Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರಿನಲ್ಲಿ ನಡೆದ ಅತ್ಯಾಚಾರ...

ಮೈಸೂರಿನಲ್ಲಿ ನಡೆದ ಅತ್ಯಾಚಾರ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ1 Sept 2021 8:14 PM IST
share
ಮೈಸೂರಿನಲ್ಲಿ ನಡೆದ ಅತ್ಯಾಚಾರ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ: ಸಿದ್ದರಾಮಯ್ಯ

ಮೈಸೂರು,ಸೆ.1: ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿಲ್ಲ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ಮತ್ತು ಪೊಲೀಸರು ವಿಫಲರಾಗಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಸ್ಥಳಕ್ಕೆ ಬುಧವಾರ ಬೇಟಿ ನೀಡಿ ಪರೀಶೀಲನೆ ನಡೆಸಿ ಬಳಿಕ ಪೊಲೀಸ್ ಅಧಿಕಾರಿಗಳೊಂದಿಗೆ ನಭೆ ನಡೆಸಿ ನಂತರ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು ನಗರದಲ್ಲಿ ಹಿಂದೆಂದೂ ನಡೆಯದ ಘಟನೆ ನಡೆದು ಹೋಗಿದೆ.ಇದೊಂದು ಅಮಾನುಷ ಘಟನೆ ಎಂದು ಬೇಸರ ವ್ಯಕ್ತಪಡಿಸಿದರು. 

ದೆಹಲಿಯಲ್ಲಿ ನಿರ್ಭಯ ಕೇಸ್ ಆದ ಮೇಲೆ ಮೈಸೂರು ನಗರದಲ್ಲಿ ನಡೆದ ಗ್ಯಾಂಗ್ ರೇಪ ಹೇಯಕೃತ್ಯ. ನಾಗರೀಕ ಸಮಾಜ ತಲೆ ತಗ್ಗಿಸುವಂತ ಕೃತ್ಯ. ಇತ್ತೀಚೆಗೆ ಮೈಸೂರಿನಲ್ಲಿ ಕೊಲೆ ಸುಲಿಗೆ ದರೋಡೆ ಅತ್ಯಾಚಾರ, ಕಳ್ಳತನ ದಂತಹ ಕ್ರಿಮಿನಲ್ ಪ್ರಕರಣ ಹೆಚ್ಚಾಗಿವೆ. ಇದರ ಅರ್ಥ ಮೈಸೂರು ನಗರದಲ್ಲಿ ಕಾನೂನು ಸುವ್ಯವಸ್ಥೆ ಮುರಿದು ಬಿದ್ದಿದೆ. ಕಾನೂನು ವ್ಯವಸ್ಥೆ ಸರಿಮಾಡಲು ಸರ್ಕಾರವಾಗಲಿ ಮೈಸೂರು ಪೊಲೀಸರಾಗಲಿ ಯಾವ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ ಎಂದು ಸಿದ್ಧರಾಮಯ್ಯ ಕಿಡಿಕಾರಿದರು.

