Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅವಿಶ್ವಾಸ ನಿರ್ಣಯ ಮಂಡನೆ ಎಚ್ಚರಿಕೆ...

ಅವಿಶ್ವಾಸ ನಿರ್ಣಯ ಮಂಡನೆ ಎಚ್ಚರಿಕೆ ಅವಾಸ್ತವಿಕ: ಲಿಬ್ಯಾದ ಹಂಗಾಮಿ ಪ್ರಧಾನಿ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ29 Aug 2021 10:54 PM IST
share

ಟ್ರಿಪೋಲಿ, ಆ.29: ಬಜೆಟ್ ಗೆ ಅನುಮೋದನೆ ನೀಡಲು ವಿಫಲವಾಗಿರುವ ಸಂಸತ್ತಿನ ಉಪಕ್ರಮವು ಸರಕಾರದ ಆಡಳಿತಾತ್ಮಕ ಕಾರ್ಯವನ್ನು ವಿಳಂಬಿಸಲಿದೆ ಎಂದು ಲಿಬ್ಯಾದ ಹಂಗಾಮಿ ಪ್ರಧಾನಿ ಅಬ್ದುಲ್ ಹಾಮಿದ್ ಡಿಬಿಹಾ ಹೇಳಿದ್ದಾರೆ. ಸರಕಾರ ಮಂಡಿಸಿದ್ದ ಬಜೆಟ್ಗೆ ಸಂಸತ್ನಲ್ಲಿ ಅನುಮೋದನೆ ಪಡೆದುಕೊಳ್ಳಲು ಪ್ರಧಾನಿ ವಿಫಲವಾದ ಬಳಿಕ ಲಿಬ್ಯಾದ ಆಡಳಿತಾರೂಡ ಮೈತ್ರಿ ಸರಕಾರದ ಪಕ್ಷಗಳ ನಡುವಿನ ಭಿನ್ನಾಭಿಪ್ರಾಯ ಮುನ್ನೆಲೆಗೆ ಬಂದಿದ್ದು ವಿಶ್ವಸಂಸ್ಥೆ ಬೆಂಬಲಿತ ಶಾಂತಿ ಮಾತುಕತೆಗೆ ಅಡ್ಡಿಯಾಗುವ ಸಾಧ್ಯತೆಯಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. 

ಸಂಸತ್ತಿನ ಚೇಂಬರ್ನಲ್ಲಿ ಹಾಜರಾಗಿ, ತನ್ನ ಸರಕಾರದ ಸಾಧನೆಯ ಕುರಿತ ಪ್ರಶ್ನೆಗೆ ಉತ್ತರಿಸಬೇಕು ಅಥವಾ ಅವಿಶ್ವಾಸ ನಿರ್ಣಯ ಎದುರಿಸಬೇಕು ಎಂದು ಸಂಸತ್ತಿನ ಸ್ಪೀಕರ್ ಆಗ್ವಿಲಾ ಸಾಲೇಹ್ ಕಳೆದ ವಾರ ಪ್ರಧಾನಿ ಅಬ್ದುಲ್ ಹಾಮಿದ್ ಗೆ ಸೂಚಿಸಿದ್ದರು. ತಮ್ಮ ನೇತೃತ್ವದ ಮೈತ್ರಿ ಸರಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಸಂಸತ್ತಿನ ಬೆದರಿಕೆ ಅವಾಸ್ತವಿಕ ಮತ್ತು ಹುರುಳಿಲ್ಲದ ಪ್ರಸ್ತಾವನೆಯಾಗಿದ್ದು , ಈ ವರ್ಷದ ಡಿಸೆಂಬರ್ನಲ್ಲಿ ನಡೆಸಲು ಉದ್ದೇಶಿಸಿರುವ ಚುನಾವಣೆಯನ್ನು ಭಂಗಗೊಳಿಸುವ ಉದ್ದೇಶದ್ದಾಗಿದೆ ಎಂದು ಅಬ್ದುಲ್ ಹಾಮಿದ್ ಹೇಳಿದ್ದಾರೆ. 

ಲಿಬ್ಯಾದಲ್ಲಿ ಸುದೀರ್ಘಾವಧಿಯಿಂದ ಅಧಿಕಾರದಲ್ಲಿದ್ದ ಮಮ್ಮರ್ ಗಡಾಫಿ 2011ರಲ್ಲಿ ನೇಟೊ ನೇತೃತ್ವದ ಪಡೆಗಳಿಂದ ಹತರಾದ ಬಳಿಕ ಆ ದೇಶದಲ್ಲಿ ರಾಜಕೀಯ ಅಸ್ಥಿರತೆ ನೆಲೆಸಿದೆ. ಇತ್ತೀಚಿನ ವರ್ಷಗಳಲ್ಲಿ ವಿಶ್ವಸಂಸ್ಥೆ ಮಾನ್ಯತೆ ನೀಡಿರುವ ಸರಕಾರ ಮತ್ತು ಪೂರ್ವಪ್ರಾಂತ್ಯದ ಸಂಸದರನ್ನೊಳಗೊಂಡ ರಾಜಕೀಯ ಸಂಘಟನೆಯ ಮಧ್ಯೆ ಭಿನ್ನಾಭಿಪ್ರಾಯ ತೀವ್ರಗೊಂಡ ಹಿನ್ನೆಲೆಯಲ್ಲಿ, ಈ ವರ್ಷದ ಡಿಸೆಂಬರ್ನಲ್ಲಿ ಚುನಾವಣೆ ನಡೆಸುವ ಷರತ್ತಿನೊಂದಿಗೆ ಅಬ್ದುಲ್ ಹಾಮಿದ್ ನೇತೃತ್ವದ ಹಂಗಾಮಿ ಸರಕಾರವನ್ನು ಸ್ಥಾಪಿಸಲಾಗಿದೆ. 

ಇದೀಗ, ಪೂರ್ವಪ್ರಾಂತ್ಯದ ಸಂಸದರು ಸರಕಾರ ಮಂಡಿಸಿರುವ ಬಜೆಟ್ ಗೆ ಅಪಸ್ವರ ಎತ್ತಿರುವುದರಿಂದ, ಚುನಾವಣೆ ಪ್ರಕ್ರಿಯೆ ಸುಸೂತ್ರವಾಗಿ ಸಾಗಲು ಸಮಸ್ಯೆಯಾಗಬಹುದು ಎಂದು ಮೂಲಗಳು ಹೇಳಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X