Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ರೈತರ ವಿರೋಧದ ನಡುವೆ ವಸತಿ...

ಚಿಕ್ಕಮಗಳೂರು: ರೈತರ ವಿರೋಧದ ನಡುವೆ ವಸತಿ ಯೋಜನೆ ಜಾರಿಗೆ ಹುನ್ನಾರ; ಆರೋಪ

ರೈತ ಸಂಘ, ವಿವಿಧ ರಾಜಕೀಯ ಪಕ್ಷಗಳ ನೇತೃತ್ವದಲ್ಲಿ ಸಂತ್ರಸ್ಥರಿಂದ ಧರಣಿ

ವಾರ್ತಾಭಾರತಿವಾರ್ತಾಭಾರತಿ30 Aug 2021 7:46 PM IST
share
ಚಿಕ್ಕಮಗಳೂರು: ರೈತರ ವಿರೋಧದ ನಡುವೆ ವಸತಿ ಯೋಜನೆ ಜಾರಿಗೆ ಹುನ್ನಾರ; ಆರೋಪ

ಚಿಕ್ಕಮಗಳೂರು, ಆ.30: ನಗರಾಭಿವೃದ್ದಿ ಪ್ರಾಧಿಕಾರವು ವಿವಿಧ ಗ್ರಾಮಗಳಲ್ಲಿ ರೈತರ ಕೃಷಿ ಜಮೀನುಗಳನ್ನು ವಶಕ್ಕೆ ಪಡೆದು ಹೈಟೆಕ್ ವಸತಿ ಬಡಾವಣೆ ನಿರ್ಮಾಣಕ್ಕೆ ಮುಂದಾಗಿದ್ದು, ಇದಕ್ಕೆ ರೈತರ ವಿರೋಧವಿದ್ದರೂ ಜಿಲ್ಲಾಡಳಿತ ನೋಟಿಸ್ ನೀಡುವ ಮೂಲಕ ಒತ್ತಾಯ ಪೂರ್ವಕವಾಗಿ ಜಮೀನು ಕಿತ್ತುಕೊಳ್ಳಲು ಹುನ್ನಾರ ಮಾಡಿದೆ ಎಂದು ಆರೋಪಿಸಿ ರೈತಸಂಘ ಹಾಗೂ ವಿವಿಧ ಪಕ್ಷಗಳ ನೇತೃತ್ವದಲ್ಲಿ ರೈತರು ನಗರದಲ್ಲಿ ಧರಣಿ ನಡೆಸಿದರು.

ನಗರದ ಆಜಾದ್ ಪಾರ್ಕ್‍ನಲ್ಲಿ ಸಮಾವೇಶಗೊಂಡ ನೂರಾರು ರೈತರು ನಗರಾಭಿವೃದ್ಧಿ ಪ್ರಾಧಿಕಾರ, ನಗರಸಭೆ, ಜಿಲ್ಲಾಡಳಿತ ಹಾಗೂ ಶಾಸಕ ಸಿ.ಟಿ.ರವಿ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.

