Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕ್ರೀಡಾಪಟು ಪಾಕ್ ಅಥವಾ ಬೇರೆ ಯಾವ...

ಕ್ರೀಡಾಪಟು ಪಾಕ್ ಅಥವಾ ಬೇರೆ ಯಾವ ದೇಶದವರಾಗಲಿ ಅವರನ್ನು ಗೌರವಿಸಿ: ಚೋಪ್ರಾ ಬೆಂಬಲಿಸಿದ ಬಜರಂಗ್ ಪುನಿಯಾ

ಕ್ರೀಡಾಪಟುಗಳನ್ನು ರಾಜಕೀಯಕ್ಕೆ ಬಳಸಿ ದ್ವೇಷ ಹರಡುವುದನ್ನು ಒಪ್ಪುವುದಿಲ್ಲ ಎಂದ ಸಾಕ್ಷಿ ಮಲಿಕ್

ವಾರ್ತಾಭಾರತಿವಾರ್ತಾಭಾರತಿ28 Aug 2021 3:28 PM IST
share
ಕ್ರೀಡಾಪಟು ಪಾಕ್ ಅಥವಾ ಬೇರೆ ಯಾವ ದೇಶದವರಾಗಲಿ ಅವರನ್ನು ಗೌರವಿಸಿ: ಚೋಪ್ರಾ ಬೆಂಬಲಿಸಿದ ಬಜರಂಗ್ ಪುನಿಯಾ

ಹೊಸದಿಲ್ಲಿ: ಒಲಿಂಪಿಕ್ಸ್  ಚಾಂಪಿಯನ್ ನೀರಜ್ ಚೋಪ್ರಾ ತನ್ನ ಹೆಸರನ್ನು "ಮತ್ತಷ್ಟು  ಆಪಪ್ರಚಾರ ಹಾಗೂ  ಕೊಳಕು ಕಾರ್ಯಸೂಚಿಗೆ" ಬಳಸದಂತೆ ಜನರನ್ನು ಒತ್ತಾಯಿಸಿದ ಒಂದು ದಿನದ ನಂತರ ಟೋಕಿಯೊ ಗೇಮ್ಸ್ ಪದಕ ವಿಜೇತ ಬಜರಂಗ್ ಪುನಿಯಾ ಸೇರಿದಂತೆ ಸಹ ಒಲಿಂಪಿಯನ್ ಗಳು ಚೋಪ್ರಾ ಬೆಂಬಲಕ್ಕೆ ನಿಂತಿದ್ದಾರೆ. ಕ್ರೀಡೆಯನ್ನು ತಾರತಮ್ಯ ಮಾಡಲು ಮಾಧ್ಯಮವಾಗಿ ಬಳಸಬಾರದು ಎಂದು ಅವರು ಆಗ್ರಹಿಸಿದ್ದಾರೆ.

"ಕ್ರೀಡಾಪಟು ಪಾಕಿಸ್ತಾನದವರಾಗಲಿ ಅಥವಾ ಯಾವುದೇ ದೇಶದವರಾಗಲಿ ಅವರು ತಮ್ಮ ರಾಷ್ಟ್ರವನ್ನು ಪ್ರತಿನಿಧಿಸುತ್ತಾರೆ. ಆತ ಮೊದಲು ಕ್ರೀಡಾಪಟು. ಅವರು ಪಾಕಿಸ್ತಾನದವರು ಎಂಬ ಕಾರಣಕ್ಕೆ ಅವರ ವಿರುದ್ಧ ಏನಾದರೂ ಹೇಳುವುದು ಸರಿಯಲ್ಲ. ಕ್ರೀಡಾಪಟುಗಳಿಗೆ ಗೌರವ ಇರಬೇಕು’’ ಎಂದು ಚೋಪ್ರಾ ಜಾವೆಲಿನ್ ನಲ್ಲಿ ಚಿನ್ನ ಗೆದ್ದ ದಿನವೇ  ಕುಸ್ತಿಯ 65 ಕೆಜಿ ತೂಕದ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿರುವ ಕುಸ್ತಿಪಟು ಬಜರಂಗ್ ‘The Indian Express’ ಗೆ ತಿಳಿಸಿದರು.

"ನಾನು ನೀರಜ್ ಅವರ ವೀಡಿಯೊವನ್ನು ನೋಡಿಲ್ಲ, ಆದರೆ ತಾರತಮ್ಯ ಮಾಡುವ ಬದಲು ಒಗ್ಗಟ್ಟಾಗಿ ಉಳಿಯುವುದು ಹೇಗೆ ಎಂದು ಕ್ರೀಡೆ ನಮಗೆ ಕಲಿಸುತ್ತದೆ. ನಾನು ರಷ್ಯಾ, ಅಮೆರಿಕದ ಕುಸ್ತಿಪಟುಗಳನ್ನು ಭೇಟಿಯಾದಾಗ, ಅದು ಯಾವಾಗಲೂ ತುಂಬಾ ಸೌಹಾರ್ದಯುತವಾಗಿರುತ್ತದೆ. ನಾವು ಪ್ರತಿಸ್ಪರ್ಧಿಗಳೆಂದು ಅನಿಸುವುದಿಲ್ಲ.  ನಾವೆಲ್ಲರೂ ಸಹೋದರರಂತೆ.  ಸ್ಪರ್ಧಾತ್ಮಕ ಮನೋಭಾವವು ಮ್ಯಾಟ್ ಮೇಲೆ ಮಾತ್ರ ಇರುತ್ತದೆ, ”ಎಂದು ಬಜರಂಗ್ ಹೇಳಿದರು.

ಚೋಪ್ರಾ ಹೇಳಿಕೆಗೆ ದೇಶದ ಕ್ರೀಡಾಪಟುಗಳಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ರಿಯೋ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ವಿಜೇತೆ ಕುಸ್ತಿಪಟು ಸಾಕ್ಷಿ ಮಲಿಕ್, ಟೇಬಲ್ ಟೆನಿಸ್ ಆಟಗಾರ ಶರದ್ ಕಮಲ್ ಈ ಘಟನೆಯು ನಮ್ಮನ್ನು ವಿಚಲಿತಗೊಳಿಸಿದೆ ಎಂದಿದ್ದಾರೆ.
"ಕ್ರೀಡಾಪಟುಗಳನ್ನು ವಿವಾದಕ್ಕೆ ಎಳೆದು ತರುವುದು ಹಾಗೂ ರಾಜಕೀಯ ಕಾರಣಕ್ಕೆ ಬಳಸುವುದು ಹಾಗೂ ದ್ವೇಷವನ್ನು ಹರಡುವುದನ್ನು  ನಾನು ಸಂಪೂರ್ಣವಾಗಿ ಒಪ್ಪುವುದಿಲ್ಲ.  ಭಾರತೀಯ ಅತ್ಲೀಟ್ ಗಳನ್ನು ಬೆಂಬಲಿಸಿ. ಮೈದಾನದೊಳಗಿನ ಎದುರಾಳಿ, ಮೈದಾನದ ಹೊರಗೂ ವೈರಿ ಆಗಿರುವುದಿಲ್ಲ ಎನ್ನುವುದನ್ನು ಕ್ರೀಡಾಭಿಮಾನಿಗಳು ಅರ್ಥಮಾಡಿಕೊಳ್ಳಬೇಕೆಂದು" ಸಾಕ್ಷಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X