Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಾಸಕರ ಭರವಸೆಗೆ ಒಪ್ಪಿಗೆ : ಪ್ರತಿಭಟನೆ...

ಶಾಸಕರ ಭರವಸೆಗೆ ಒಪ್ಪಿಗೆ : ಪ್ರತಿಭಟನೆ ನಿರ್ಧಾರ ಕೈಬಿಟ್ಟ ವರ್ತಕ ಸಂಘ

ವಾರ್ತಾಭಾರತಿವಾರ್ತಾಭಾರತಿ3 Sept 2021 10:37 PM IST
share
ಶಾಸಕರ ಭರವಸೆಗೆ ಒಪ್ಪಿಗೆ : ಪ್ರತಿಭಟನೆ ನಿರ್ಧಾರ ಕೈಬಿಟ್ಟ ವರ್ತಕ ಸಂಘ

ಪುತ್ತೂರು: ಶಾಸಕರು ನೀಡಿದ ಭರವಸೆಯ ಹಿನ್ನಲೆಯಲ್ಲಿ ವಾರಾಂತ್ಯ ಕರ್ಫ್ಯೂ ಸಂದರ್ಭದಲ್ಲಿ ಅಂಗಡಿ ಮುಂಗಟ್ಟು ತೆರೆದು ಪ್ರತಿಭಟನೆ ನಡೆಸುವುದಾಗಿ ವಾಣಿಜ್ಯ ಮತ್ತು ಕೈಗಾರಿಕ ಸಂಘ ಹಾಗೂ ವರ್ತಕ ಸಂಘದ  ಕೈಗೊಂಡ ನಿರ್ಣಯವನ್ನು ಕೈಬಿಟ್ಟಿದ್ದಾರೆ. ವಾರಾಂತ್ಯ ಕರ್ಫ್ಯೂ ಮಾರ್ಗಸೂಚಿಯನ್ನು ಪಾಲಿವುದಾಗಿ ತಿಳಿಸಿದ್ದಾರೆ. 

ವೀಕೆಂಡ್ ಕರ್ಫ್ಯೂ ತೆರವುಗೊಳಿಸುವಂತೆ ಆಗ್ರಹಿಸಿ ವರ್ತಕ ಸಂಘ ಪ್ರತಿಭಟನೆ ನಡೆಸಲು ನಿರ್ಧಾರ ಮಾಡಿದ ಹಿನ್ನಲೆಯಲ್ಲಿ ಶುಕ್ರವಾರ ಪುತ್ತೂರು ನಗರಸಭಾ ಸಭಾಭವನದಲ್ಲಿ ತಹಸೀಲ್ದಾರ್ ರಮೇಶ್ ಬಾಬು ನೇತೃತ್ವದಲ್ಲಿ ತುರ್ತು ಸಭೆ ನಡೆಸಿ ವರ್ತಕರ ಮನವೊಲಿಸಲಾಯಿತು. 

ಸಭೆಯಲ್ಲಿ ತಹಶೀಲ್ದಾರ್ ಮನವಿಯಂತೆ ವರ್ತಕರು ತಮ್ಮ ಅಂಗಡಿ ತೆರೆದು ಪ್ರತಿಭಟನೆ ನಡೆಸುವ ನಿರ್ಧಾರವನ್ನು ಬದಲಿಸಿ ವೀಕೆಂಡ್ ಕರ್ಫ್ಯೂ ಗೆ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ. ಈ ನಡುವೆ ಕರ್ಫ್ಯೂ ತೆರವು ಮಾಡುವ ಬಗ್ಗೆ ಮುಂದಿನ ವಾರದಲ್ಲಿ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೇರಿದಂತೆ ಕಂದಾಯ ಕಾರ್ಯದರ್ಶಿಯವರಿಗೆ ಮಾತುಕತೆ ನಡೆಸಿದ್ದು, ವರ್ತಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದ ಶಾಸಕರು ಕಾನೂನಿಗೆ ಸಹಕಾರ ನೀಡುವಂತೆ ವರ್ತಕರಲ್ಲಿ ವಿನಂತಿದ್ದರು.

