ಕಾರಿಂಜದಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ಪ್ರಕರಣ: ಕ್ಯಾಂಪಸ್ ಫ್ರಂಟ್ ಪ್ರತಿಭಟನೆ

ಬಂಟ್ವಾಳ, ಆ.27: ಪ್ರವಾಸಕ್ಕೆ ಬಂದ ವಿದ್ಯಾರ್ಥಿಗಳ ಮೇಲೆ ಕಾರಿಂಜದಲ್ಲಿ ನಡೆದ ಹಲ್ಲೆ ಖಂಡಿಸಿ ಕ್ಯಾಂಪಸ್ ಫ್ರಂಟ್ ಬಂಟ್ವಾಳ ವತಿಯಿಂದ ಬಿ.ಸಿ.ರೋಡಿನ ಕೈಕಂಬದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನುದ್ದೇಶಿಸಿ ಮಾತನಾಡಿದ ರಾಜ್ಯ ಸಮಿತಿ ಸದಸ್ಯ ಫಹದ್ ಅನ್ವರ್, ಜಿಲ್ಲೆಯಲ್ಲಿ ಪೊಲೀಸರು ಸಂಘಪರಿವಾರ ಗೂಂಡಾಗಳ ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ ಹಾಕದಿದ್ದಲ್ಲಿ ಇದರ ವಿರುದ್ಧ ಬೃಹತ್ ಜನ ಚಳವಳಿಯು ಅನಿವಾರ್ಯಗಬಹುದು. ಅಲ್ಲದೆ ಈ ಸಂದರ್ಭ ಸಂತ್ರಸ್ತರು ಯಾವುದೇ ಬೆದರಿಕೆಗಳಿಗೆ ಹೆದರದೆ ಇವರ ವಿರುದ್ಧ ಕಾನೂನು ಸಮರಕ್ಕೆ ಮುಂದಾಗಬೇಕು ಎಂದು ಹೇಳಿದರು.
ಜಿಲ್ಲಾ ಮುಖಂಡರಾದ ರಿಯಾಝ್ ಅಂಕತಡ್ಕ ಮಾತನಾಡಿ, ಕಾರಿಂಜದಲ್ಲಿ ನಡೆದ ಘಟನೆಯಲ್ಲಿ ಅನ್ಯಾಯಕ್ಕೊಳಗಾದ ವಿದ್ಯಾರ್ಥಿಗಳಿಗೆ ಪೊಲೀಸರು ನ್ಯಾಯ ಒದಗಿಸಬೇಕು. ದುಷ್ಕರ್ಮಿಗಳ ವಿರುದ್ಧ ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಗೂಂಡಾ ಕಾಯ್ದೆ ದಾಖಲಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ನಾಯಕಿ ಗೌಸಿಯಾ ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಅಶ್ಫಾಕ್, ಕಾರ್ಯದರ್ಶಿ ಐಮಾನ್, ರಿಫಾಝ್, ಮುಸ್ತಫಾ, ಸಫ್ವಾನ್ ಬಂಟ್ವಾಳ, ಹಾಯಿಝ್ ಫರಂಗಿಪೇಟೆ ಹಾಗೂ ಮತ್ತಿತರು ಉಪಸ್ಥಿತರಿದ್ದರು. ಹಂದಾನ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.






.jpeg)

.jpeg)



