Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾತ್ರಿ ವೇಳೆ ಗಣೇಶ ಮೂರ್ತಿ ವಿಸರ್ಜನೆಗೆ...

ರಾತ್ರಿ ವೇಳೆ ಗಣೇಶ ಮೂರ್ತಿ ವಿಸರ್ಜನೆಗೆ ಅವಕಾಶ ಇಲ್ಲ: ನಿಯಮ ಪಾಲಿಸಲು ಕೊಡಗು ಜಿಲ್ಲಾಡಳಿತ ಮನವಿ

ವಾರ್ತಾಭಾರತಿವಾರ್ತಾಭಾರತಿ1 Sept 2021 7:44 PM IST
share
ರಾತ್ರಿ ವೇಳೆ ಗಣೇಶ ಮೂರ್ತಿ ವಿಸರ್ಜನೆಗೆ ಅವಕಾಶ ಇಲ್ಲ: ನಿಯಮ ಪಾಲಿಸಲು ಕೊಡಗು ಜಿಲ್ಲಾಡಳಿತ ಮನವಿ

ಮಡಿಕೇರಿ ಸೆ.1 : ಗೌರಿ ಗಣೇಶ ಹಬ್ಬ ಆಚರಣೆ ಸಂಬಂಧ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ  ಅವರ ಉಪಸ್ಥಿತಿಯಲ್ಲಿ ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಭೆ ನಡೆಯಿತು.

ಸಭೆಯ ಆರಂಭದಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳಿಂದ ಮಾಹಿತಿ ಪಡೆದು ಮಾತನಾಡಿದ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು, ಜಿಲ್ಲೆಯಲ್ಲಿ ಕೋವಿಡ್-19 ಪಾಸಿಟಿವಿಟಿ ಪ್ರಮಾಣವು ಎರಡಕ್ಕಿಂತ ಹೆಚ್ಚು ಇದ್ದು, ಕೋವಿಡ್ ಪರಿಸ್ಥಿತಿ ಅವಲೋಕಿಸಿದರೆ ಇನ್ನೂ ಸಹ ಗಂಭೀರವಾಗಿದೆ. ಆದ್ದರಿಂದ ಕಳೆದ ಬಾರಿಯಂತೆ ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಅಗತ್ಯ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಅವರು ಕೋರಿದರು. 

ಕೊಡಗು ಜಿಲ್ಲೆಯಲ್ಲಿ ವಾರಾಂತ್ಯದ ಕಫ್ರ್ಯೂ ಮುಂದುವರಿದಿದೆ. ಆದ್ದರಿಂದ ಸರ್ಕಾರದಿಂದ ಕಾಲ ಕಾಲಕ್ಕೆ ಹೊರಡಿಸಲಾಗುವ ಮಾರ್ಗಸೂಚಿ ಮತ್ತು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಅವರು ಮನವಿ ಮಾಡಿದರು.

ಕೋವಿಡ್-19 ಪಾಸಿಟಿವಿಟಿ ಪ್ರಮಾಣವು ಎರಡಕ್ಕಿಂತ ಕಡಿಮೆಯಾಗದಿರುವ ಹಿನ್ನೆಲೆ ಹಲವು ನಿರ್ಬಂಧಗಳು ಮುಂದುವರೆದಿವೆ. ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ವಿನಾಯಿತಿ ಇರುವುದಿಲ್ಲ. ಆದ್ದರಿಂದ ಸರ್ಕಾರದ ನಿಯಮಗಳನ್ನು ಚಾಚು ತಪ್ಪದೇ ಪಾಲಿಸಬೇಕು ಎಂದರು.  

ಗೌರಿ ಗಣೇಶೋತ್ಸವ ಆಚರಣೆ ಸಂಬಂಧ ಸರ್ಕಾರದಿಂದ ಮಾರ್ಗಸೂಚಿ ಬರಲಿದ್ದು, ನಂತರ ಮಾಹಿತಿ ನೀಡಲಾಗುವುದು. ಇಂದು ನಡೆದಿರುವ ಸಭೆಯಲ್ಲಿ ವ್ಯಕ್ತಪಡಿಸಿರುವ ಅಭಿಪ್ರಾಯವನ್ನು ಸರ್ಕಾರದ ಗಮನಕ್ಕೆ ತರಲಾಗುವುದು.  ಈಗಿರುವ ನಿಯಮವನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. 

