Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ತಾಲಿಬಾನ್ ಗೆ ಎಲ್ಲಾ ದೇಶಗಳೂ ಸಕ್ರಿಯ...

ತಾಲಿಬಾನ್ ಗೆ ಎಲ್ಲಾ ದೇಶಗಳೂ ಸಕ್ರಿಯ ಮಾರ್ಗದರ್ಶನ ನೀಡಬೇಕು: ಚೀನಾ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ30 Aug 2021 9:45 PM IST
share
ತಾಲಿಬಾನ್ ಗೆ ಎಲ್ಲಾ ದೇಶಗಳೂ ಸಕ್ರಿಯ ಮಾರ್ಗದರ್ಶನ ನೀಡಬೇಕು: ಚೀನಾ ಆಗ್ರಹ

ಬೀಜಿಂಗ್, ಆ.30: ಅಫ್ಘಾನ್ ನಿಂದ ಅಮೆರಿಕದ ಸೇನಾಪಡೆಯ ವಾಪಸಾತಿಯಿಂದ ಆ ದೇಶದಲ್ಲಿ ಭಯೋತ್ಪಾದಕ ಗುಂಪುಗಳ ಪುನರುಜ್ಜೀವನಕ್ಕೆ ಅವಕಾಶ ಸಿಗಬಹುದು. ಈಗ ಅಫ್ಘಾನ್ ನ ಪರಿಸ್ಥಿತಿಯಲ್ಲಿ ಮೂಲಭೂತ ಬದಲಾವಣೆಗಳಾಗಿದ್ದು ಎಲ್ಲಾ ದೇಶಗಳೂ ತಾಲಿಬಾನ್ ನೊಂದಿಗೆ ಸಂಪರ್ಕ ಸಾಧಿಸಿ ಸಕ್ರಿಯ ಮಾರ್ಗದರ್ಶನ ನೀಡುವ ಅಗತ್ಯವಿದೆ ಎಂದು ಚೀನಾ ಹೇಳಿದೆ.

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕೆನ್ ಅವರೊಂದಿಗೆ ರವಿವಾರ ದೂರವಾಣಿ ಮೂಲಕ ಮಾತುಕತೆ ನಡೆಸಿದ ಸಂದರ್ಭ ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಅಫ್ಘಾನ್ ನಲ್ಲಿ ಹದಗೆಡುತ್ತಿರುವ ಪರಿಸ್ಥಿತಿ ಬಗ್ಗೆ ಚರ್ಚಿಸಿದರು ಎಂದು ಚೀನಾದ ಸರಕಾರಿ ಸ್ವಾಮ್ಯದ ಮಾಧ್ಯಮ ಕ್ಸಿನ್ಹುವಾ ವರದಿ ಮಾಡಿದೆ.

ಅಫ್ಘಾನಿಸ್ತಾನಕ್ಕೆ ತುರ್ತು ಅಗತ್ಯವಿರುವ ಆರ್ಥಿಕ, ಜೀವನಾಧಾರ ಹಾಗೂ ಮಾನವೀಯ ನೆರವು ಒದಗಿಸುವ ನಿಟ್ಟಿನಲ್ಲಿ, ಅಲ್ಲಿನ ನೂತನ ರಾಜಕೀಯ ವ್ಯವಸ್ಥೆ ಕ್ರಮಬದ್ಧವಾಗಿ ಆಡಳಿತ ನಡೆಸಲು, ಸಾಮಾಜಿಕ ಭದ್ರತೆ ಮತ್ತು ಸ್ಥಿರತೆ ಕಾಯ್ದುಕೊಳ್ಳಲು, ಕರೆನ್ಸಿಯ ಅಪವೌಲ್ಯ ಮತ್ತು ಹಣದುಬ್ಬರ ತಡೆಯಲು ಹಾಗೂ ಅಫ್ಘಾನ್ ನ ಮರುರಚನಾ ಪ್ರಕ್ರಿಯೆ ಶಾಂತರೀತಿಯಲ್ಲಿ ಮುಂದುವರಿಯುವ ನಿಟ್ಟಿನಲ್ಲಿ ಅಮೆರಿಕವು ಅಂತರಾಷ್ಟ್ರೀಯ ಸಮುದಾಯದೊಂದಿಗೆ ಕಾರ್ಯ ನಿರ್ವಹಿಸಬೇಕಾಗಿದೆ ಎಂದು ವಾಂಗ್ ಹೇಳಿದರು.

