Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಲೆನಾಡು ರೈತರ ಹೋರಾಟ ಸಮಿತಿ...

ಮಲೆನಾಡು ರೈತರ ಹೋರಾಟ ಸಮಿತಿ ನೇತೃತ್ವದಲ್ಲಿ ಭೂಮಿ ಹಕ್ಕಿಗಾಗಿ ಶರಾವತಿ ಸಂತ್ರಸ್ಥರ ಬಹೃತ ಪ್ರತಿಭಟನೆ

ಮುಳುಗಡೆ ಸಂತ್ರಸ್ಥರ ಕೂಗು ನಿರಂತರವಾಗಿದ್ದರೂ ಸರ್ಕಾರ ಮಾತ್ರ ಮೌನ: ತೀ.ನಾ. ಶ್ರೀನಿವಾಸ್ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ30 Aug 2021 6:13 PM IST
share
ಮಲೆನಾಡು ರೈತರ ಹೋರಾಟ ಸಮಿತಿ ನೇತೃತ್ವದಲ್ಲಿ ಭೂಮಿ ಹಕ್ಕಿಗಾಗಿ ಶರಾವತಿ ಸಂತ್ರಸ್ಥರ ಬಹೃತ ಪ್ರತಿಭಟನೆ

ಶಿವಮೊಗ್ಗ: ಮುಳುಗಡೆ ಸಂತ್ರಸ್ಥ ರೈತರ ಬದುಕನ್ನು ಬೀದಿಗೆ ತಳ್ಳಿದ ಈ ಸರ್ಕಾರ ರೈತ ವಿರೋಧಿ ಸರ್ಕಾರವಾಗಿದೆ ಎಂದು ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ  ತೀ.ನಾ. ಶ್ರೀನಿವಾಸ್ ಆಕ್ರೋಶ ವ್ಯಕ್ತಪಡಿಸಿದರು.

ತೀರ್ಥಹಳ್ಳಿ ಪಟ್ಟಣದಲ್ಲಿ ಮಲೆನಾಡು ರೈತರ ಹೋರಾಟ ಸಮಿತಿ ಆಯೋಜಿಸಿದ್ದ ಶರಾವತಿ ಸಂತ್ರಸ್ಥರ ಭೂಮಿ ಹಕ್ಕಿಗಾಗಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದರು.

ದೇಶದ ಗಡಿ ಕಾಯುವ ಸೈನಿಕನಂತೆ, ಅನ್ನದಾತನ ಬದುಕು ಮುಖ್ಯ. ಹಲವು ದಶಕಗಳಿಂದ ಭೂ ಹಕ್ಕಿಗಾಗಿ ಸಂತ್ರಸ್ಥರ ಕೂಗು ನಿರಂತರವಾಗಿದ್ದರೂ ಸರ್ಕಾರ ಮಾತ್ರ ಮೌನವಾಗಿದೆ. ಇದು ಖಂಡನೀಯ ಎಂದರು.

ಶಿವಮೊಗ್ಗ ಜಿಲ್ಲೆಯಲ್ಲಿ ಸುಮಾರು 77,000 ರೈತರು ಅರಣ್ಯ ಹಕ್ಕು ಭೂಮಿ ಮಂಜೂರಾತಿ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಿ ಮಂಜೂರಾತಿಗಾಗಿ ಕಾಯುತ್ತಾ ಕುಳಿತಿದ್ದಾರೆ ಎಂದ ಅವರು, ಶರಾವತಿ ಮುಳುಗಡೆಯ ಬಗ್ಗೆ 1958ರಿಂದ 1964 ರವರೆಗೆ ಸುಮಾರು 64ರ ಸರ್ಕಾರಿ ಆದೇಶಗಳಾಗಿದ್ದರೂ  ತಹಶೀಲ್ದಾರ್ ಗಳು ಇಂತಹ ರೈತರಿಗೆ ಹಕ್ಕುಪತ್ರ ಮತ್ತು ಮಂಜೂರಾತಿ ನೀಡುತ್ತಿಲ್ಲ, ಕಾರಣ ಅರಣ್ಯಾಧಿಕಾರಿಗಳು ತಕರಾರನ್ನು ಹಾಕಿಕೊಂಡು ನ್ಯಾಯಾಲಯದಲ್ಲೂ ಸರಿಯಾಗಿ ವಾದ ಮಂಡನೆ ಮಾಡದೆ ತಪ್ಪು ಮಾಹಿತಿಯಿಂದ ರೈತರ ಹಿತಾಸಕ್ತಿ ವಿರುದ್ಧ ಆದೇಶಗಳು ಬಂದಿರುವುದು ದುರದೃಷ್ಟಕರ ಎಂದರು.

