ಅಪಘಾತ; ತಂಡಗಳ ಮಧ್ಯೆ ಘರ್ಷಣೆ: ಮೂವರ ಬಂಧನ
ಮಂಗಳೂರು, ಆ. 28: ಕಾವೂರು ಜಂಕ್ಷನ್ ಸಮೀಪ ಕಾರೊಂದು ಸ್ಕೂಟರಿಗೆ ಢಿಕ್ಕಿಯಾದ ವಿಚಾರದಲ್ಲಿ ಎರಡು ತಂಡಗಳ ಮಧ್ಯೆ ಗುರುವಾರ ರಾತ್ರಿ ನಡೆದ ವಾಗ್ವಾದ, ಘರ್ಷಣೆಗೆ ಸಂಬಂಧಿಸಿ ಕಾವೂರು ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಕಾವೂರು ಕೊರ್ದಬ್ಬು ದೈವಸ್ಥಾನ ಸಮೀಪ ಕಾರೊಂದು ಸ್ಕೂಟರಿಗೆ ಢಿಕ್ಕಿಯಾಗಿದೆ. ಈ ವೇಳೆ ಕಾರು ಚಾಲಕ ಮತ್ತು ಸ್ಕೂಟರ್ ಸವಾರನ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಇದೇ ವಿಚಾರ ವಿಕೋಪಕ್ಕೆ ತೆರಳಿ ಸ್ಥಳದಲ್ಲಿ ಜನ ಜಮಾಯಿಸಿದ್ದು, ಮತ್ತಷ್ಟು ಗೊಂದಲಕ್ಕೆ ಕಾರಣವಾಯಿತು.
ವಿಷಯ ತಿಳಿದ ಕೂಡಲೇ ಕಾವೂರು ಪೊಲೀಸರು ಸ್ಥಳಕ್ಕಾಗಮಿಸಿ ಲಾಠಿ ಬೀಸಿ ಎಲ್ಲರನ್ನೂ ಚದುರಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಿದ ಕಾವೂರು ಪೊಲೀಸರು ಕುಂಜತ್ತಬೈಲ್ನ ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗಳಿಗೆ 15ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
Next Story