ಈ ವೇಳೆ ಮಾತನಾಡಿದ ಕಾಂಗ್ರೆಸ್, ಜೆಡಿಎಸ್, ಸಿಪಿಐ, ಬಿಎಸ್ಪಿ ಹಾಗೂ ರೈತ ಸಂಘದ ಮುಖಂಡರು, ಚಿಕ್ಕಮಗಳೂರು ನಗರಸಭೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಕ್ಷೇತ್ರದ ಶಾಸಕ ಸಿ.ಟಿ.ರವಿ ಅಣತಿಯಂತೆ ಜನವಿರೋಧಿ ಯೋಜನೆಗಳನ್ನು ಜಾರಿ ಮಾಡಲು ಮುಂದಾಗಿದ್ದಾರೆ. ರೈತರು ಹಾಗೂ ಸಾರ್ವಜನಿಕರಿಗೆ ಬೇಡವಾದ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಮುಂದಾಗಿದ್ದಾರೆ. ಚಿಕ್ಕಮಗಳೂರು ನಗರ ಸಮೀಪದ ಹಿರೇಮಗಳೂರು, ಲಕ್ಷ್ಮೀಪುರ, ಕನ್ನೇನಹಳ್ಳಿ, ಬಂಡಿಹಳ್ಳಿ, ದೊಡ್ಡಕುರುಬರಹಳ್ಳಿ, ಕುಪ್ಪೇನಹಳ್ಳಿ, ಮಲ್ಲೇನಹಳ್ಳಿ ವ್ಯಾಪ್ತಿಯಲ್ಲಿ ಸಿಡಿಎ ವತಿಯಿಂದ ವಸತಿ ಬಡಾವಣೆ ನಿರ್ಮಾಣಕ್ಕಾಗಿ ರೈತರ ಜಮೀನುಗಳನ್ನು ವಶಕ್ಕೆ ಪಡೆಯಲು ನೋಟಿಸ್ ನೀಡಲಾಗುತ್ತಿದೆ. ಆದರೆ ರೈತರು ತಮ್ಮ ಕೃಷಿ ಭೂಮಿಯನ್ನು ಬಡಾವಣೆ ನಿರ್ಮಾಣ ಯೋಜನೆಗೆ ನೀಡದಿರಲು ತೀರ್ಮಾನಿಸಿದ್ದಾರೆ. ಈ ಸಂಬಂಧ ಆ.4ರಂದು ಸಿಡಿಎ, ನಗರಸಭೆ ಹಾಗೂ ಜಿಲ್ಲಾಧಿಕಾರಿಗೂ ಲಿಖಿತ ಮನವಿ ನೀಡಿದ್ದಾರೆ ಎಂದರು.

ಈ ಗ್ರಾಮಗಳ ವ್ಯಾಪ್ತಿಯಲ್ಲಿ ಸಣ್ಣ ಹಿಡುವಳಿಗಳನ್ನು ಹೊಂದಿರುವ ರೈತರು ಹೆಚ್ಚಾಗಿದ್ದು, ಜಮೀನು ಮಾರಿಕೊಂಡರೇ ಜೀವನ ನಿರ್ವಹಣೆ ಕಷ್ಟ ಎಂಬುದನ್ನು ಮನಗಂಡು ರೈತರು ಜಮೀನು ಮಾರಾಟ ಮಾಡಲು ಸಾಮೂಹಿಕವಾಗಿ ನಿರ್ಣಯಕೈಗೊಂಡಿದ್ದಾರೆ. ಆದರೆ ಜಿಲ್ಲಾಡಳಿತ, ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ನಗರಸಭೆ ಅಧಿಕಾರಿಗಳು ಹಠಕ್ಕೆ ಬಿದ್ದು ಜಮೀನು ವಶಪಡಿಸಿಕೊಳ್ಳಲು ಹುನ್ನಾರ ಮಾಡಿದ್ದಾರೆ. ಇದಕ್ಕಾಗಿ ಜಿಲ್ಲಾಧಿಕಾರಿ ಮೂಲಕ ಪದೇ ಪದೇ ನೋಟಿಸ್ ನೀಡಲಾಗುತ್ತಿದೆ. ರೈತರ ವಿರೋಧದ ನಡುವೆಯೂ ಜಮೀನು ವಶಕ್ಕೆ ಮುಂದಾದಲ್ಲಿ ಉಗ್ರ ಹೋರಾಟಕ್ಕಿಳಿಯುವುದಾಗಿ ಎಚ್ಚರಿಸಿದ ಮುಖಂಡರು, ವಸತಿ ಯೋಜನೆಗಳ ಹೆಸರಿನಲ್ಲಿ ಶಾಸಕ ಸಿ.ಟಿ.ರವಿ ಹಾಗೂ ಅವರ ಹಿಂಬಾಲಕರು ದಡ್ಡು ಮಾಡುವ ದಂಧೆಗೆ ಇಳಿದಿದ್ದಾರೆ. ರೈತರಿಗೆ ನೀರಾವರಿ ಸೌಲಭ್ಯಗಳನ್ನು ಕೊಡಿಸಿ ಎಂದರೆ ರೈತರ ಕೃಷಿ ಜಮೀನನ್ನೇ ಕಿತ್ತುಕೊಳ್ಳಲು ಸಂಚು ಮಾಡಿದ್ದಾರೆ ಎಂದು ಆರೋಪಿಸಿದರು.