ಸಭೆಯಲ್ಲಿ ಮಾತನಾಡಿದ ತಹಶೀಲ್ದಾರ್ ರಮೇಶ್ ಬಾಬು ಅವರು ದಕ್ಷಿಣ ಕನ್ನಡ, ಕೊಡಗು, ಉಡುಪಿ, ಉತ್ತರ ಕನ್ನಡದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಬೇರೆ ಜಿಲ್ಲೆಯಲ್ಲಿರುವ ಕೋವಿಡ್ ಪಾಸಿಟಿವಿಟಿಗಿಂತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಪಾಸಿಟಿವಿಟಿ ಶೇ.2.8 ಇದೆ. ಈ ನಾಲ್ಕು  ಜಿಲ್ಲೆಗಳನ್ನು ಬಿಟ್ಟು ಉಳಿದ 27 ಜಿಲ್ಲೆಗಳಲ್ಲಿ ವೀಕೆಂಡ್ ಕಫ್ರ್ಯೂವನ್ನು ತೆಗೆಯಲಾಗಿದೆ. ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗೆ ಸಂಬಂಧಿಸಿ ವೀಕೆಂಡ್ ಕರ್ಫ್ಯೂ ತೆರವು ಮಾಡಲು ಸೋಮವಾರ ದಿನ ಮುಖ್ಯಮಂತ್ರಿಗಳ ಜೊತೆ ಶಾಸಕರು ಸಚಿವರು ಮಾತುಕತೆ ನಡೆಸಲಿದ್ದಾರೆ. ಮುಂದಿನ ವಾರ ವೀಕೆಂಡ್ ಖಂಡಿತವಾಗಿಯೂ ತೆರವಾಗಲಿದೆ. ಈ ವಾರ ವರ್ತಕರೆಲ್ಲರು ಸಹಕಾರ ನೀಡಿ ವೀಕೆಂಡ್ ಕರ್ಫ್ಯೂ ವಿನ ಮಾರ್ಗಸೂಚಿ ಪಾಲಿಸಿ ಪ್ರತಿಭಟನೆ ಮಾಡದಂತೆ ತಾಲೂಕು ಆಡಳಿತ ಪರವಾಗಿ ನಾನು ಮನವಿ ಮಾಡುತ್ತಿದ್ದೇನೆ ಎಂದು ತಿಳಿಸಿದರು. 

ಶಾಸಕರು ಮುಖ್ಯಮಂತ್ರಿಗಳ ಜೊತೆ ಮಾತನಾಡಿ ಮುಂದಿನ ವಾರದಿಂದ ಖಂಡಿತವಾಗಿಯೂ ವೀಕೆಂಡ್ ಕರ್ಫ್ಯೂ ವನ್ನು ನಿಲ್ಲಿಸಲಾಗುವುದು ಎಂದು ಭರವಸೆ ಕೊಟ್ಟಿದ್ದಾರೆ. ಅಲ್ಲದೆ ತಹಸೀಲ್ದಾರ್ ಅವರ ಮನವಿ ಮೇರೆಗೆ ಮನಸ್ಸಿಗೆ ಬೇಸರವಾದರೂ ಒಪ್ಪುವ ನಿರ್ಧಾರಕ್ಕೆ ಬಂದಿದ್ದೇವೆ ಎಂದರು.

ಪುತ್ತೂರು ನಗರಸಭಾ ಪೌರಾಯುಕ್ತ ಮಧು ಎಸ್ ಮನೋಹರ್ ಅವರು ಮಾತನಾಡಿ ಪಾಸಿಟಿವಿಟಿ ರೇಟ್ 2 ಕ್ಕಿಂತ ಕಡಿಮೆ ಆದರೆ ಶಾಲೆಯೂ ಆರಂಭಗೊಳ್ಳುತ್ತದೆ. ಆದರೆ ಕೇರಳದವರು ದಕ್ಷಿಣ ಕನ್ನಡವನ್ನು ಜಾಸ್ತಿ ಅವಲಂಭಿಸಿದ ಹಿನ್ನೆಲೆಯಲ್ಲಿ ವೀಕೆಂಡ್ ಕಫ್ರ್ಯೂ ಜಾರಿಯಲ್ಲಿದೆ ಎಂದರು.

ಆಕ್ಷೇಪಿಸಿದ ಕೃಷ್ಣನಾರಾಯಣ ಮುಳಿಯ ಅವರು ಕೇರಳದ ಗಡಿ ಭಾಗದಲ್ಲಿ ಚೆಕ್ ಪೋಸ್ಟ್ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ನಕಲಿ ಪ್ರಮಾಣ ಪತ್ರದ ಮೂಲಕ ಬರುತ್ತಿದ್ದಾರೆ, ಪ್ರಮಾಣ ಪತ್ರಕ್ಕೆ ಕೋಡ್ ಸ್ಕ್ಯಾನರ್ ಅಳವಡಿಸಿ ಎಂದರು. ಉತ್ತರಿಸಿದ ತಹಶೀಲ್ದಾರ್ ಈ ಕುರಿತು ಈಗಾಗಲೇ ಪಳ್ಳತ್ತೂರು, ಸ್ವರ್ಗ ಮತ್ತು ಪಾಣಾಜೆಯಲ್ಲಿ ಚೆಕ್ ಪೋಸ್ಟ್ ಕಾರ್ಯನಿರ್ವಹಿಸುತ್ತಿದೆ ಎಂದರು.

ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ,  ವರ್ತರಕ ಸಂಘದ ಪ್ರಧಾನ ಕಾರ್ಯದರ್ಶಿ ಅರವಿಂದ ಭಗವಾನ್, ಸ್ವರ್ಣೋಧ್ಯಮಿ ಕೃಷ್ಣನಾರಾಯಣ ಮಳಿಯ ಸೇರಿದಂತೆ ಹಲವಾರು ಮಂದಿ ವರ್ತಕರು ಸಭೆಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X