Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಇ-ಶ್ರಮ್ ಯೋಜನೆಯಡಿ ಒಂದು ಸೂರಿನಡಿ...

ಇ-ಶ್ರಮ್ ಯೋಜನೆಯಡಿ ಒಂದು ಸೂರಿನಡಿ ಅಸಂಘಟಿತ ಕಾರ್ಮಿಕರು

ವಾರ್ತಾಭಾರತಿವಾರ್ತಾಭಾರತಿ25 Aug 2021 8:25 PM IST
share

ಉಡುಪಿ, ಆ.25: ದೇಶದ ಅಸಂಘಟಿತ ವಲಯಗಳಲ್ಲಿ ಸುಮಾರು 43.7 ಕೋಟಿ ಕಾರ್ಮಿಕರು ಕೆಲಸ ಮಾಡುತ್ತಿದ್ದು, ಮಾಹಿತಿ ಹಾಗೂ ಸಂಘಟನೆಯ ಕೊರತೆಯಿಂದ ಕೇಂದ್ರ ಮತ್ತು ರಾಜ್ಯ ಸರಕಾರಗಳಿಂದ ದೊರೆಯಬಹುದಾದ ಹಲವು ಯೋಜನೆ, ಸೌಲಭ್ಯಗಳಿಂದ ಈ ಕಾರ್ಮಿಕರು ವಂಚಿತರಾಗುತ್ತಿದ್ದಾರೆ. ಇದೀಗ ಈ ಎಲ್ಲಾ ಕಾರ್ಮಿಕರನ್ನು ಒಂದೇ ಕಡೆಯಲ್ಲಿ ನೊಂದಣಿ ಮಾಡಲು ಆ.26ರಿಂದ ಕೇಂದ್ರ ಸರಕಾರದ ಇ-ಶ್ರಮ್ ನೊಂದಣಿ ಏಕಕಾಲದಲ್ಲಿ ದೇಶಾದ್ಯಂತ ಆರಂಭಗೊಳ್ಳಲಿದೆ.

ಇ-ಶ್ರಮ್ ನೊಂದಣಿ ಮೂಲಕ ಕೇಂದ್ರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಅಸಂಘಟಿತ ಕಾರ್ಮಿಕರ ರಾಷ್ಟ್ರೀಯ ಡೇಟಾಬೇಸ್ (ಎನ್‌ಡಿಯುಡಬ್ಲು) ಅನ್ನು ರಚಿಸುತ್ತಿದೆ. ಅಸಂಘಟಿತ ಕಾರ್ಮಿಕರ ನೋಂದಣಿಗೆ ಈ ವೆಬ್‌ಸೈಟ್‌ನಲ್ಲಿ ಅನುಕೂಲ ಕಲ್ಪಿಸಲಾಗುವುದು. ಹಾಗೂ ಪ್ರತಿ ಅಸಂಘಟಿತ ಕಾರ್ಮಿಕರಿಗೆ ಗುರುತಿನ ಚೀಟಿ ನೀಡಲಾಗುವುದು. ಇದು ಅನನ್ಯ ಗುರುತಿನ ಸಂಖ್ಯೆಯಾಗಿರುತ್ತದೆ.

ಅಸಂಘಟಿತ ಕಾರ್ಮಿಕರಿಗೆ ಪ್ರಯೋಜನ:  ಅಸಂಘಟಿತ ಕಾರ್ಮಿಕರ ರಾಷ್ಟ್ರೀಯ ಡೇಟಾಬೇಸ್ ಆಧಾರದ ಮೇಲೆ ಸಾಮಾಜಿಕ ಭದ್ರತಾ ಯೋಜನೆ ಗಳನ್ನು ಸಚಿವಾಲಯಗಳು/ಸರಕಾರಗಳು ಜಾರಿಗೊಳಿಸುತ್ತವೆ. ಅಸಂಘಟಿತ ಕಾರ್ಮಿಕರ ರಾಷ್ಟ್ರೀಯ ಡೇಟಾಬೇಸ್‌ಅಡಿಯಲ್ಲಿ ನೋಂದಾಯಿತ ಕೆಲಸಗಾರರು ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆಯನ್ನು ತೆಗೆದುಕೊಳ್ಳಬಹುದು. ಇದರ ಪ್ರೀಮಿಯಂ ರೂ.12ನ್ನು ಒಂದು ವರ್ಷದವರೆಗೆ ಮನ್ನಾ ಮಾಡಲಾಗುತ್ತದೆ.

