Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತುಮಕೂರು: ಅಂತರ್ ಜಾತಿ ದಂಪತಿಗೆ ಸಾಮಾಜಿಕ...

ತುಮಕೂರು: ಅಂತರ್ ಜಾತಿ ದಂಪತಿಗೆ ಸಾಮಾಜಿಕ ಬಹಿಷ್ಕಾರ

ಕಾನೂನು ಸಚಿವರ ಕ್ಷೇತ್ರದಲ್ಲಿಯೇ ಒಂದು ಅಮಾನವೀಯ ಘಟನೆ

ವಾರ್ತಾಭಾರತಿವಾರ್ತಾಭಾರತಿ27 Aug 2021 10:31 PM IST
share
ತುಮಕೂರು: ಅಂತರ್ ಜಾತಿ ದಂಪತಿಗೆ ಸಾಮಾಜಿಕ ಬಹಿಷ್ಕಾರ

ತುಮಕೂರು: ಅಂತರ್ ಜಾತಿಯ ಮದುವೆಯಾಗಿ, ಗ್ರಾಮದಲ್ಲಿಯೇ ನೆಮ್ಮದಿಯಿಂದ ಬದುಕುತ್ತಿರುವುದನ್ನು ಸಹಿಸಲಾರದೆ ದಂಪತಿಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಕ್ಷೇತ್ರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರ ಸ್ವ ಕ್ಷೇತ್ರ ಚಿಕ್ಕನಾಯಕನಹಳ್ಳಿ ತಾಲೂಕು ಹುಳಿಯೂರು ಹೋಬಳಿ ಕೋರಗೆರೆ ಗ್ರಾಮದಲ್ಲಿ ನಡೆದಿದೆ.

ಕೋರಗೆರೆ ಗ್ರಾಮದ ದಲಿತ ಸಮುದಾಯಕ್ಕೆ ಸೇರಿದ ನಾಗರಾಜು ಮತ್ತು ಶೆಟ್ಟಬಣಜಿಗ ಸಮುದಾಯದ ಶಶಿಕಲ ಎಂಬುವವರು ಪರಸ್ವರ ಪ್ರೀತಿಸಿ, 2007ರಲ್ಲಿಯೇ ಎರಡು ಮನೆಯವರ ವಿರೋಧದದ ನಡುವೆಯೂ ಮದುವೆಯಾಗಿದ್ದರು. ಮದುವೆಯ ನಂತರ ತಮ್ಮ ಗ್ರಾಮದಲ್ಲಿಯೇ ವಾಸಿಸುತಿದ್ದು, ಮೊದಲಿಗೆ ಕೂಲಿ, ನಾಲಿ ಮಾಡಿ ಜೀವನ ನಡೆಸುತಿದ್ದ ಕುಟುಂಬ ನಂತರ, ತಮಗಿದ್ದ ಜಮೀನಿನಲ್ಲಿಯೇ ಸಣ್ಣ ಮನೆ ನಿರ್ಮಿಸಿಕೊಂಡು, ಕೊಳವೆಬಾವಿ ಕೊರೆಸಿ, ಜಮೀನು ಅಭಿವೃದ್ದಿಪಡಿಸಿ ಕೊಂಡು, ತಾವಾಯಿತು, ತಮ್ಮ ಭೂಮಿಯಾಯಿತು ಎಂದು ನೆಮ್ಮದಿಯ ಬದುಕು ಕಾಣುವ ಸ್ಥಿತಿಗೆ ಬಂದಿದೆ. 

