Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆ. 31ರಂದು ಉಡುಪಿಯಲ್ಲಿ ಸಾಂಪ್ರದಾಯಿಕ...

ಆ. 31ರಂದು ಉಡುಪಿಯಲ್ಲಿ ಸಾಂಪ್ರದಾಯಿಕ ಮೊಸರು ಕುಡಿಕೆ; ಅರ್ಘ್ಯ ಪ್ರದಾನ ಮಾಡಿದ ಅದಮಾರುಶ್ರೀ

ವಾರ್ತಾಭಾರತಿವಾರ್ತಾಭಾರತಿ30 Aug 2021 9:30 PM IST
share
ಆ. 31ರಂದು ಉಡುಪಿಯಲ್ಲಿ ಸಾಂಪ್ರದಾಯಿಕ ಮೊಸರು ಕುಡಿಕೆ; ಅರ್ಘ್ಯ ಪ್ರದಾನ ಮಾಡಿದ ಅದಮಾರುಶ್ರೀ

ಉಡುಪಿ, ಆ.30: ಉಡುಪಿ ಶ್ರೀಕೃಷ್ಣ ಮಠದಲ್ಲಿ ಸೋಮವಾರ ಶ್ರೀಕೃಷ್ಣ ಜನ್ಮಾಷ್ಟಮಿ ಸಾಂಪ್ರದಾಯಿಕ ರೀತಿಯಲ್ಲಿ ಸರಳವಾಗಿ ನಡೆದಿದ್ದು, ಮಧ್ಯರಾತ್ರಿ 12:15ಕ್ಕೆ ಪರ್ಯಾಯ ಅದಮಾರು ಮಠದ ಶ್ರೀಈಶಪ್ರಿಯ ತೀರ್ಥ ಸ್ವಾಮೀಜಿ ಕೃಷ್ಣನಿಗೆ ಅರ್ಘ್ಯ ಪ್ರದಾನ ಮಾಡಿದರು.

ಉಡುಪಿಯಲ್ಲಿರುವ ಉಳಿದ ಸ್ವಾಮೀಜಿಗಳು ಅವರಿಗೆ ಜೊತೆ ನೀಡಿದರು. ಬಳಿಕ ಮಠದ ಎರಡು ಕಡೆಗಳಲ್ಲಿ ಭಕ್ತರು ಹಾಗೂ ಸಾರ್ವಜನಿಕರಿಗೆ ಅರ್ಘ್ಯ ಪ್ರದಾನಕ್ಕೆ ಅವಕಾಶ ಮಾಡಿಕೊಡ ಲಾಯಿತು.

ಕೊರೋn ಹಿನ್ನೆಲೆಯಲ್ಲಿ ಸರಕಾರದ ಮಾರ್ಗಸೂಚಿಯಂತೆ ಸಾರ್ವಜನಿಕ ವಾದ ಆಚರಣೆಗೆ ಅವಕಾಶವಿಲ್ಲದ ಕಾರಣ ಈ ಬಾರಿಯೂ ಕೃಷ್ಣ ಮಠ ಸರಳವಾದ ಜನ್ಮಾಷ್ಟಮಿ ಕಾರ್ಯಕ್ರಮ ಹಮ್ಮಿಕೊಂಡಿದ್ದರೆ ನಾಳೆ ಶ್ರೀಕೃಷ್ಣ ಲೀಲೋತ್ಸವ ಆಚರಣೆ ಸಹ ಸಾಂಪ್ರದಾಯಿಕ ರೀತಿಯಲ್ಲಿ ನಡೆಯಲಿದೆ.