ಕೋವಿಡ್ ನಿಯಂತ್ರಣ ಸಂಬಂಧ ಸರ್ಕಾರದ ನಿಯಮಗಳನ್ನು ಪಾಲಿಸಬೇಕು. ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು, ಜನದಟ್ಟಣೆ ಸೇರದಿರುವುದು ಮತ್ತಿತರವನ್ನು ಪಾಲಿಸುವಂತೆ ಚಾರುಲತಾ ಸೋಮಲ್ ಅವರು ಹೇಳಿದರು. 

 ಸಭೆಯ ಆರಂಭದಲ್ಲಿ ಮಾತನಾಡಿದ ಚೇತನ್ ಅವರು ಕಳೆದ ಎರಡು ವರ್ಷಗಳಿಂದ ಕೊರೊನಾದಿಂದಾಗಿ ಸರ್ಕಾರದ ನಿಯಮಗಳನ್ನು ಪಾಲಿಸಿಕೊಂಡು ಗಣೇಶೋತ್ಸವ ಆಚರಿಸಲಾಗುತ್ತಿದ್ದು, ಅವಕಾಶ ಮಾಡಬೇಕು ಎಂದು ಅವರು ಕೋರಿದರು.  

ಅರುಣ್ ಶೆಟ್ಟಿ ಅವರು ಮಾತನಾಡಿ ಸರ್ಕಾರದ ನಿರ್ದೇಶನದಂತೆ ಕಳೆದ ಎರಡು ವರ್ಷದಿಂದ ಸರಳ ಹಾಗೂ ಸಾಂಪ್ರದಾಯಿಕವಾಗಿ ಗಣೇಶೋತ್ಸವವನ್ನು ಆಚರಿಸಲಾಗುತ್ತದೆ. ಕಳೆದ ಬಾರಿಯಂತೆ ಅವಕಾಶ ಮಾಡಬೇಕು ಎಂದು ಅವರು ಕೋರಿದರು. 

ಸಾಯಿನಾಥ್ ನಾಯಕ್ ಅವರು ವಿರಾಜಪೇಟೆ ಪಟ್ಟಣದಲ್ಲಿ ಐತಿಹಾಸಿಕವಾಗಿ ಗೌರಿ ಗಣೇಶೋತ್ಸವ ಆಚರಿಸಲಾಗುತ್ತಿದ್ದು, ಸರ್ಕಾರದ ನಿಯಮಗಳನ್ನು ಪಾಲಿಸಿಕೊಂಡು ಗೌರಿ ಗಣೇಶೋತ್ಸವ ಆಚರಿಸಲಾಗುತ್ತಿದೆ. ಅದನ್ನು ಮುಂದುವರೆಸಬೇಕು ಎಂದು ಕೋರಿದರು. 

ಬಿ.ಕೆ.ಜಗದೀಶ್ ಅವರು ಮಾತನಾಡಿ ಮಡಿಕೇರಿ ನಗರದಲ್ಲಿ ಗಣೇಶೋತ್ಸವವನ್ನು ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತದೆ. ಆದರೆ ಕಳೆದ ಎರಡು ವರ್ಷಗಳಿಂದ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಗಣೇಶೋತ್ಸವವನ್ನು ಆಚರಿಸಲಾಗುತ್ತಿದೆ. ಆದ್ದರಿಂದ ಸಾರ್ವಜನಿಕವಾಗಿ ಗಣೇಶೋತ್ಸವವಕ್ಕೆ ಅವಕಾಶ ಮಾಡಬೇಕು ಎಂದು ಅವರು ಕೋರಿದರು.  

 ಪ್ರತಾಪ್ ಅವರು ಮಾತನಾಡಿ ಕಳೆದ 17 ವರ್ಷಗಳಿಂದ ಗಣೇಶೋತ್ಸವ ಆಚರಿಸಿಕೊಂಡು ಬರಲಾಗುತ್ತಿತ್ತು. ಆದರೆ  ಕೊರೊನಾದಿಂದಾಗಿ ಕಳೆದ ಎರಡು ವರ್ಷಗಳಿಂದ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಗಣೇಶೋತ್ಸವ ಆಚರಿಸಲಾಗುತ್ತಿದೆ. ಅದನ್ನು ಮುಂದುವರೆಸಬೇಕು ಎಂದು ಅವರು ಕೋರಿದರು.   

ಚರಣ್ ಅವರು ಮಾತನಾಡಿ ಗಣಪತಿ ವಿಸರ್ಜನೆಗೆ ಸೀಮಿತವಾಗಿಯಾದರೂ ಜನರ ಪಾಲ್ಗೊಳ್ಳುವಿಕೆಗೆ ಅವಕಾಶ ಮಾಡಬೇಕು ಎಂದರು. 