ಅಸಂಘಟಿತ ಕಾರ್ಮಿಕರ ವಲಯದಲ್ಲಿ, ಸಣ್ಣ ಮತ್ತು ಕನಿಷ್ಠ ರೈತರು, ಕೃಷಿ ಕಾರ್ಮಿಕರು, ಹಂಚಿಕೆದಾರರು, ಮೀನುಗಾರರು, ಪಶು ಸಂಗೋಪನೆಯಲ್ಲಿ ತೊಡಗಿರುವವರು, ಬೀಡಿ ಕಟ್ಟುವವರು, ಲೇಬಲಿಂಗ್ ಮತ್ತು ಪ್ಯಾಕಿಂಗ್ ನವರು, ಕಟ್ಟಡ ಕಾರ್ಮಿಕರು, ಚರ್ಮದ ಕೆಲಸಗಾರರು, ನೇಕಾರರು, ಬಡಗಿ ಗಳು, ಉಪ್ಪು ಕೆಲಸಗಾರರು, ಇಟ್ಟಿಗೆ ಗೂಡು ಮತ್ತು ಕಲ್ಲಿನ ಕೆಲಸಗಾರರು, ಕ್ವಾರಿಗಳ ಕಾರ್ಮಿಕರು, ಸಾಮಿಲ್ ಕೆಲಸಗಾರರು, ಗೃಹ ಕಾರ್ಮಿಕರು, ಕ್ಷೌರಿಕರು, ತರಕಾರಿ ಮತ್ತು ಹಣ್ಣು ಮಾರಾಟಗಾರರು, ಪತ್ರಿಕೆ ಮಾರಾಟಗಾರರು, ರಿಕ್ಷಾ ಎಳೆಯುವವರು, ಆಟೋ ಚಾಲಕರು, ರೇಷ್ಮೆ ಕೃಷಿ ಕಾರ್ಮಿಕರು, ಟ್ಯಾನರಿ ಕೆಲಸಗಾರರು, ಗೃಹ ಸೇವಕರು, ಬೀದಿ ಬದಿ ವ್ಯಾಪಾರಿಗಳು, ನರೇಗಾ ಉದ್ಯೋಗ ಖಾತ್ರಿ ಯೋಜನೆಯವರು, ಆಶಾ ಕಾರ್ಯಕರ್ತರು, ಹಾಲು ಹಾಕುವ ರೈತರು, ವಲಸೆ ಕಾರ್ಮಿಕರು ಸೇರುತ್ತಾರೆ.

ಅಸಂಘಟಿತ ಕಾರ್ಮಿಕರ ರಾಷ್ಟ್ರೀಯ ಡೇಟಾಬೇಸ್‌ನಲ್ಲಿ ನೊಂದಣಿ ಯಾಗಲು, ಮೇಲಿನ ಅಸಂಘಟಿತ ಕಾರ್ಮಿಕ ವರ್ಗಗಳಲ್ಲಿ ಕೆಲಸ ಮಾಡುತ್ತಿದ್ದು, ವಯಸ್ಸು 16ರಿಂದ 59 ವಷರ್ದೊಳಗಿರಬೇಕು. ಆದಾಯ ತೆರಿಗೆ ಪಾವತಿಸುವವ ರಾಗಿರಬಾರದು. ಇಎಸ್‌ಐಸಿ ಹಾಗೂ ಇಪಿಎಫ್‌ಒ ಸದಸ್ಯರಾಗಿರಬಾರದು.