ಈ ಕೃತ್ಯ ನಡೆದ ಸ್ಥಳ ಆಲನಹಳ್ಳಿ  ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುತ್ತೆ. ರಿಂಗ್ ರೋಡ್ ಕೂಡ ಕೂಗಳತೆ ದೂರದಲ್ಲಿ ಇದೆ. ಪೊಲೀಸರ ಹೇಳಿಕೆ ಪ್ರಕಾರ ಸಂಜೆ ವೇಳೆ ಜನರು ಬರುತ್ತಾ ಇರುತ್ತಾರೆ. ಅದರೆ ಹೆಚ್ಚು ಸಾರ್ವಜನಿಕರು ಓಡಾಟ ಇಲ್ಲ. ಪೊಲೀಸರು ಹತ್ತಿರ ಗರುಡ ವಾಹನ ಇದೆ. ಆ ಜಾಗ ಪೊಲೀಸರಿಗೆ ಗೊತ್ತಿಲ್ಲ. ಅದು ಮೂಡಾಗೆ ಸೇರಿದ್ದಾ ,ಅರಣ್ಯ ಇಲಾಖೆ ಸೇರಿದ್ದ ಗೊತ್ತಿಲ್ಲ. ಘಟನೆ ನಡೆದು ಈಗ ಎಂಟು ದಿನ ಆದರೂ ಪೊಲೀಸರಿಗೆ ಈ ಬಗ್ಗೆ ಉತ್ತರ ಸಿಕ್ಕಿಲ್ಲ. ಮೂಡಾದವರೂ ಸಹ ಉತ್ತರ  ಕೊಟ್ಟಿಲ್ಲ. ಇದು ಕ್ಲಿಷ್ಟಕರ ವಿಚಾರವಾ.? ಆ ಜಾಗದಿಂದ ರಿಂಗ್ ರೋಡ್ ಗೆ ಎಷ್ಟು ದೂರ ಇದೆ ಅಂತ ಅಳತೆ ಕೂಡ ಮಾಡಿಲ್ಲ. ಯಾಕೆ ಮಾಡಿಲ್ಲ ಎಂದರೆ ಉತ್ತರ ಇಲ್ಲ ಎಂದು ಸಿದ್ಧರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ಸಂತ್ರಸ್ತೆ ಜತೆ ಇದ್ದ ಹುಡುಗ ಸ್ಟೇಟ್ ಮೆಂಟ್ ಕೊಟ್ಟಿದ್ದಾರೆ. ಅರೋಪಿಗಳು ಹ್ಯಾಬ್ಯಚಲ್ ಅಪೆಂಡರ್ಸ್. ಕಾನೂನು ಬಾಹಿರ ಕೃತ ಮಾಡಿಕೊಂಡಿದ್ದವರು. ಆ ಹುಡುಗನಿಗೆ ಕಲ್ಲಿನಲ್ಲಿ ಹೊಡೆದಿದ್ದಾರೆ ಅಂತ ಹುಡುಗ ಸ್ಟೇಟ್ ಮೆಂಟ್ ಕೊಟ್ಟಿದ್ದಾನೆ. ಹಲ್ಲೆ ಮಾಡಿದ್ದಾರೆ ಆ ಹುಡುಗಿ ಮೇಲೆ ರೇಪ್ ಮಾಡಿದ್ದಾರೆ ಅಂತನೂ ಹೇಳಿದ್ದಾನೆ. ಬಹಳ ಅನುಮಾನಕ್ಕೆ ಎಡೆ ಮಾಡುವುದು ಏನು ಅಂದರೆ ಪೊಲೀಸರಿಗೆ ರಾತ್ರಿ 9.10 ಗಂಟೆಗೆ ಸುದ್ದಿ ಗೊತ್ತಿದ್ದರೂ ನಾಳೆ ಬೆಳಗ್ಗೆ ಮದ್ಯಾಹ್ನ 12 ಗಂಟೆ ನಂತರ ಅಂದರೆ 15 ಗಂಟೆ ಲೇಟಾಗಿ ಎಫ್ ಐ ಆರ್ ಮಾಡಿದ್ದಾರೆ. ಇದಕ್ಕೆ ಅವರ ಬಳಿ ಜಿನಿಯನ್ ರೀಜನ್ ಇಲ್ಲ. ಆಗಸ್ಟ್ 24, 25 ಆದ ಮೇಲೆ  ಸಂತ್ರಸ್ತ ಯುವತಿ ಡಿಸ್ಚಾರ್ಜ್ ಆಗಿದ್ದಾರೆ. ಮೂರು ದಿನದಲ್ಲಿ ಆಗಿದೆ. ಆದ್ರೆ ಹುಡುಗಿ ಸ್ಟೇಟ್ಮೆಂಟ್ ತೆಗೆದುಕೊಂಡಿಲ್ಲ. ಪೊಲೀಸರ ಮುಂದೆ, ಮ್ಯಾಜಿಸ್ಟ್ರೇಟ್ ಮುಂದೆ ಸ್ಟೇಟ್ಮೆಂಟ್ ತೆಗೆದುಕೊಳ್ಳಬೇಕಿತ್ತು. ಆ ಹುಡುಗಿ ಶಾಕ್ ನಲ್ಲಿದ್ದಾಳೆ ಸ್ಟೇಟ್ಮೆಟ್ ಕೊಡಲ್ಲ ಎಂದು ಹೇಳುತ್ತಿದ್ದಾರೆ ಎಂದು ಹೇಳುತ್ತಾರೆ. ಆದರೆ ಅಲ್ಲಿ ಪೊಲೀಸರು ಇರಬೇಕಿತ್ತು. ಅವಳು ಹೇಳಿಕೆ ಕೊಡಲ್ಲ ಅಂದ್ರೆ ನೀವೇನು ಮಾಡ್ತಾ ಇದ್ರಿ. ಅವಳ ಮೇಲೆ ಕೇಸ್ ಆಗಬೇಕಿತ್ತು. ಇದು ಅನುಮಾನಕ್ಕೆ ಎಡೆಮಾಡಿಕೊಡುತ್ತೆ. ಅವರು ನಿರಾಕರಣೆ ಮಾಡಿದರು ಎಂದರೆ ಸುಮ್ಮನೆ ಇರಲು ಸಾಧ್ಯ ಇಲ್ಲ. ಮನವೊಲಿಸಿ ಸ್ಟೇಟ್ಮೆಂಟ್ ತಗೋ ಬೇಕಿತ್ತು, ಮ್ಯಾಜಿಸ್ಟ್ರೇಟ್ ಹತ್ತಿರ ಆದ್ರೂ ತಗೋಬಹುದಿತ್ತು ಎಂದು ಸಿದ್ಧರಾಮಯ್ಯ ಹೇಳಿದರು.