 ಅಫ್ಘಾನ್ ನಲ್ಲಿ ಉಗ್ರರ ಸಂಘಟನೆಗಳನ್ನು ನಾಶಗೊಳಿಸುವ ಗುರಿಯನ್ನು ಯುದ್ಧದಿಂದ ಸಾಧಿಸಲಾಗಲಿಲ್ಲ ಎಂಬುದನ್ನು ವಾಸ್ತವಾಂಶಗಳು ಮತ್ತೊಮ್ಮೆ ಸಾಬೀತುಪಡಿಸಿವೆ ಮತ್ತು ಅಲ್ಲಿಂದ ಅಮೆರಿಕ ಮತ್ತು ನೇಟೊ ಪಡೆಗಳ ವಾಪಸಾತಿಯ ಅವಸರದ ಉಪಕ್ರಮವು ಆ ದೇಶದಲ್ಲಿ ವಿವಿಧ ಉಗ್ರ ಸಂಘಟನೆಗಳು ಮತ್ತೆ ಸಂಘಟಿತವಾಗಲು ಅವಕಾಶ ನೀಡಿದೆ. ಸಾರ್ವಭೌಮತೆ ಮತ್ತು ಸ್ವಾತಂತ್ರ್ಯವನ್ನು ಗೌರವಿಸುವುದರೊಂದಿಗೆ ಭಯೋತ್ಪಾದನೆ ಮತ್ತು ಹಿಂಸಾಚಾರವನ್ನು ನಿಗ್ರಹಿಸಲು ಅಫ್ಘಾನ್ ಗೆ ನೆರವಾಗುವ ನಿಟ್ಟಿನಲ್ಲಿ ಅಮೆರಿಕ ಸಶಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ವಾಂಗ್ ಆಗ್ರಹಿಸಿದರು.

 ತಿಕ್ಕಾಟಕ್ಕಿಂತ ಮಾತುಕತೆ ಉತ್ತಮ ಮತ್ತು ಸಂಘರ್ಷಕ್ಕಿಂತ ಸಹಕಾರ ಉತ್ತಮ ಎಂಬ ನಿಲುವು ಚೀನಾದ್ದಾಗಿದೆ. ಅಮೆರಿಕವು ಚೀನಾದ ಬಗ್ಗೆ ತಳೆಯುವ ಧೋರಣೆಯನ್ನು ಆಧರಿಸಿ ಆ ದೇಶದೊಂದಿಗೆ ಚೀನಾದ ಸ್ನೇಹಸಂಬಂಧ ರೂಪುಗೊಳ್ಳಲಿದೆ. ಚೀನಾದೊಂದಿಗಿನ ದ್ವಿಪಕ್ಷೀಯ ಸಂಬಂಧವನ್ನು ಮತ್ತೆ ಹಳಿಗೆ ತರಲು ಅಮೆರಿಕ ಬಯಸುವುದಾದರೆ ಅವರು ಚೀನಾದ ವಿರುದ್ಧ ಕಣ್ಣುಮುಚ್ಚಿ ಮಾಡುತ್ತಿರುವ ಅಪಪ್ರಚಾರ ಮತ್ತು ದಾಳಿಯನ್ನು ಮೊದಲು ನಿಲ್ಲಿಸಬೇಕು, ಅಲ್ಲದೆ ಚೀನಾದ ಸಾರ್ವಭೌಮತೆ, ಭದ್ರತೆ ಮತ್ತು ಅಭಿವೃದ್ಧಿಯ ಹಿತಾಸಕ್ತಿಯನ್ನು ಕೀಳಂದಾಜಿಸುವುದನ್ನು ನಿಲ್ಲಿಸಬೇಕು ಎಂದು ವಾಂಗ್ ಇದೇ ಸಂದರ್ಭ ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಚೀನಾ, ರಶ್ಯಾ ಮತ್ತು ಪಾಕಿಸ್ತಾನಗಳು ಕಾಬೂಲ್ನಲ್ಲಿನ ತಮ್ಮ ರಾಯಭಾರಿ ಕಚೇರಿಯನ್ನು ಮುಚ್ಚಿಲ್ಲ. ಇತ್ತೀಚೆಗಷ್ಟೇ ಅಫ್ಘಾನ್ ಗೆ ಚೀನಾದ ರಾಯಭಾರಿ ವಾಂಗ್ ಯು ತಾಲಿಬಾನ್ ಅಧಿಕಾರಿಗಳೊಂದಿಗೆ ಪ್ರಥಮ ಸುತ್ತಿನ ರಾಜತಾಂತ್ರಿಕ ಮಾತುಕತೆ ನಡೆಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X