Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಲಿಂಗಾಯತ ಪಂಚಮಸಾಲಿ ಮೀಸಲಾತಿ: ಅಕ್ಟೋಬರ್...

ಲಿಂಗಾಯತ ಪಂಚಮಸಾಲಿ ಮೀಸಲಾತಿ: ಅಕ್ಟೋಬರ್ 1ರಿಂದ ಹೋರಾಟ ತೀವ್ರ; ಜಯಮೃತ್ಯುಂಜಯ ಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ2 Sept 2021 10:15 PM IST
share
ಲಿಂಗಾಯತ ಪಂಚಮಸಾಲಿ ಮೀಸಲಾತಿ: ಅಕ್ಟೋಬರ್ 1ರಿಂದ ಹೋರಾಟ ತೀವ್ರ; ಜಯಮೃತ್ಯುಂಜಯ ಸ್ವಾಮೀಜಿ

ಶಿವಮೊಗ್ಗ, ಸೆ.02: ಸೆಪ್ಟೆಂಬರ್ 30 ರೊಳಗೆ ಲಿಂಗಾಯತ ಪಂಚಮಸಾಲಿ, ಗೌಡ ಲಿಂಗಾಯತ, ಮಲೆಗೌಡ, ದೀಕ್ಷಾ ಲಿಂಗಾಯತರುಗಳಿಗೆ 2 ಎ ಹಾಗೂ ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿ ನೀಡದಿದ್ದರೆ, ಅಕ್ಟೋಬರ್ 1 ರಿಂದ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಘೋಷಣೆ ಮಾಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸ್ವಾಮೀಜಿ, 2 ಎ ಮೀಸಲಾತಿಗಾಗಿ ಕಳೆದ ಜನವರಿ 14 ರಿಂದ ಕೂಡಲ ಸಂಗಮದಿಂದ ಬೆಂಗಳೂರಿನ ವಿಧಾನಸೌಧದವರೆಗೆ ಸುಮಾರು 31 ದಿನಗಳ ಕಾಲ ಪಾದಯಾತ್ರೆ ನಡೆಸಲಾಗಿದೆ. ಹುಬ್ಬಳ್ಳಿಯಲ್ಲಿ ಸಮಾವೇಶ ಮಾಡಿ ಒತ್ತಾಯಿಸಿದ್ದೇವೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ 23 ದಿನಗಳ ಕಾಲ ನಿರಂತರ ಧರಣಿ ಸತ್ಯಾಗ್ರಹ ಮಾಡಿದ್ದೇವೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ 10 ಲಕ್ಷಕ್ಕಿಂತ ಹೆಚ್ಚು ಜನರನ್ನು ಸೇರಿಸಿ ವಿರಾಟ್ ಪ್ರದರ್ಶನ ಮಾಡಿದ್ದೇವೆ. ಇಷ್ಟೆಲ್ಲ ಆದ ಮೇಲೂ ಸರ್ಕಾರ ನಮಗೆ ಭರವಸೆ ನೀಡಿದೆಯೇ ಹೊರತು ಇನ್ನೂ ಆದೇಶ ಮಾಡಿಲ್ಲ ಎಂದರು.