ಚಿಕ್ಕಮಗಳೂರು ತಾಲೂಕಿನ ಬಯಲು ಭಾಗದಲ್ಲಿ ನೀರಾವರಿ ಸೌಲಭ್ಯ ಇಲ್ಲ. ನೀರಾವರಿ ಯೋಜನೆಗಳಾದ ಕರಗಡ, ಮಳಲೂರು ನೀರಾವರಿ ಯೋಜನೆಗಳು ನೆನೆಗುದಿಗೆ ಬಿದ್ದಿವೆ. ರೈತರು ಕೃಷಿ ಮಾಡಲು ಸಾಧ್ಯವಾಗುತ್ತಿಲ್ಲ. ಮಳೆ ನೀರು, ಕೆರೆ ನೀರು ಬಳಸಿಕೊಂಡು ಸಣ್ಣ ರೈತರು ಅಲ್ಪಸ್ವಲ್ಪ ಬೆಳೆ ಬೆಳೆದು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಆದರೆ ಜನಪ್ರತಿನಿಧಿಗಳು ರೈತರ ಜಮೀನು ಕಿತ್ತುಕೊಂಡು ಬೀದಿಪಾಲು ಮಾಡಲು ಯೋಜನೆ ರೂಪಿಸುತ್ತಿರುವುದು ಜನವಿರೋಧಿ ನಿಲುವಾಗಿದೆ. ಯಾವುದೇ ಕಾರಣಕ್ಕೂ ವಸತಿ ಯೋಜನೆಗೆ ಜಮೀನು ನೀಡಲ್ಲ. ಜಿಲ್ಲಾಡಳಿತ ರೈತರ ಮನವಿಗೆ ಸ್ಪಂದಿಸಬೇಕು. ರಾಜಕಾರಣಿಗಳ ಒತ್ತಡಕ್ಕೆ ಮಣಿದು ಜಮೀನು ವಶಕ್ಕೆ ಮುಂದಾದಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದರು ಇದೇ ವೇಳೆ ಎಚ್ಚರಿಸಿದರು.

ಧರಣಿ ವೇಳೆ ವಿಪ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಅಂಶುಮಂತ್, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಚ್.ಎಚ್.ದೇವರಾಜ್, ಸಿಪಿಐ ಜಿಲ್ಲಾ ಕಾರ್ಯದರ್ಶಿ ರೇಣುಕಾರಾಧ್ಯ, ಬಿಎಸ್ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಕೃಷ್ಣ, ರೈತ ಸಂಘದ ಕೆ.ಕೆ.ಕೃಷ್ಣೇಗೌಡ, ಮಹಿಳಾ ಘಟಕದ ವನಶ್ರೀ ಮತ್ತಿತರರು ಮಾತನಾಡಿದರು. ರೈತ ಸಂಘ ಹಾಗೂ ವಿವಿಧ ಪಕ್ಷಗಳ ಮುಖಂಡರಾದ ಹಿರೇಮಗಳೂರು ಪುಟ್ಟಸ್ವಾಮಿ, ಗುರುಶಾಂತಪ್ಪ, ರವೀಶ್ ಕ್ಯಾತನಬೀಡು, ಮರ್ಲೆ ಅಣ್ಣಯ್ಯ, ಬಿ.ಅಮ್ಜದ್, ಹರೀಶ್ ಮಿತ್ರ, ರಸೂಲ್‍ಖಾನ್ ಸೇರಿದಂತೆ ನೂರಾರು ರೈತರು ಧರಣಿಯಲ್ಲಿ ಭಾಗವಹಿಸಿದ್ದರು. ಧರಣಿ ಬಳಿಕ ಜಿಲ್ಲಾಡಳಿತಕ್ಕೆ ಈ ಸಂಬಂಧ ಮನವಿ ಪತ್ರ ಸಲ್ಲಿಸಲಾಯಿತು.