ಇಂದು ಬೆಳಗ್ಗೆ ಮಹಾಪೂಜೆಗೆ ಮೊದಲು ಪರ್ಯಾಯ ಶ್ರೀಈಶಪ್ರಿಯ ತೀರ್ಥರು ಕೃಷ್ಣ ದೇವರಿಗೆ ಲಕ್ಷ ತುಳಸಿ ಅರ್ಚನೆ ಮಾಡಿದರು. ಕಾಣಿಯೂರು ಮಠಾಧೀಶ ಶ್ರೀವಿದ್ಯಾವಲ್ಲಭತೀರ್ಥ ಸ್ವಾಮೀಜಿ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣನಿಗೆ ಬಾಲಕೃಷ್ಣನ ಅಲಂಕಾರ ಮಾಡಿದರು. ಇಂದು ಮಠದ ಮಧ್ವಮಂಟಪ ಹಾಗೂ ಸೂರ್ಯಶಾಲೆಯಲ್ಲಿ ಸ್ಯಾಕ್ಸೋಫೋನ್, ನಾಗಸ್ವರ, ಶಹನಾಯಿ ಮತ್ತು ಕೊಳಲು ವಾದನ ಕಚೇರಿಗಳು ನಡೆದವು.

ಮಹಾಪೂಜೆಯ ಬಳಿಕ ರಾತ್ರಿ ಪೂಜೆಗಾಗಿ ಉಂಡೆ ಕಟ್ಟುವುದಕ್ಕೆ ಪರ್ಯಾಯ ಶ್ರೀಗಳು ಚಾಲನೆ ನೀಡಿದರು. ಇವರೊಂದಿಗೆ ಅದಮಾರು ಹಿರಿಯ ಯತಿಗಳಾದ ಶ್ರೀವಿಶ್ವಪ್ರಿಯ ತೀರ್ಥ ಸ್ವಾಮೀಜಿ, ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಸ್ವಾಮೀಜಿ, ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭ ತೀರ್ಥ ಸ್ವಾಮೀಜಿ, ಪಲಿಮಾರು ಕಿರಿಯ ಯತಿ ಶ್ರೀವಿದ್ಯಾರಾಜೇಶ್ವರತೀರ್ಥ ಸ್ವಾಮೀಜಿ ಸಹ ಉಂಡೆ ಕಟ್ಟುವ ಕಾರ್ಯದಲ್ಲಿ ಕೈಜೋಡಿಸಿದರು.

ಶ್ರೀಕೃಷ್ಣ ಮಠವನ್ನು ಬಗೆಬಗೆಯ ಬಣ್ಣಗಳ, ಆಕಾರದ ಹೂವುಗಳಿಂದ ಆಕರ್ಷಕವಾಗಿ ಸಿಂಗರಿಸಲಾಗಿತ್ತು. ಇಂದು ಇಡೀ ದಿನ ದೇವರ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ನೀಡಲಾಗಿತ್ತು. ಅಷ್ಟಮಿ ಪ್ರಯುಕ್ತ ಭಕ್ತರಿಗೆ ಪ್ರಸಾದ ರೂಪದಲ್ಲಿ ಹಂಚಲು 40 ಸಾವಿರ ಚಕ್ಕುಲಿ ಮತ್ತು 80 ಸಾವಿರ ಉಂಡೆಗಳನ್ನು ತಯಾರಿಸಿ ಹಂಚಲು ಸಿದ್ಧವಾಗಿ ಇಡಲಾಗಿದೆ. ಅನ್ನಬ್ರಹ್ಮದಲ್ಲಿ 50ಕ್ಕೂ ಅಧಿಕ ಬಾಣಸಿಗರು ಚಕ್ಕುಲಿ, ಗುಂಡಿಟ್ಟು ಲಾಡು, ಅರಳುಂಡೆ, ನೆಲಕಡ್ಲೆ ಲಾಡು, ಹೆಸರಿಟ್ಟು ಲಾಡು, ಕಡ್ಲೆ ಹಾಗೂ ಎಳ್ಳು ಉಂಡೆ, ಶುಂಠಿ, ಗೋಡಂಬಿ ಲಾಡು ತಯಾರಿಸಿದರು.

