Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭೀಮಾಕೋರೆಗಾಂವ್ ಪ್ರಕರಣ: ಜೈಲು...

ಭೀಮಾಕೋರೆಗಾಂವ್ ಪ್ರಕರಣ: ಜೈಲು ಅಧಿಕಾರಿಗಳಿಂದ ಬಂಧಿತರು ಬಂಧುಗಳು, ವಕೀಲರಿಗೆ ಬರೆದ ಪತ್ರಗಳ ನಕಲು; ವರದಿ

ವಾರ್ತಾಭಾರತಿವಾರ್ತಾಭಾರತಿ27 Aug 2021 11:02 PM IST
share

ಭೋಪಾಲ್, ಆ.27: ತಮ್ಮನ್ನು ಬಂಧನದಲ್ಲಿರಿಸಲಾಗಿದ್ದ ಮುಂಬೈಯ ತಲೋಜಾ ಜೈಲಿನಲ್ಲಿ ಅಧಿಕಾರಿಯೊಬ್ಬರು, ತಾವು ತಮ್ಮ ಕುಟುಂಬಿಕರು ಹಾಗೂ ವಕೀಲರಿಗೆ ಬರೆದ ಪತ್ರಗಳನ್ನು ಸ್ಕಾನ್ ಮಾಡುತ್ತಿದ್ದರು ಹಾಗೂ ಅವುಗಳ ಪ್ರತಿಗಳನ್ನು ಇಟ್ಟುಕೊಳ್ಳುತ್ತಿದ್ದರೆಂದು ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾದ ಹತ್ತು ಮಂದಿ ಮಾನವಹಕ್ಕು ಹೋರಾಟಗಾರರು ಆರೋಪಿಸಿದ್ದಾರೆಂದು ದಿ ಹಿಂದೂ ಪತ್ರಿಕೆ ವರದಿ ಮಾಡಿದೆ.

ಇದೊಂದು ಆಕ್ರಮ ರಾಜಕೀಯ ಸೆನ್ಸಾರ್‌ಶಿಪ್ ಆಗಿದೆಯೆಂದು ಆರೋಪಿಸಿ ಬಂಧಿತ ಮಾನವಹಕ್ಕುಹೋರಾಟಗಾರರಾದ ಆನಂದ್ ತೇಲ್ತುಂಬ್ಡೆ, ಅರುಣ್ ಫೆರೇರಾ, ಗೌತಮ್ ನವ್ಲಾಖಾ, ವೆರ್ನೊಮ್ ಗೊನ್ಸಾಲ್ವಿಸ್, ಸುಧೀರ್ ಧಾವಳೆ, ಮಹೇಶ್ ರಾವತ್, ರೋನಾ ವಿಲ್ಸನ್, ಸಾಗರ್ ಗೋರ್ಖೆ, ಸುರೇಂದ್ರ ಗಾಡ್ಲಿಂಗ್ ಹಾಗೂ ರಮೇಶ್ ಗೈಚೋರ್ ಅವರು ಮಹಾರಾಷ್ಟ್ರ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್ ಅವರಿಗೆ ಪತ್ರಬರೆದಿದ್ದಾರೆ.

2018ರಲ್ಲಿ ಪುಣೆ ಸಮೀಪದ ಭೀಮಾಕೋರೆಗಾಂವ್ ಗ್ರಾಮದ ಬಳಿಕ ಜಾತಿ ಹಿಂಸಾಚಾರ ನಡೆಸಲು ಸಂಚುಹೂಡಿದ್ದಾರೆಂಬ ಆರೋಪದಲ್ಲಿ 16 ಮಂದಿಯನ್ನು ಮಹಾರಾಷ್ಟ್ಕ ಪೊಲೀಸರು ಬಂಧಿಸಿದ್ದರು. ಅವರಲ್ಲಿ 14 ಮಂದಿಯನ್ನು ಮಹಾರಾಷ್ಟ್ರದ ಜೈಲಿನಲ್ಲಿ ಕಠಿಣವಾದ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧನದಲ್ಲಿರಿಸಲಾಗಿದೆ.

