ಮೈಸೂರು ದಸರಾ: ಸೆ.3ಕ್ಕೆ ಸಿಎಂ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ
ಬೆಂಗಳೂರು, ಆ. 28: ನಾಡಹಬ್ಬ ಮೈಸೂರು ದಸರಾ-2021 ಅನ್ನು ಆಚರಿಸುವ ಸಂಬಂಧ ಸೆಪ್ಟೆಂಬರ್ 3ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ಸಭೆಯನ್ನು ವಿಧಾನಸೌಧದಲ್ಲಿ ಏರ್ಪಡಿಸಲಾಗಿದೆ.
ಸೆ.3ರ ಸಂಜೆ 4ಗಂಟೆಗೆ ವಿಧಾನಸೌಧದ ಮೂರನೆ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ನಡೆಯಲಿರುವ ಸಭೆಯಲ್ಲಿ ಮೈಸೂರಿನ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಸ್ಥಳೀಯ ಶಾಸಕರು, ಮೈಸೂರಿನ ಮೇಯರ್ ಸೇರಿದಂತೆ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story