ಕಡಬ: ನೀರುಪಾಲಾಗಿದ್ದ ಯುವಕನ ಮೃತದೇಹ ಪತ್ತೆ
ಕಡಬ : ನದಿ ನೀರಿನ ಸೆಳೆತಕ್ಕೆ ನೀರು ಪಾಲಾಗಿದ್ದ ಯುವಕನ ಮೃತದೇಹ ಇಂದು ಉಪ್ಪಿನಂಗಡಿಯಲ್ಲಿ ಪತ್ತೆಯಾಗಿದೆ.
ಬುಧವಾರ ಸಂಜೆ ಕಡಬ ಸಮೀಪದ ಕೆಮ್ಮಾರ ಸೇತುವೆಯ ಬಳಿ ಸ್ಥಳೀಯ ನಿವಾಸಿ ಶಫೀಕ್ (19) ಎಂಬ ಯುವಕ ನೀರು ಪಾಲಾಗಿದ್ದು, ಭಾರೀ ಮಳೆಯ ಹಿನ್ನೆಲೆಯಲ್ಲಿ ನದಿಯಲ್ಲಿ ನೀರಿನ ಹರಿವು ಜೋರಾಗಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಉಪ್ಪಿನಂಗಡಿ ಪೊಲೀಸರು ಊರವರ ಸಹಾಯದಿಂದ ಯುವಕನ ಪತ್ತೆ ಕಾರ್ಯ ಆರಂಭಿಸಿದ್ದರು. ಬುಧವಾರ ರಾತ್ರಿಯಾದರೂ ಯಾವುದೇ ಸುಳಿವು ಸಿಗದ ಹಿನ್ನೆಲೆಯಲ್ಲಿ ಶೋಧ ಕಾರ್ಯವನ್ನು ಸ್ಥಗಿತಗೊಳಿಸಲಾಗಿತ್ತು. ಇಂದು ಮತ್ತೆ ಶೋಧ ಕಾರ್ಯ ಆರಂಭಿಸಿದ್ದು, ಸಂಜೆ ವೇಳೆಗೆ ಉಪ್ಪಿನಂಗಡಿಯ ನೇತ್ರಾವತಿ ಸೇತುವೆ ಬಳಿ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story