ಆ. 30ಕ್ಕೆ ಸಚಿವ ಸುನೀಲ್ರೊಂದಿಗೆ ‘ತಿಂಗಳ ಮಾಧ್ಯಮ ಸಂವಾದ’
ಉಡುಪಿ, ಆ.28: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪ್ರೆಸ್ ಕ್ಲಬ್ ಸಹಯೋಗದಲ್ಲಿ ಪತ್ರಿ ತಿಂಗಳು ನಡೆಸುವ ‘ತಿಂಗಳ ಮಾಧ್ಯಮ ಸಂವಾದ’ ಕಾರ್ಯಕ್ರಮದಲ್ಲಿ ಈ ಬಾರಿ ಅತಿಥಿಯಾಗಿ ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ಪಾಲ್ಗೊಳ್ಳಲಿದ್ದಾರೆ.
ಆ.30ರ ಅಪರಾಹ್ನ 12 ಗಂಟೆಗೆ ಉಡುಪಿ ಪತ್ರಿಕಾ ಭವನದಲ್ಲಿ ನಡೆಯುವ ಈ ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಪತ್ರಕರ್ತರು ಭಾಗವಹಿಸಲು ಅವಕಾಶವಿರುತ್ತದೆ ಎಂದು ಉಡುಪಿ ಜಿಲ್ಲಾ ಕಾರ್ಯ ನಿರತ ಪತ್ರರ್ತರ ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.
Next Story