ಪೌರಾಯುಕ್ತರಾದ ರಾಮದಾಸ್ ಅವರು ಕೋವಿಡ್ ನಿಯಮ ಮತ್ತು ಮಾರ್ಗಸೂಚಿಯನ್ನು ಪಾಲಿಸಿಕೊಂಡು ಗಣೇಶೋತ್ಸವ ಆಚರಣೆಗೆ ಅವಕಾಶ ಮಾಡಲಾಗುತ್ತದೆ ಎಂದು ಅವರು ಹೇಳಿದರು.   

ಜಿಲ್ಲಾ ಪರಿಸರ ಅಧಿಕಾರಿ ಗಣೇಶನ್ ಅವರು ಪರಿಸರ ಕಾಪಾಡುವ ನಿಟ್ಟಿನಲ್ಲಿ ‘ಅರಿಶಿಣ ಗಣೇಶ ಮೂರ್ತಿ’ ಬಳಸುವ ನಿಟ್ಟಿನಲ್ಲಿ ಉತ್ತೇಜಿಸಲಾಗುತ್ತದೆ. ಆ ನಿಟ್ಟಿನಲ್ಲಿ ಪರಿಸರ ಇಲಾಖೆ ಹಾಗೂ ವಿಜ್ಞಾನ ಪರಿಷತ್ ವತಿಯಿಂದ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಡಿವೈಎಸ್‍ಪಿ ಜಯಕುಮಾರ್ ಅವರು ವಿರಾಜಪೇಟೆ ತಾಲ್ಲೂಕಿನಲ್ಲಿ ಪ್ರಮುಖವಾಗಿ 60 ಕಡೆಗಳಲ್ಲಿ ಗಣೇಶ ಮೂರ್ತಿಯನ್ನುಪ್ರತಿಷ್ಠಾಪಿಸಲಾಗುತ್ತದೆ. ರಾತ್ರಿ ವೇಳೆಯಲ್ಲಿ ಮೆರವಣಿಗೆಗೆ ಅವಕಾಶ ಮಾಡಬಾರದು ಎಂದು ಜಿಲ್ಲಾಧಿಕಾರಿ ಅವರ ಗಮನಕ್ಕೆ ತಂದರು. 

ಮಡಿಕೇರಿ ಡಿವೈಎಸ್‍ಪಿ ಗಜೇಂದ್ರ ಪ್ರಸಾದ್ ಅವರು ಮಡಿಕೇರಿ ತಾಲ್ಲೂಕಿನಲ್ಲಿ ಸುಮಾರು 93 ಕಡೆಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುತ್ತದೆ. ಹಗಲು ವೇಳೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ಅವಕಾಶ ಮಾಡಬೇಕು ಎಂದು ಅವರು ಕೋರಿದರು. 

ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಎಷ್ಟು ಜನರು ತೆರಳಬೇಕು ಎಂಬ ಬಗ್ಗೆ ಮಾಹಿತಿ ನೀಡುವಂತೆ ಅವರು ಮನವಿ ಮಾಡಿದರು. 
ಪೊಲೀಸ್ ಇನ್ಸ್‍ಪೆಕ್ಟರ್ ಮೇದಪ್ಪ ಅವರು ಜಿಲ್ಲೆಯಲ್ಲಿ ರಾತ್ರಿ ಕಫ್ರ್ಯೂ ಮುಂದುವರಿದಿರುವುದರಿಂದ ರಾತ್ರಿ ವೇಳೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ಅವಕಾಶ ಇರುವುದಿಲ್ಲ. ಕೋವಿಡ್ ಮಾರ್ಗಸೂಚಿಯನ್ನು ಅನುಸರಿಸಲಿದ್ದಾರೆ. ಪೊಲೀಸ್ ಠಾಣಾ ಹಂತದಲ್ಲಿಯೂ ಸಹ ಸ್ಥಳೀಯರೊಂದಿಗೆ ಚರ್ಚಿಸಲಾಗುತ್ತದೆ ಎಂದು ಅವರು ಹೇಳಿದರು.  

 ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ಮಾಡದೆ ಸರಳವಾಗಿ ಆಚರಿಸುವಂತೆ ಕೋರಿದರು. 

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರಾಜು, ಪೊಲೀಸ್ ಇಲಾಖೆಯ ವಿವಿಧ ಹಂತದ ಅಧಿಕಾರಿಗಳು ಇತರರು ಇದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X