ಅಸಂಘಟಿತ ಕಾರ್ಮಿಕರ ರಾಷ್ಟ್ರೀಯ ಡೇಟಾಬೇಸ್‌ನಲ್ಲಿ, ಸಂಘಟಿತ ವಲಯ ದಲ್ಲಿ ತೊಡಗಿರುವವರು ನೊಂದಣಿಯಾಗಲು ಅವಕಾಶವಿಲ್ಲ. ಏಕೆಂದರೆ ಸಂಘಟಿತ ವಲಯವು ಖಾಸಗಿ ಅಥವಾ ಸಾರ್ವಜನಿಕ ವಲಯದ ಕೆಲಸಗಾರ ರನ್ನು ಒಳಗೊಂಡಿರುತ್ತದೆ. ಅವರು ನಿಯಮಿತ ವೇತನ, ಭತ್ಯೆಗಳು ಮತ್ತು ಇತರ ಪ್ರಯೋಜನಗಳನ್ನು ಅಲ್ಲದೇ ರಜೆಗಳ ಮತ್ತು ಸಾಮಾಜಿಕ ಭದ್ರತೆ ಸೇರಿದಂತೆ ಭವಿಷ್ಯನಿಧಿ ಮತ್ತು  ಗ್ರಾಚ್ಯುಟಿಯನ್ನು ಪಡೆಯುತ್ತಾರೆ.

ಅಸಂಘಟಿತ ಕಾರ್ಮಿಕರ ರಾಷ್ಟ್ರೀಯ ಡೇಟಾಬೇಸ್‌ನಲ್ಲಿ ನೊಂದಣಿಯಾಗಲು ಕಾರ್ಮಿಕರು ಯಾವುದೇ ಶುಲ್ಕ ಪಾವತಿಸುವ ಅಗತ್ಯವಿಲ್ಲ. ತಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಮತ್ತು ಮೊಬೈಲ್‌ನೊಂದಿಗೆ ತಮ್ಮ ಸಮೀಪದ ಯಾವುದೇ ಸಾಮಾನ್ಯ ಸೇವಾ ಕೇಂದ್ರದಲ್ಲಿ ನೊಂದಣಿ ಮಾಡಿ ಕೊಳ್ಳಬಹುದು. ನೊಂದಣಿ ಮಾಡಿಕೊಂಡ ಕಾರ್ಮಿಕರಿಗೆ ಎ4 ಅಳತೆಯ ನೊಂದಣಿ ಪತ್ರ ನೀಡಲಾಗುವುದು.

''ಉಡುಪಿ ಜಿಲ್ಲೆಯಲ್ಲಿ ಸುಮಾರು 15,000ಕ್ಕೂ ಅಧಿಕ ಅಸಂಘಟಿತ ಕಾರ್ಮಿಕರಿದ್ದು, ಈ ಕಾರ್ಮಿಕರು ಅಸಂಘಟಿತ ಕಾರ್ಮಿಕರ ರಾಷ್ಟ್ರೀಯ ಡೇಟಾ ಬೇಸ್‌ನಲ್ಲಿ ನೊಂದಣಿಯಾಗುವ ಮೂಲಕ, ಕೇಂದ್ರ ಮತ್ತು ರಾಜ್ಯ ಸರಕಾರಗಳು ಅಸಂಘಟಿತ ಕಾರ್ಮಿಕರಿಗೆ ನೀಡುವ ಹಲವು ಸೌಲಭ್ಯಗಳನ್ನು ಪಡೆಯ ಬಹುದಾಗಿದೆ. ಜಿಲ್ಲೆಯಲ್ಲಿ 160ಕ್ಕೂ ಅಧಿಕ ಸಾಮಾನ್ಯ ಸೇವಾ ಕೇಂದ್ರಗಳಿದ್ದು, ಜಿಲ್ಲೆಯ ಕಾರ್ಮಿಕರು ತಮ್ಮ ಸಮೀಪದ ಸೇವಾ ಕೇಂದ್ರಗಳಲ್ಲಿ ನೊಂದಣಿ ಮಾಡಿ ಕೊಂಡು ಯೋಜನೆಯ ಪ್ರಯೋಜನ ಪಡೆಯಬೇಕು'' ಎನ್ನುತ್ತಾರೆ ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X