ಆರೋಪಿಗಳಲ್ಲೊಬ್ಬನಾದ ಬುಡಕಟ್ಟು ಹಕ್ಕುಗಳ ಹೋರಾಟಗಾರ ಸ್ಟಾನ್‌ಸ್ವಾಮಿ ತೀವ್ರ ಅನಾರೋಗ್ಯದ ಹೊರತಾಗಿಯೂ ಜಾಮೀನು ಬಿಡುಗಡೆ ನಿರಾಕರಿಸಲಾಗಿತ್ತು. ಅವರು ಈ ವರ್ಷದ ಜುಲೈನಲ್ಲಿ ಕಸ್ಟಡಿಯಲ್ಲಿರುವಾಗಲೇ ಸಾವನ್ನಪ್ಪಿದ್ದರು. 81 ವರ್ಷ ವಯಸ್ಸಿನ ಇನ್ನೋರ್ವ ತೆಲುಗು ಕವಿ ವರವರರಾವ್ ಅವರಿಗೆ ವೈದ್ಯಕೀಯ ಕಾರಣಗಳಿಗಾಗಿ ಈ ವರ್ಷದ ಫೆಬ್ರವರಿಯಲ್ಲಿ ಜಾಮೀನು ನೀಡಲಾಗಿತ್ತು.

ತಾವು ಬರೆದಿದ್ದ ಕೆಲವು ಪತ್ರಗಳನ್ನು ಪ್ರಾಸಿಕ್ಯೂಶನ್ ಜೊತೆ ಪೊಲೀಸರು ಹಂಚಿಕೊಂಡಿದ್ದಾರೆಂದು ತಾವು ಭಾವಿಸಿರುವುದಾಗಿ ಈ ಹತ್ತು ಮಂದಿ ಸಾಮಾಜಿಕ ಕಾರ್ಯಕರ್ತರು ಮಹಾರಾಷ್ಟ್ರ ಸಚಿವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಇದರಿಂದಾಗಿ ತಾವು ಬರೆದಿರುವ ಪತ್ರಗಳು ಅವುಗಳ ಗಮ್ಯಸ್ಥಾನವನ್ನು ತಲುಪಲು ಅನಗತ್ಯ ವಿಳಂಬವಾಗುತ್ತಿದೆಯೆಂದು ಅವರು ಹೇಳಿದ್ದಾರೆ.

ಜೈಲಿನಲ್ಲಿ ಬರೆದ ಬರಹಗಳಿಗಾಗಿ ತೇಲ್ತುಂಬ್ಡೆ, ಗೈಚೊರ್ ಹಾಗೂ ಫೆರೇರಾ ಅವರಿಗೆ ತಲೋಜಾ ಜೈಲಿನ ಪೊಲೀಸ್ ಅಧೀಕ್ಷಕ ಕೌಸ್ತುಭ್ ಕುರ್ಲೇಕರ್ ನೋಟಿಸ್ ಜಾರಿಗೊಳಿಸಿದ್ದಾರೆಂದು ಅವರು ತಿಳಿಸಿದರು.

ಎರಡು ಲೇಖನಗಳಿಗಾಗಿ ಡಾ.ಆನಂದ್‌ಗೆ ಹಾಗೂ ಅಂಬೇಡ್ಕರ್‌ವಾದಿ ಮತ್ತು ಸಾಂಸ್ಕೃತಿಕ ಹೋರಾಟಗಾರ ವೀರ ಸಾಥಿದಾರ್‌ಗೆ ಶ್ರದ್ಧಾಂಜಲಿಯಾಗಿ ಕವನವನ್ನು ಬರೆದ ಗೈಚೊರ್‌ಗೆ ಕುರ್ಲೇಕರ್ ನೋಟಿಸ್ ಜಾರಿಗೊಳಿಸಿದ್ದರೆಂದು ಪತ್ರದಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X