Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ...

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಸಿದ್ದಗೊಳ್ಳುತ್ತಿದೆ ರೂ. 1ಕೋಟಿ ವೆಚ್ಚದಲ್ಲಿ ಆಕ್ಸಿಜೆನ್ ಪ್ಲ್ಯಾಂಟ್

ವಾರ್ತಾಭಾರತಿವಾರ್ತಾಭಾರತಿ1 Sept 2021 11:56 PM IST
share
ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಸಿದ್ದಗೊಳ್ಳುತ್ತಿದೆ ರೂ. 1ಕೋಟಿ ವೆಚ್ಚದಲ್ಲಿ ಆಕ್ಸಿಜೆನ್ ಪ್ಲ್ಯಾಂಟ್

ಪುತ್ತೂರು: ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯ ವತಿಯಿಂದ ಪುತ್ತೂರು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೂ. 1 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಆಕ್ಸಿಜನ್ ಘಟಕದ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದ್ದು, ಮುಂದಿನ ಕೆಲವೇ ದಿನಗಳಲಿ ಸಾರ್ವಜನಿಕರ ಸೇವೆಗೆ ಲಭ್ಯವಾಗಲಿದೆ. ಕೋವಿಡ್ ಎರಡನೆ ಅಲೆ ಸಂದರ್ಭದಲ್ಲಿ ಎಲ್ಲೆಡೆ ರೋಗಿಗಳಿಗೆ ಆಕ್ಸಿಜೆನ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರ ಮನವಿ ಮೇರೆಗೆ ಕ್ಯಾಂಪ್ಕೋ ಸಂಸ್ಥೆ ಘಟಕ ನಿರ್ಮಾಣದ ಭರವಸೆ ನೀಡಿದ್ದು, ಇದೀಗ ಯಂತ್ರವು ಪುತ್ತೂರಿಗೆ ಆಗಮಿಸಿದೆ.  

ತಮಿಳುನಾಡಿನ ಕೊಯಮತ್ತೂರಿನ ಸಮಿಟ್ಸ್ ಹೈಗ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್ ಕಂಪೆನಿ ಮೂಲಕ ಫ್ಲ್ಯಾಂಟ್ ತಯಾರಿ ಕೆಲಸ ನಡೆಯುತ್ತಿದೆ. ಕಂಪೆನಿಯಲ್ಲಿಯೇ ನಿರ್ಮಾಣ ಕಾರ್ಯ ಆಗಿದ್ದು ಎನ್ನಲಾದ ಆಕ್ಸಿಜನ್ ಯಂತ್ರ ಪುತ್ತೂರಿಗೆ ತಲುಪಿದೆ.  ಫ್ಲ್ಯಾಂಟ್ ಬಿಡಿಭಾಗಗಳು ಮತ್ತು ಟ್ಯಾಂಕ್ ಪುತ್ತೂರಿನ ಸರಕಾರಿ ಆಸ್ಪತ್ರೆ ವಠಾರದಲ್ಲಿ ನಿಗದಿಪಡಿಸಲಾದ ಸ್ಥಳದಲ್ಲಿ ಅಳವಡಿಸಲಾಗುತ್ತದೆ. 

ಆಕ್ಸಿಜನ್ ಫ್ಲಾಂಟ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪುತ್ತೂರು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಪಕ್ಕದಲ್ಲಿದ್ದ ಹಳೆ ಸಬ್‍ಜೈಲ್ ಜಾಗವನ್ನು ಸಮತಟ್ಟು ಕಾಮಗಾರಿ ನಡೆಸಲಾಗಿದ್ದು, ಕಾಮಗಾರಿ ಪೂರ್ಣಗೊಂಡಿದೆ.  ಘಟಕ ಸ್ಥಾಪನೆಯ ನೀಲ ನಕಾಶೆಯಂತೆ 600 ಚದರಡಿ ವಿಸ್ತೀರ್ಣದಲ್ಲಿ 3 ಮೀಟರ್ ಎತ್ತರದ ಘಟಕ ನಿರ್ಮಾಣಗೊಳ್ಳಲಿದೆ. ಛಾವಣಿ ಸೇರಿದರೆ ಎತ್ತರ 5 ಮೀಟರ್‍ನಷ್ಟಿರಲಿದೆ. 