ಸರ್ಕಾರ ಸದನದಲ್ಲಿ ಈ ವಿಷಯ ಪ್ರಸ್ತಾಪಿಸಿ ಸೆ. 15 ರೊಳಗೆ ಮೀಸಲಾತಿ ಪ್ರಕಟಿಸುವುದಾಗಿ ಭರವಸೆ ನೀಡಿತ್ತು. ಸರ್ಕಾರ ನೀಡಿದ ಭರವಸೆ ದಿನ ಸಮೀಪಿಸುತ್ತಿದೆ. ಸೆ. 15 ರ ವರೆಗೆ ನಾವು ಕಾಯುತ್ತೇವೆ. ನುಡಿದಂತೆ ನಡೆಯುವ ಸರ್ಕಾರ ಮೀಸಲಾತಿ ನೀಡುವಂತೆ ಒತ್ತಾಯಿಸುತ್ತೇವೆ. ಆಗಲೂ ನಮ್ಮ ಬೇಡಿಕೆ ಈಡೇರದಿದ್ದರೆ, ಮತ್ತೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಧರಣಿ ಸತ್ಯಾಗ್ರಹವನ್ನು ಮುಂದುವರೆಸುತ್ತೇವೆ ಎಂದರು.
2 ಎ ಮೀಸಲಾತಿಗಾಗಿ ಆಗ್ರಹಿಸಿ 4 ನೇ ಹಂತದಲ್ಲಿ ನಾವು ಮುಂದುವರೆದ ಚಳವಳಿಯ ಭಾಗವಾಗಿ ‘ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್ ಬೃಹತ್ ರಾಜ್ಯ ಅಭಿಯಾನ’ವನ್ನು ಆಗಸ್ಟ್ 26 ರಿಂದ ಮಲೆಮಹದೇಶ್ವರ ಬೆಟ್ಟದಿಂದ ಆರಂಭಿಸಲಾಗಿದೆ. ಈ ಅಭಿಯಾನವು ಅಕ್ಟೋಬರ್ 1 ರವರೆಗೆ ರಾಜ್ಯಾದ್ಯಂತ ನಡೆಯುತ್ತಿದೆ. ಸೆ. 3 ರಂದು ಶಿವಮೊಗ್ಗ ಜಿಲ್ಲೆಯ ಭದ್ರಾವತಿ, ಸೊರಬ, ಶಿಕಾರಿಪುರ, ಸಾಗರದಲ್ಲಿ ಕೂಡ ಮುಂದುವರೆಯಲಿದೆ. ಒಟ್ಟಾರೆ ಇಡೀ ರಾಜ್ಯಾದ್ಯಂತ ಈ ಅಭಿಯಾನದ ಮೂಲಕ ನಾವು ಸರ್ಕಾರವನ್ನು 2 ಎ ಮೀಸಲಾತಿ ನೀಡುವಂತೆ ಒತ್ತಾಯಿಸುತ್ತೇವೆ ಎಂದರು.

ವಿಧಾನಸಭೆ ಅಧಿವೇಶನದಲ್ಲಿ ಸರ್ಕಾರ ಕೊಟ್ಟ ಮಾತನ್ನು ನೆನಪಿಸುವುದು, ಮೀಸಲಾತಿ ಹಕ್ಕನ್ನು ಪಡೆಯಲು ನಮ್ಮ ನಿರಂತರ ಹೋರಾಟ ಇರುತ್ತದೆ. ಪಂಚ ಲಕ್ಷ ಸಂಖ್ಯೆಯಲ್ಲಿ ನಾವು ಭಾಗವಹಿಸುತ್ತೇವೆ. ಹೊಸ ಇತಿಹಾಸವನ್ನೇ ನಿರ್ಮಾನ ಮಾಡುತ್ತೇವೆ. ನಮ್ಮ ಹೋರಾಟ ಯಾರ ವಿರುದ್ಧವಲ್ಲ. ಎಲ್ಲ ಹಿಂದುಳಿದ ವರ್ಗಗಳಿಗೂ ಮೀಸಲಾತಿ ನೀಡಬೇಕೆಂಬುದು ನಮ್ಮ ಉದ್ದೇಶವಾಗಿದೆ. ಆ ಮೂಲಕ ನಮ್ಮ ಮಕ್ಕಳ ಶಿಕ್ಷಣಕ್ಕೆ, ಉದ್ಯೋಗಕ್ಕೆ ಮೀಸಲಾತಿ ಪಡೆಯಬೇಕು ಎಂಬುದು ನಮ್ಮ ಹಂಬಲ ಎಂದರು. 

ಶಿವಮೊಗ್ಗದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಶಿವಪ್ಪ ನಾಯಕ, ಬಸ್ ನಿಲ್ದಾಣಕ್ಕೆ ಕೆಳದಿ ಚನ್ನಮ್ಮ, ಹಾಗೂ ಗುಲ್ಬರ್ಗಾ ವಿವಿಗೆ ಬಸವಣ್ಣನವರ ಹೆಸರು ಇಡುವಂತೆ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಲ್ಲಿಕಾರ್ಜುನ ಸ್ವಾಮೀಜಿ, ಹೆಚ್.ವಿ. ಮಹೇಶ್ವರಪ್ಪ, ಹೆಚ್.ಎಂ. ಚಂದ್ರಶೇಖರಪ್ಪ, ಮಲ್ಲೇಶಪ್ಪ, ನಟರಾಜ್, ಶಿವಣ್ಣ, ಕುಮಾರ್ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X