ದ.ಕ. ಜಿಲ್ಲೆಯಲ್ಲಿ ಸಿಇಟಿ ಪರೀಕ್ಷೆ ಆರಂಭ
![ದ.ಕ. ಜಿಲ್ಲೆಯಲ್ಲಿ ಸಿಇಟಿ ಪರೀಕ್ಷೆ ಆರಂಭ ದ.ಕ. ಜಿಲ್ಲೆಯಲ್ಲಿ ಸಿಇಟಿ ಪರೀಕ್ಷೆ ಆರಂಭ](https://www.varthabharati.in/sites/default/files/images/articles/2021/08/28/304346-1630130412.jpg)
ಮಂಗಳೂರು, ಆ.28: ಪ್ರಸಕ್ತ ಸಾಲಿನ ವೃತ್ತಿ ಶಿಕ್ಷಣದ ಸಾಮಾನ್ಯ ಪ್ರವೇಶ (ಸಿಇಟಿ) ಪರೀಕ್ಷೆಯು ಇಂದು ಆರಂಭಗೊಂಡಿದ್ದು, ರವಿವಾರವೂ ಪರೀಕ್ಷೆ ನಡೆಯಲಿದೆ.
ಮಂಗಳೂರಿನ 10 ಸಹಿತ ಜಿಲ್ಲೆಯ 19 ಪರೀಕ್ಷಾ ಕೇಂದ್ರಗಳಲ್ಲಿ ಬೆಳಗ್ಗೆ 10:30ಕ್ಕೆ ಆರಂಭಗೊಂಡಿದೆ. ಇಂದು ಮಧ್ಯಾಹ್ನ 2:30ಕ್ಕೂ ಪರೀಕ್ಷೆ ನಡೆಯಲಿದೆ.
ಜಿಲ್ಲೆಯಲ್ಲಿ ಇಂದು ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿದ್ದರೂ ಕೂಡಾ ಅಭ್ಯರ್ಥಿಗಳಿಗೆ ಪ್ರವೇಶ ಪತ್ರದೊಂದಿಗೆ ಪರೀಕ್ಷೆಗೆ ಹಾಜರಾಗಲು ಅವಕಾಶ ಕಲ್ಪಿಸಲಾಗಿದೆ. ಕೋವಿಡ್-19 ಮಾರ್ಗಸೂಚಿಯಂತೆ ಪರೀಕ್ಷೆ ನಡೆಸಲಾಗುತ್ತಿದೆ.
ರವಿವಾರ ಮಂಗಳೂರಿನ 2 ಪರೀಕ್ಷಾ ಕೇಂದ್ರಗಳಲ್ಲಿ ಕನ್ನಡ ಭಾಷಾ ಪರೀಕ್ಷೆಯು ಪೂ.11:30ಕ್ಕೆ ಆರಂಭಗೊಳ್ಳಲಿದೆ ಎಂದು ಅಪರ ಜಿಲ್ಲಾಧಿಕಾರಿ ತಿಳಿಸಿದ್ದಾರೆ.