ಮಂಗಳವಾರದ ಶ್ರೀಕೃಷ್ಣ ಲೀಲೋತ್ಸವದ ವೇಳೆ ಬಳಸುವ ಮೊಸರು ಕುಡಿಕೆಯ ಮಡಿಕೆಗಳಿಗೆ ಬ್ರಹ್ಮಾವರದ ಮಂಜುನಾಥ ಆಚಾರ್ಯ ಎಂದು ಸಂಗಡಿಗರು ಚಿತ್ರ, ರಂಗವಲ್ಲಿ ಬಿಡಿಸಿ ಸಿದ್ಧಪಡಿಸಿದರು. ಅಷ್ಟಮಿ ಹಬ್ಬದ ಸಂದರ್ಭದಲ್ಲಿ ಒಳ್ಳೆಯ ವ್ಯಾಪಾರವನ್ನು ನಿರೀಕ್ಷಿಸಿ ಹಾಸನ, ಚಿಕ್ಕಮಗಳೂರು ಸೇರಿದಂತೆ ಅನೇಕ ಜಿಲ್ಲೆಗಳಿಂದ ಬಂದಿದ್ದ ಹೂವಿನ ವ್ಯಾಪಾರಿಗಳು ಭಾರೀ ಮಳೆಯಿಂದಾಗಿ ನಿರಾಶೆ ಅನುಭವಿಸಿದರು. ಕೋವಿಡ್ ಕಾರಣದಿಂದ ರಥಬೀದಿಯಲ್ಲಿ ಜನ ಸಂಚಾರ ವಿರಳವಾಗಿದ್ದು, ಇದರೊಂದಿಗೆ ಸುರಿಯುತ್ತಿರುವ ಮಳೆಯೂ ಅವರ ನಿರೀಕ್ಷೆಗೆ ತಣ್ಣೀರೆರಚಿದೆ.

ನಾಳೆ ವಿಟ್ಲಪಿಂಡಿಗಾಗಿ ಮಠದ ಮುಂಭಾಗ ಹಾಗೂ ರಥಬೀದಿಯ ಸುತ್ತಲೂ ಗುರ್ಜಿಗಳನ್ನು ನಿರ್ಮಿಸಲಾಗಿದೆ. ಜನ್ಮಾಷ್ಟಮಿಯ ಪ್ರಮುಖ ಆಕರ್ಷಣೆಯಾದ ಈ ಮೊಸರು ಕುಡಿಕೆ ಒಡೆಯುವ ಕಾರ್ಯಕ್ರಮ ಈ ಬಾರಿ ಸಾಂಕೇತಿಕವಾಗಿ ನಡೆಯಲಿದೆ. ಇದರಲ್ಲಿ ಸಾರ್ವಜನಿಕರಿಗೆ ಭಾಗವಹಿಸಲು ಅವಕಾಶವಿಲ್ಲ. ಕೇವಲ ಮಠದ ಸಿಬ್ಬಂದಿಗಳು ಹಾಗೂ ಮೊಸರು ಕುಡಿಕೆಗಳನ್ನು ಒಡೆಯುವ ಗೋಪಾಲಕರಿಗೆ ಮಾತ್ರ ಭಾಗವಹಿಸಲು ಅವಕಾಶವಿದೆ.

 ಮಂಗಳವಾರ ಬೆಳಗ್ಗೆ 7:30ರಿಂದ ಮಧ್ಯಾಹ್ನ 1:00ರವರೆಗೆ, ಬಳಿಕ ಸಂಜೆ 5:00ರಿಂದ ಕೃಷ್ಣ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸುರಕ್ಷಿತಾ ಅಂತರವನ್ನು ಪಾಲಿಸಿ, ಸರಕಾರದ ಎಲ್ಲಾ ನಿಯಮಗಳನ್ನು ಪಾಲಿಸಿಕೊಂಡು ದೇವರ ದರ್ಶನ ಪಡೆಯಬಹುದು ಎಂದು ಶ್ರೀಮಠದ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X