ಸರ್ಕಾರ ಬೇಜವಾಬ್ದಾರಿ ಪ್ರದರ್ಶನ ಮಾಡಿದೆ. ಘಟನೆ ಬೆಳಕಿಗೆ ಬಂದ ಬಳಿಕ ಗೃಹ ಸಚಿವ ಅರಗ ಜ್ಞಾನೇಂದ್ರ ಮೈಸೂರಿಗೆ ಬಂದು ಆರಾಮಾಗಿ ಚಾಮುಂಡಿ ಬೆಟ್ಟಕ್ಕೆ ಹೋಗಿ, ಎಲ್ಲಾ ಕಡೆ ಹೋಗಿ ಆ ನಂತರ ಸ್ಥಳಕ್ಕೆ ಹೋಗುತ್ತಾರೆ. ಎಷ್ಟು ಸೀರಿಯಸ್ ಇದಾರೆ ಎಂದು ಗೊತ್ತಾಗುತ್ತದೆ. ಚೈಲ್ಡಿಸ್ಟ್ ಮತ್ತು ಬೇಜವಾಬ್ದಾರಿ ಹೇಳಿಕೆ ಕೊಡುತ್ತಾರೆ. ಇಷ್ಡೊತ್ತಲ್ಲಿ ಯಾಕೆ ಬರಬೇಕಿತ್ತು ಅಂತ ಹೇಳುತ್ತಾರೆ. ಅವರು ಈ ರಾಜ್ಯದ ಹೋಂ ಮಿನಿಸ್ಟರ್ ಆಗಲಿಕ್ಕೆ ಅರ್ಹರಾ..? ಅವರು ಅವರ ಸ್ಥಾನಕ್ಕೆ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

