Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ...

​ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿಕೆಗೆ ವ್ಯಾಪಕ ಖಂಡನೆ

ವಾರ್ತಾಭಾರತಿವಾರ್ತಾಭಾರತಿ1 Sept 2021 11:08 PM IST
share

ಮಂಗಳೂರು, ಸೆ.1: ಮದ್ರಸಗಳಲ್ಲಿ ತಾಲಿಬಾನಿಗಳು ಸೃಷ್ಟಿಯಾಗುತ್ತಿದ್ದಾರೆ ಎಂದು ಶಾಸಕ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಮುಸ್ಲಿಂ ಲೀಗ್: ಮುಂದಿನ ಜಿಪಂ ಮತ್ತು ತಾಪಂ ಚುನಾವಣೆಯ ದೃಷ್ಟಿಯಲ್ಲಿಟ್ಟುಕೊಂಡು ಜನಸಾಮಾನ್ಯರ ಮಧ್ಯೆ ಮದ್ರಸಗಳನ್ನು ಎತ್ತಿ ಕಟ್ಟಿ ವಿಷ ಬೀಜವನ್ನು ಬಿತ್ತಿ ಮತ ಪಡೆಯುವ ಹುನ್ನಾರ ಇದಾಗಿದೆ ಎಂದು ಮುಸ್ಲಿಂ ಲೀಗ್ ಉಪಾಧ್ಯಕ್ಷ ತಬೂಕ್ ದಾರಿಮಿ ತಿಳಿಸಿದ್ದಾರೆ.

ದಾರಿಮಿ ಒಕ್ಕೂಟ: ಮದ್ರಸಗಳಲ್ಲಿ ಎಂದೂ ಭಯೋತ್ಪಾದನೆಯನ್ನು ಕಲಿಸಲಾಗುತ್ತಿಲ್ಲ. ಆದರೆ ಸಿ.ಟಿ.ರವಿ ಈ ವಿಷಯದಲ್ಲಿ ಬಾಲಿಶ ಹೇಳಿಕೆ ನೀಡಿದ್ದಾರೆ. ಇದು ಖಂಡನೀಯ. ಭಾರತೀಯ ಮದ್ರಸಗಳಿಂದ ಸೃಷ್ಟಿಯಾದ ತಾಲಿಬಾನಿಗಳ ಲೆಕ್ಕ ತೋರಿಸಲಿ ಎಂದು ದಾರಿಮೀಸ್ ಒಕ್ಕೂಟದ ರಾಜ್ಯಾಧ್ಯಕ್ಷ ಎಸ್‌ಬಿ ದಾರಿಮಿ ಆಗ್ರಹಿಸಿದ್ದಾರೆ.

ಮಾನವರು ಸಹೋದರರು: ಮದ್ರಸಗಳ ಬಗ್ಗೆ ಸಿ.ಟಿ.ರವಿಯ ಹೇಳಿಕೆಯು ಬೇಜವಾಬ್ದಾರಿಯಿಂದ ಕೂಡಿದೆ. ಪರಮತ ದ್ವೇಷದ ಪರಮಾವಧಿ ಇದಾಗಿದೆ. ಮುಸ್ಲಿಂ ಮಕ್ಕಳಿಗೆ ಇಸ್ಲಾಂ ಧರ್ಮದ ಬಾಲಪಾಠ ಹೇಳಿಕೊಟ್ಟು ಅವರನ್ನು ಧರ್ಮಾಧರಿತ ಮತ್ತು ಶಾಂತಿ, ಸೌಹಾರ್ದತೆಯ ಸಹಬಾಳ್ವೆ ನಡೆಸಲು ಕಲಿಸಿ ಅಪ್ರತಿಮ ದೇಶಪ್ರೇಮಿಗಳನ್ನಾಗಿ ಮಾರ್ಪಡಿಸುವ ದೇಶದ ಶಾಂತಿಧಾಮಗಳಾದ ಮದ್ರಸಗಳು ಮಾನವೀಯ ಮೌಲ್ಯಗಳ ತಳಹದಿಯಲ್ಲಿ ರೂಪುಗೊಂಡಿವೆ. ಎಲ್ಲೋ ಕೆಲವೆಡೆ ನಾಮಧಾರಿಗಳು ಮದ್ರಸ ಹೆಸರಿನಲ್ಲಿ ಏನಾದರೂ ಧರ್ಮದ್ರೋಹಿ, ಸಮಾಜದ್ರೋಹಿ ಚಟುವಟಿಕೆಗಳನ್ನು ಮಾಡಿದ್ದರೆ ಅದನ್ನು ಸರ್ವ ಮುಸ್ಲಿಮರ ತಲೆಗೆ ಕಟ್ಟುವುದು ಸರಿಯಲ್ಲ ಎಂದು ಮಾನವರು ಸಹೋದರರು ವೇದಿಕೆಯ ಮುಖಂಡ ಕೆ.ಎ.ಅಬ್ದುಲ್ ಅಝೀಝ್ ಪುಣಚ ತಿಳಿಸಿದ್ದಾರೆ.