ಕಾಂಗ್ರೆಸ್ ಮುಖಂಡ ಡಾ.ಆರ್.ಎಂ.ಮಂಜುನಾಥ ಗೌಡ ಮಾತನಾಡಿ, ಶರಾವತಿ ವಿದ್ಯುತ್ ಯೋಜನೆಗಾಗಿ ತಮ್ಮ ಭೂಮಿ ಕಳೆದಕೊಂಡ ರೈತರನ್ನು ಈ ಸರ್ಕಾರ ಕಡೆಗಣಿಸಿದೆ. ಭೂ ಮಂಜೂರಾತಿಗಾಗಿ ಕಳೆದ ಐವತ್ತು ವರ್ಷಗಳಿಂದ ಶರಾವತಿ ಸಂತ್ರಸ್ಥರ ಸ್ಥಿತಿ ಶೋಚನೀಯವಾಗಿದೆ,ಸರ್ಕಾರ ಶೀಘ್ರದಲ್ಲಿ ಈ ಸಂತ್ರಸ್ಥರಿಗೆ ನ್ಯಾಯ ಕೊಡದಿದ್ದರೆ ಜಿಲ್ಲೆಯಾದ್ಯಂತ ಉಗ್ರ ಹೋರಾಟ ಕೈಗೊಳ್ಳಬೇಕಾಗುತ್ತದೆ ಎಂದುಹೇಳಿದರು.