ಚುನಾಯಿತ ಜನಪ್ರತಿನಿಧಿಗಳ ಜೊತೆ ಒಂದು ಮೀಟಿಂಗ್ ಕೂಡ ಮಾಡಿಲ್ಲ. ಸರ್ಕಾರ ಇದನ್ನ ಬಹಳ ಲಘುವಾಗಿ ತೆಗೆದುಕೊಂಡಿದೆ. ನಿರ್ಭಯ ಕೇಸ್ ಆದರೂ ಇವರಿಗೆ ಭಯ ಇಲ್ಲ, ಜವಾಬ್ದಾರಿ ಇಲ್ಲ, ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲ. ಪೊಲೀಸರು ಗಸ್ತು ತಿರುಗುತ್ತಿಲ್ಲ. ಗರುಡ ಇರೋದು ಪೂಜೆ ಮಾಡಲಿಕ್ಕಾ ಎಂದು ಪ್ರಶ್ನಿಸಿದ ಸಿದ್ಧರಾಮಯ್ಯ,ಐದು ಜನ ಹಿಡಿದಿದ್ದೇವೆ ಅಂತ ಅವರನ್ನು ಹೊಗಳಿದ್ದೆ ಹೊಗಳಿದ್ದು. ಇದು ಅವರ ಡ್ಯೂಟಿ. ಅವರು ಗ್ಯಾಂಗ್ ರೇಪ್ ತಡೆದಿದ್ದರೆ ಸಹಭಾಶ್ ಹೇಳಬೇಕಿತ್ತು. ಇದೂ ಫೂಲಿಶ್ ಸರ್ಕಾರ, ಇಂತಹ ಅಪರಾಧಗಳು ತಡೆದರೇ ಮಾತ್ರ ಸಹಬ್ಬಾಷ್ ಗಿರಿ ನೀಡಬೇಕು. ಇಂದು ಪೊಲೀಸರ, ಸರ್ಕಾರದ ವೈಪ್ಯಲ್ಯ ಅಲ್ವ? ಕಾನೂನು ಸುವ್ಯವಸ್ಥಿತ ಕಾಪಾಡುವಲ್ಲಿ ಸರ್ಕಾರ, ಪೊಲೀಸರು ವಿಫಲವಾಗಿದ್ದಾರೆ. ಮೈಸೂರು ಪೊಲೀಸರು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ಸರ್ಕಾರ ಇದನ್ನ ಮುಚ್ಚುಹಾಕಲು ಪ್ರಯತ್ನ ಮಾಡುತ್ತಿದೆ ಎಂದು ಅನಿಸುತ್ತಿದೆ. ಜವಾಬ್ದಾರಿಯುತ ಸರ್ಕಾರ ಮಾಡುವ ಕ್ರಮ ಅಲ್ಲ. ತಪ್ಪು ಮಾಡಿದವರಿಗೆ ಕಾನೂನು ರೀತಿ ಶಿಕ್ಷೆ ಆಗಬೇಕು. ಪ್ರಾಪರ್ ಇನ್ವೆಸ್ಟಿಗೇಷನ್ ಆಗಬೇಕು. ಆ ಹುಡುಗ ಸ್ಟೇಟ್ಮೆಂಟ್ ತಗೋಬೇಡಿ ಅಂತ ಪೊಲಿಟಿಕಲ್ ಪ್ರೆಜರ್  ಇದೆ ಅಂತ ಜನ ಹೇಳುತ್ತಾರೆ. ಅದು ನನಗೆ ಗೊತ್ತಿಲ್ಲ. ಇಲ್ಲಿಯವರೆಗೆ ಏನೇನು ಆಗಿದೆ ಎಂಬುದನ್ನ ಹೇಳಿದ್ದೇನೆ. ಬಿಜೆಪಿಯವರ ನಂದಿತಾ ಕೇಸ್ ನಲ್ಲಿ ಹೇಗೆ ನಡೆದುಕೊಂಡ್ರೂ ಅಂತ ಗೊತ್ತಿದೆ. ಡೆವಲಪ್ಮೆಂಟ್ ನೋಡಿಕೊಂಡು ಅಧಿವೇಶನದಲ್ಲಿ ಮಾತನಾಡುತ್ತೇನೆ ಎಂದು ಸಿದ್ಧರಾಮಯ್ಯ ಹೇಳಿದರು.

ದುಡ್ಡು ಕೊಟ್ಟು ಪೊಲೀಸರು ಟ್ರಾನ್ಫರ್ ಮಾಡಿಸಿಕೊಂಡು ಬರುತ್ತಾರೆ. ಈ ಸರಕಾರದಲ್ಲಿ ಪೊಲೀಸ್ ವರ್ಗಾವಣೆಗಳು ದುಡ್ಡಿನಿಂದ ಆಗಿವೆ. ಎಷ್ಟೇಷ್ಟು ದುಡ್ಡು ಕೊಟ್ಟು ಬಂದಿದ್ದಾರೆ ಎಂದು ವೀಡಿಯೋ ಮಾಡಿ ತೋರಿಸಲಾ ? ಪೊಲೀಸರು ಉದ್ದೇಶ ಪೂರ್ವಕವಾಗಿ ಸಂತ್ರಸ್ತೆ ಹೇಳಿಕೆ ಪಡೆದಿಲ್ಲ ಎಂದೆನಿಸುತ್ತಿದೆ. ಪೊಲೀಸರಿಗೆ ತನಿಖೆಯ ಸ್ವಾತಂತ್ರ್ಯ ಇಲ್ಲ ಎಂದು ಕಿಡಿಕಾರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X