ಜನಪ್ರತಿನಿಧಿಗಳು ಹಾಗೂ ಸಿಡಿಎ ಅಧಿಕಾರಿಗಳು, ಸದಸ್ಯರಿಗೆ ನಗರದಲ್ಲಿ ಹೊಸ ವಸತಿ ಬಡಾವಣೆಗಳನ್ನು ನಿರ್ಮಿಸಲೇ ಬೇಕಿದ್ದರೇ ಸಿ.ಟಿ.ರವಿ ಸಂಬಂಧಿಗಳು, ಹಿಂಬಾಲಕರ ವಶದಲ್ಲಿರುವ ಸರಕಾರಿ ಜಮೀನು, ಕೃಷಿ ಜಮೀನುಗಳನ್ನು ಖುಲ್ಲಾ ಮಾಡಿಸಿ ಅಲ್ಲಿ ಯೋಜನೆಯನ್ನು ಕಾರ್ಯಗತ ಮಾಡಲಿ. ಸಣ್ಣ ರೈತರ ಬದುಕಿಗೆ ಆಸರೆಯಾಗಿರುವ ಕೃಷಿ ಜಮೀನುಗಳನ್ನು ವಶಕ್ಕೆ ಪಡೆಯುವುದು ರೈತ ವಿರೋಧಿ ನಿಲುವಾಗಿದೆ. ರೈತರ ಜಮೀನು ವಶಕ್ಕೆ ಮುಂದಾದಲ್ಲಿ ಉಗ್ರ ಹೋರಾಟ ಅನಿವಾರ್ಯ.
- ಎಚ್.ಎಚ್.ದೇವರಾಜ್, ಜೆಡಿಎಸ್ ರಾಜ್ಯ ಉಪಾಧ್ಯಕ್ಷ


ಬಿಜೆಪಿ ಸರಕಾರಗಳು ರಾಜ್ಯ ಹಾಗೂ ಕೇಂದ್ರದಲ್ಲಿ ಜನವಿರೋಧಿ ಯೋಜನೆಗಳ ಮೂಲಕವೇ ಕುಖ್ಯಾತಿ ಪಡೆಯುತ್ತಿದೆ. ರೈತ ಪರ ಯೋಜನೆಗಳನ್ನು ಜಾರಿ ಮಾಡುವ ಬದಲು ಕೃಷಿಯನ್ನೇ ನಾಶ ಮಾಡುವ ಯೋಜನೆಗಳನ್ನು ಜಾರಿ ಮಾಡಲಾಗುತ್ತಿದೆ. ಕೃಷಿ ತಿದ್ದುಪಡಿ ಮಸೂದೆ, ಭೂ ಸುಧಾರಣೆ ಮಸೂದೆ ತಿದ್ದುಪಡಿ ಮೂಲಕ ರೈತರ ಜಮೀನುಗಳನ್ನು ಬಂಡವಾಳಶಾಹಿಗಳಿಗೆ ಒಪ್ಪಿಸಲು ಹುನ್ನಾರ ಮಾಡಲಾಗಿದೆ. ಇಂತಹ ಯೋಜನೆಗಳಿಂದಾಗಿ ರೈತರು ಹಾಗೂ ಕೃಷಿ ಕ್ಷೇತ್ರ ಶೀಘ್ರ ನಾಶವಾಗಲಿದೆ.
- ಡಾ.ಅಂಶುಮಂತ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X