ಕೆಳ ಜಾತಿಯ ಹುಡುಗನೊಬ್ಬನನ್ನು ಮದುವೆಯಾಗಿ ನಮ್ಮೂರಿನಲ್ಲಿಯೇ ನೆಲೆಸಿ, ಸಿರಿವಂತರಾಗುತ್ತಿರುವುದನ್ನು ಸಹಿಸದ ಗ್ರಾಮದ ಮೇಲ್ಜಾತಿಯ ಜನರು,ಕಳೆದ ಎರಡು ತಿಂಗಳ ಹಿಂದೆ ಸದರಿ ಕುಟುಂಬದ ವಿರುದ್ದ ದಲಿತರನ್ನೇ ಎತ್ತಿಕಟ್ಟಿ, ವಿನಾಕಾರಣ ನಾಗರಾಜನ ಮೇಲೆ ಹಲ್ಲೆ ನಡೆಸಿದ್ದೇ ಅಲ್ಲದೆ,ಗ್ರಾಮದಿಂದ ಬಹಿಷ್ಕಾರ ಹಾಕಿದ್ದಾರೆ.ನಾಗರಾಜು ಕುಟುಂಬಕ್ಕೆ ಕುಡಿಯಲು ನೀರು ಕೊಡದೆ, ಗ್ರಾಮದ ಅಂಗಡಿಗಳಲ್ಲಿ ಮನೆಗೆ ಅಗತ್ಯವಿರುವ ಸಾಮಾನುಗಳನ್ನು ನೀಡದೆ ತೊಂದರೆ ಕೊಡುತ್ತಿದ್ದಾರೆ. ಈ ಸಂಬಂಧ ಹುಳಿಯಾರು ಪೊಲೀಸ್ ಠಾಣೆಗೆ ದೂರು ನೀಡಿದರೂ ತೆಗೆದುಕೊಳ್ಳುತ್ತಿಲ್ಲ.ಚಿಕ್ಕನಾಯಕನಹಳ್ಳಿ, ತಿಪಟೂರು ಪೊಲೀಸ್ ಠಾಣೆಗೆ ದೂರು ನೀಡಿದರೂ ನ್ಯಾಯ ಸಿಗದ ಹಿನ್ನೆಲೆಯಲ್ಲಿ ಕಳೆದೆರಡು ದಿನಗಳ ಹಿಂದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಅವರು ನ್ಯಾಯ ಕೊಡಿಸುವ ಭರವಸೆ ನೀಡಿದ್ದಾರೆ.ಇನ್ನೇರಡು ದಿನಗಳಲ್ಲಿ ಗ್ರಾಮಕ್ಕೆ ಖುದ್ದು ಭೇಟಿ ನೀಡುವುದಾಗಿ ತಿಳಿಸಿದ್ದಾರೆ ಎಂದು ನಾಗರಾಜು ಪತ್ನಿ ಶಶಿಕಲ ಮಾಧ್ಯಮದವರ ಮುಂದೆ ತಮ್ಮ ಅಳಲು ತೋಡಿಕೊಂಡರು.

ಅಂತರಜಾತಿಯ ವಿವಾಹವಾಗಿ,ಯಾರಿಗೂ ತೊಂದರೆ ಕೊಡದೆ, ಗ್ರಾಮದಲ್ಲಿಯೇ ಬದುಕುತ್ತಿರುವುದನ್ನು ಮೇಲ್ವರ್ಗದ ಜನರಿಗೆ ಸಹಿಸಲು ಆಗುತ್ತಿಲ್ಲ. ದಲಿತರನ್ನೇ ಎತ್ತಿಕಟ್ಟಿ ತೊಂದರೆ ನೀಡುತ್ತಿದ್ದಾರೆ. ನಮಗೆ ಇಬ್ಬರು ಗಂಡು ಮಕ್ಕಳಿದ್ದು, ಇರುವ ಜಮೀನು ಬಿಟ್ಟು ಎಲ್ಲಿಗೆ ಹೋಗಬೇಕು.ನಾವು ನಮ್ಮದಿಯಿಂದ ನಮ್ಮ ಜಮೀನಿನಲ್ಲಿಯೇ ಬದುಕುವಂತಹ ಅವಕಾಶವನ್ನು ಜಿಲ್ಲಾಡಳಿತ ನೀಡಬೇಕೆಂಬುದು ನಮ್ಮ ಮನವಿಯಾಗಿದೆ ಎಂದರು.

ಸಾಮಾಜಿಕ ಬಹಿಷ್ಕಾರಕ್ಕೆ ಒಳಗಾದ ನಾಗರಾಜು ಮಾತನಾಡಿ,ಕಳೆದ 14 ವರ್ಷಗಳಿಂದ ನಾವಾಯಿತು, ನಮ್ಮ ಕುಟುಂಬವಾಯಿತು ಎಂದು ಜೀವನ ನಡೆಸುತ್ತಿದ್ದೇವೆ.ಆದರೆ ದಲಿತನೊಬ್ಬ ಕೊಳವೆ ಬಾವಿ ಕೊರೆಯಿಸಿ,ಜಮೀನು ಅಭಿವೃದ್ದಿ ಪಡಿಸಿರುವುದನ್ನು ಸಹಿಸಲಾಗದೆ.ನಮಗೆ ಸರಿಸಮನಾಗಿ ಬದುಕುತಿದ್ದಾರೆ ಎಂದು ಇಲ್ಲ,ಸಲ್ಲದ ವಿಚಾರಗಳಿಗೆ ಜಗಳ ತೆಗೆದು ಕಿರುಕುಳ ನೀಡುತಿದ್ದಾರೆ ಎಂದು ಆರೋಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X