗಿಸಲು ಅವಕಾಶ ನೀಡಿ: ಭಾರತ

ಹೊಸದಿಲ್ಲಿ, ಅ. 23: ಅಗತ್ಯ ಇರುವ ಎಲ್ಲ ಅಪ್ಘಾನ್ ಹಾಗೂ ಅಂತಾರಾಷ್ಟ್ರೀಯ ನೆರವು ತಡೆಯಿಲ್ಲದೆ ಒದಗಿಸಲು ಅವಕಾಶ ನೀಡುವಂತೆ ಅಪ್ಘಾನಿಸ್ಥಾನಕ್ಕೆ ಸಂಬಂಧಿಸಿದ ಎಲ್ಲರನ್ನೂ ಭಾರತ ಮಂಗಳವಾರ ಆಗ್ರಹಿಸಿದೆ.

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ ವಿಶೇಷ ಸಭೆಯಲ್ಲಿ ಹೊಸದಿಲ್ಲಿ ಅಪ್ಘಾನಿಸ್ಥಾನದಲ್ಲಿ ಆಹಾರ, ವೈದ್ಯಕೀಯ ಸೇವೆ ಹಾಗೂ ವಸತಿ ಕೊರತೆ ಕುರಿತು ಕಳವಳ ವ್ಯಕ್ತಪಡಿಸಿತು. ಅಪ್ಘಾನಿಸ್ಥಾನದ ಪ್ರಸಕ್ತ ಪರಿಸ್ಥಿತಿಯ ಕಾರಣದಿಂದ ಉಚಿತ ಶಿಕ್ಷಣ, ಆರೋಗ್ಯ ಸೇವೆ ಹಾಗೂ ಅಭಿವ್ಯಕ್ತಿ ಸ್ವಾತಂತ್ರದ ಹಕ್ಕುಗಳಿಗೆ ಅಡ್ಡಿ ಉಂಟಾಗಿದೆ ಎಂದು ಭಾರತ ಹೇಳಿದೆ.

‘‘ಅಪ್ಘಾನಿಸ್ಥಾನದ ನೆರೆಯ ರಾಷ್ಟ್ರವಾಗಿ ಅಲ್ಲಿರುವ ಪ್ರಸಕ್ತ ಪರಿಸ್ಥಿತಿ ನಮಗೆ ತೀವ್ರ ಕಳವಳಕಾರಿ’’ ಎಂದು ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ಇಂದ್ರಮಣಿ ಪಾಂಡೆ ಅವರು ಸಭೆಯಲ್ಲಿ ತಿಳಿಸಿದರು. ದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳುವಂತೆ ಅವರು ಪ್ರತಿಯೊಬ್ಬರನ್ನು ಆಗ್ರಹಿಸಿದರು. ಅಪ್ಘಾನಿಸ್ಥಾನದ ಸ್ಥಿರತೆ ಈ ವಲಯದ ಶಾಂತಿ ಹಾಗೂ ಭದ್ರತೆಯೊಂದಿಗೆ ಸಂಬಂಧ ಹೊಂದಿದೆ ಎಂದು ಅವರು ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.

‘‘ಅಫ್ಘಾನಿಸ್ಥಾನದ ಪರಿಸ್ಥಿತಿ ಅದರ ನೆರೆಯ ದೇಶಗಳಿಗೆ ಸವಾಲು ಒಡ್ಡದು ಎಂದು ನಾವು ಭಾವಿಸುತ್ತೇವೆ. ಅಲ್ಲದೆ, ಇತರ ಯಾವುದೇ ದೇಶಕ್ಕೆ ಬೆದರಿಕೆ ಒಡ್ಡಲು ಅದರ ಭೂಪ್ರದೇಶವನ್ನು ಲಷ್ಕರೆ ತಯ್ಯಿಬ ಹಾಗೂ ಜೈಶೆ ಮಹಮ್ಮದ್ ನಂತಹ ಭಯೋತ್ಪಾದನಾ ಸಂಘಟನೆಗಳು ಬಳಸದು ’’ ಎಂದು ಪಾಂಡೆ ಹೇಳಿದ್ದಾರೆ.

ಸಮಾಜದ ಎಲ್ಲ ವರ್ಗವನ್ನು ಪ್ರತಿನಿಧಿಸುವ ಎಲ್ಲರನ್ನೂ ಒಳಗೊಂಡ ಹಾಗೂ ವಿಶಾಲ ತಳಹದಿಯ ಆಡಳಿತ ವ್ಯವಸ್ಥೆಯನ್ನು ಭಾರತ ನಿರೀಕ್ಷಿಸುತ್ತದೆ ಎಂದು ವಿಶ್ವಸಂಸ್ಥೆಯ ಖಾಯಂ ಪ್ರತಿನಿಧಿ ಹೇಳಿದರು. ಅಫ್ಘಾನಿಸ್ಥಾನದ ಮಹಿಳೆಯರ ಧ್ವನಿ, ಅಫ್ಘಾನ್ ಮಕ್ಕಳ ಆಕಾಂಕ್ಷೆ ಹಾಗೂ ಅಲ್ಪಸಂಖ್ಯಾತರ ಹಕ್ಕುಗಳಿಗೆ ಗೌರವ ನೀಡಬೇಕು ಎಂದು ಅವರು ಹೇಳಿದರು.

ಅಪ್ಘಾನಿಸ್ಥಾನಲ್ಲಿ ಅಭಿವೃದ್ಧಿಗೆ ಭಾರತ ನೀಡುವ ಕೊಡುಗೆಯಲ್ಲಿ ನೀರು ಪೂರೈಕೆ, ರಸ್ತೆ, ಆರೋಗ್ಯ ಸೇವೆ, ಶಿಕ್ಷಣ ಹಾಗೂ ಕೃಷಿಗೆ ಸಂಬಂಧಿಸಿದ ವಿಷಯಗಳು ಒಳಗೊಂಡಿವೆ ಎಂದು ಹೇಳಿಕೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X