ಶರಾವತಿ ವಿದ್ಯುತ್ ಯೋಜನೆಗೆ ಸಾಗರ, ಹೊಸನಗರ ತಾಲ್ಲೂಕಿನಲ್ಲಿ ಸುಮಾರು 1 ಲಕ್ಷ ಎಕರೆ ಭೂಮಿಯು ಮುಳುಗಡೆಯಾಗಿ ಅಂದು ರೈತರು ತಮ್ಮ ಬದುಕನ್ನು ಕಳೆದುಕೊಂಡಿದ್ದರು. ನೂರಾರು ರೈತರನ್ನು ಸರ್ಕಾರವು ಪುನರ್ವಸತಿ ಯೋಜನೆಯಲ್ಲಿ ಜಮೀನು  ಕೊಡುವುದಾಗಿ ಆಶ್ವಾಸನೆ ನೀಡಿ ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆ ಹೋಬಳಿಯ ಅನೇಕ ಗ್ರಾಮಗಳಲ್ಲಿ ಹಣಗೆರೆ, ಸಂಕಲಾಪುರ ಗ್ರಾಮಗಳಲ್ಲಿ ತಂದು ಬಿಟ್ಟಿದ್ದರು .ಅದೇ ರೀತಿ ಅನೇಕ ರೈತರನ್ನು ಶಿವಮೊಗ್ಗ ತಾಲ್ಲೂಕು ಮತ್ತು ಶಿಕಾರಿಪುರ ತಾಲ್ಲೂಕುಗಳಲ್ಲಿ ಜಮೀನು  ಕೊಡುವ ಆಶ್ವಾಸನೆ ಮೇರೆಗೆ ರೈತರು ಸ್ಥಳಾಂತರ ಮಾಡಿದ್ದರು .ಅರುವತ್ತು ವರ್ಷಗಳು ಕಳೆದರೂ ಇಂದಿಗೂ ರೈತರಿಗೆ ಭೂಮಿಯ ಹಕ್ಕುಪತ್ರ, ಮಂಜೂರಾತಿ ನೀಡದೆ ಸಂತ್ರಸ್ಥರ ಬದುಕನ್ನು ಅತಂತ್ರ ಸ್ಥಿತಿಗೆ ತಳ್ಳಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮನೆ ಕಟ್ಟಿಕೊಂಡ ನಿವೇಶನಗಳಿಗೂ ಸಹ ಹಕ್ಕುಪತ್ರಗಳು ಇರುವುದಿಲ್ಲ. ಅಂತಹ ಜನರು ವಾಸಿಸುವ ಸ್ಥಳಗಳಿಗೆ ರಸ್ತೆ, ಕುಡಿಯುವ ನೀರು ,ಹಳ್ಳಗಳ ಸಂಪರ್ಕ ಸೇತುವೆಗಳು’ ಶಾಲೆಗಳು,ವಿದ್ಯುತ್ ಸಂಪರ್ಕ  ಇಲ್ಲದೆ ಇನ್ನಿಲ್ಲದ ತೊಂದರೆ ಗಳನ್ನು  60 ವರ್ಷಗಳಿಂದಲೂ ಅನುಭವಿಸುತ್ತಾ ಬಂದಿದ್ದಾರೆ .ಈ ಬಗ್ಗೆ ಸರಕಾರವು ಸುಮಾರು 9600ಎಕ್ರೆ ಭೂಮಿಯನ್ನು ಕಂದಾಯ ಇಲಾಖೆಗೆ ವರ್ಗಾಯಿಸಲು ನಿರ್ಧಾರವನ್ನು ಮಾಡಿದ್ದರೂ ಅರಣ್ಯ ಇಲಾಖೆ ನಿರಂತರ ಇನ್ನಿಲ್ಲದ ತಕರಾರು  ಹಾಕಿಕೊಂಡು ಕುಳಿತಿರುವುದು ಅಮಾನವೀಯ ವರ್ತನೆ ಎಂದರು.

ಈ ಪ್ರತಿಭಟನೆಯಲ್ಲಿ ಶಿವಮೊಗ್ಗದ ಕಾಂಗ್ರೆಸ್ ಮುಖಂಡ ಬಿ.ಎ.ರಮೇಶ್ ಹೆಗಡೆ, ಯಡೂರು ರಾಜಾರಾಮ ಹೆಗಡೆ, ಡಾ.ಸುಂದರೇಶ್ ಮಾತನಾಡಿದರು.  

ಹಣಗೆರೆ ಗ್ರಾಮ ಪಂಚಾಯಿತಿಯ ಸದಸ್ಯರಾದ ಸಂಕ್ಲಾಪುರದ ರೈತ ನಾಯಕ ಸುಧೀರ್ ,ದೇವಾನಾಯ್ಕ್ ಸಂಕ್ಲಾಪುರ ,ಗೋಪಾಲನಾಯ್ಕ್ ಸಂಕ್ಲಾಪುರ, ಗಂಗಾಧರ್, ರಘು ವಿಠಲ್ ಸಂಕಲಾಪುರ, ತೀರ್ಥಹಳ್ಳಿ ಪ.ಪಂ.ಸದಸ್ಯರು ಮುಂತಾದವರಿದ್ದರು.

ತಹಶೀಲ್ದಾರ್ ಡಾ.ಶ್ರೀಪಾದ್ ಮೂಲಕ ಪ್ರತಿಭಟನಾಕಾರರು ಸರ್ಕಾರಕ್ಕೆ ಮನವಿ ಸಲ್ಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X