ಪ್ರತಿ ಗಂಟೆಗೆ 27 ಮೀಟರ್ ಕ್ಯೂಬ್ ಆಕ್ಸಿಜೆನ್ ಉತ್ಪಾದನೆ ಮಾಡುವ ಸಾಮಥ್ರ್ಯ ಈ ಘಟಕ ಹೊಂದಿರಲಿದೆ. 100 ಕ್ಕಿಂತ ಅಧಿಕ ಜಂಬೋ ಸಿಲಿಂಡರ್‍ನಷ್ಟು ಗ್ಯಾಸ್ ರೂಪದ ಆಮ್ಲಜನಕವು ಇದರಿಂದ ದೊರೆಯಲಿದೆ. ಟ್ಯಾಂಕ್‍ನಲ್ಲಿ ಸಂಗ್ರಹಗೊಂಡ ಆಮ್ಲಜನಕವನ್ನು ರೆಡ್ಯೂಸ್‍ಡ್ ಪ್ರೆಶರ್‍ನಲ್ಲಿ ಪ್ರತಿ ಬೆಡ್‍ಗೆ ಫ್ಲೋ ಮೀಟರ್ ಮೂಲಕ ಪೂರೈಸಲಾಗುತ್ತದೆ. ಪ್ರತಿ ಬೆಡ್‍ಗೆ ಅಗತ್ಯವಿರುವ ಹಾಗೆ ರೆಗ್ಯೂಲೇಟರ್ ಅಳವಡಿಸಲಾಗುತ್ತದೆ. ಘಟಕ ಸ್ಥಾಪನೆ ಬಳಿಕ ನಿತ್ಯ ನಿರ್ವಹಣೆ ಬಗ್ಗೆ ಆಸ್ಪತ್ರೆ ಸಿಬಂದಿಗಳಿಗೆ ಕಂಪೆನಿ ತರಬೇತಿ ನೀಡಲಿದೆ.

ಈಗಾಗಲೇ 100 ಬೆಡ್ ಸಾಮಥ್ರ್ಯದ ತಾಲೂಕು ಸರಕಾರಿ ಆಸ್ಪತ್ರೆಯನ್ನು 300 ಬೆಡ್‍ಗೆ ಏರಿಸುವ ಪ್ರಸ್ತಾವನೆಯನ್ನು ಈಗಾಗಲೇ ಸರಕಾರಕ್ಕೆ ಸಲ್ಲಿಸಲಾಗಿದೆ. ಸುಮಾರು 20 ಕೋ.ರೂ. ವೆಚ್ಚದಲ್ಲಿ ಆರು ಅಂತಸ್ತಿನ ಕಟ್ಟಡ ನಿರ್ಮಾಣಕ್ಕೆ ಕ್ರಿಯಾಯೋಜನೆ ತಯಾರಿಸಲಾಗಿದೆ. ಇಡೀ ಆಸ್ಪತ್ರೆಗೆ ಕ್ಯಾಂಪಸ್ ರೂಪ ನೀಡುವ ಸಲುವಾಗಿ ಆಸ್ಪತ್ರೆಗೆ ತಾಗಿಕೊಂಡಿರುವ ಇರುವ ವಿವಿಧ ಇಲಾಖೆಗಳ ಖಾಲಿ ಜಾಗವನ್ನು ಆಸ್ಪತ್ರೆ ಹೆಸರಿಗೆ ವರ್ಗಾಯಿಸಲಾಗುತ್ತಿದೆ. ಈ ಪ್ರಕ್ರಿಯೆ ಪೂರ್ಣಗೊಂಡಲ್ಲಿ ಒಟ್ಟು 5.5 ಎಕ್ರೆ ಜಾಗ ಹೊಂದಿರುವ ಜಿಲ್ಲೆಯ ಮೊದಲ ಆಸ್ಪತ್ರೆ ಇದಾಗಲಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X