ಎಸ್‌ಎಂಎ: ಜವಾಬ್ದಾರಿಯುತ ಸ್ಥಾನದಲ್ಲಿರುವ ಮತ್ತು ಒಬ್ಬ ಜನಪ್ರತಿನಿಧಿಯೂ ಆಗಿರುವ ಸಿ.ಟಿ.ರವಿಯವರಿಂದ ಇಂತಹ ಮಾತುಗಳು ಬರಬಾರದು. ಇದು ಖಂಡನೀಯ ಎಂದು ಕರ್ನಾಟಕ ರಾಜ್ಯ ಮದ್ರಸ ಮ್ಯಾನೇಜ್ಮೆಂಟ್ ಅಸೋಸಿಯೇಶನ್ (ಎಸ್‌ಎಂಎ) ತೀವ್ರವಾಗಿ ಖಂಡಿಸಿದೆ.

ಮುಸ್ಲಿಂ ವರ್ತಕರ ಸಂಘ: ನಾಡಿನ ಜನತೆಯು ಅನ್ಯೋನ್ಯತೆಯಿಂದಿರುವುದನ್ನು ಸಹಿಸದ ಮತ್ತು ಭವಿಷ್ಯದ ರಾಜಕಾರಣವನ್ನು ಸುಭದ್ರಪಡಿಸುವ ಸಲುವಾಗಿ ಸಿ.ಟಿ.ರವಿ ಇಂತಹ ಅಸಂಬದ್ಧ ಹೇಳಿಕೆ ನೀಡಿದ್ದಾರೆ. ಯಾವ ಮದ್ರಸಗಳಲ್ಲಿ ಎಷ್ಟು ತಾಲಿಬಾನಿಗಳು ಸೃಷ್ಟಿಯಾಗಿದ್ದಾರೆ ಎಂದು ಸಿಟಿ ರವಿ ಬಹಿರಂಗಪಡಿಸಲಿ. ಇಲ್ಲದಿದ್ದರೆ ಮುಸ್ಲಿಮರ ತಪ್ಪೊಪ್ಪಿಕೊಳ್ಳಲಿ ಎಂದು ಮುಸ್ಲಿಂ ವರ್ತಕರ ಸಂಘದ ಅಧ್ಯಕ್ಷ ಅಲಿ ಹಸನ್ ಒತ್ತಾಯಿಸಿದ್ದಾರೆ.

ಮುಸ್ಲಿಂ ಒಕ್ಕೂಟ: ಸಚಿವ ಸ್ಥಾನ ಕೈ ತಪ್ಪಿಹೋದ ನಂತರ ಹತಾಶೆಗೊಳಗಾಗಿರುವ ಸಿ.ಟಿ. ರವಿ ಮತಿಭ್ರಮಣೆಗೊಂಡಂತೆ ದೇಶದ ಮದ್ರಸಾಗಳಲ್ಲಿ ತಾಲಿಬಾನಿಗಳು ಸೃಷ್ಟಿಯಾಗುತ್ತಿದ್ದಾರೆ ಎಂಬ ಅಸಂಬದ್ಧ ಹೇಳಿಕೆ ನೀಡಿ ನಗೆಪಾಟಲಿಗೀಡಾಗಿದ್ದಾರೆ. ಪ್ರಚಾರಕ್ಕಾಗಿ ಇಂತಹ ಹೇಳಿಕೆ ನೀಡಿ ಸಮಾಜದಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಮದ್ರಸಗಳು ಈ ದೇಶದ ಸ್ವಾತಂತ್ರ್ಯ ಸೇನಾನಿಗಳನ್ನು ಸೃಷ್ಟಿಸಿದ ಮಿಲಿಟರಿ ಕೇಂದ್ರಗಳಾಗಿವೆ ಎಂಬುದನ್ನು ಸಿಟಿ ಅರಿತುಕೊಳ್ಳಲಿ ಎಂದು ಮಾಜಿ ಮೇಯರ್, ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಕೆ. ಅಶ್ರಫ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X