Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮದುವೆಗೆ ಒಪ್ಪಿದ್ದರೂ ಮಗಳು ಸಾಕಷ್ಟು...

ಮದುವೆಗೆ ಒಪ್ಪಿದ್ದರೂ ಮಗಳು ಸಾಕಷ್ಟು ಕಿರುಕುಳ ಅನುಭವಿಸಿದಳು: ಪ್ರಿಯಕರನಿಂದ ಕೊಲೆಗೀಡಾದ ಸೌಮ್ಯಶ್ರೀ ತಾಯಿಯ ಅಳಲು

ವಾರ್ತಾಭಾರತಿವಾರ್ತಾಭಾರತಿ4 Sept 2021 8:26 PM IST
share
ಮದುವೆಗೆ ಒಪ್ಪಿದ್ದರೂ ಮಗಳು ಸಾಕಷ್ಟು ಕಿರುಕುಳ ಅನುಭವಿಸಿದಳು: ಪ್ರಿಯಕರನಿಂದ ಕೊಲೆಗೀಡಾದ ಸೌಮ್ಯಶ್ರೀ ತಾಯಿಯ ಅಳಲು

ಉಡುಪಿ, ಸೆ.4: ‘ನನ್ನ ಮಗಳಿಗೆ ಮದುವೆ ಮಾಡಿಕೊಡುವಂತೆ ಐದಾರು ಬಾರಿ ಅವರ ಮನೆಗೆ ಹೋಗಿ ಕೇಳಿಕೊಂಡಿದ್ದೆವು. ಆದರೆ ಆತ ಎರಡು ವರ್ಷ ಗಳ ಕಾಲ ಮದುವೆ ಆಗುವುದಿಲ್ಲ ಹೇಳಿ ಮುಂದೂಡಿದನು. ಆತನ ಮನೆಯವರು ಕೂಡ ಸರಿಯಾಗಿ ಸ್ಪಂದಿಸಿಲ್ಲ. ಆತನಿಂದ ನನ್ನ ಮಗಳು ಮೂರು ವರ್ಷಗಳ ಕಾಲ ಕಿರುಕುಳ ಅನುಭವಿಸಿದಳು. ಇದನ್ನು ತಾಳಲಾರದೆ ಆಕೆ ಕೊನೆಗೆ ಬೇರೆ ಮದುವೆಗೆ ಒಪ್ಪಿಗೆ ಸೂಚಿಸಿದಳು’ ಎಂದು ಇತ್ತೀಚೆಗೆ ಪ್ರಿಯಕರನಿಂದ ಕೊಲೆಯಾದ ಸೌಮ್ಯಶ್ರೀಯ ತಾಯಿ ಪ್ರಮೀಳಾ ಭಂಡಾರಿ ಕಣ್ಣೀರಿಡುತ್ತ ಹೇಳಿದರು.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂದೇಶ್ ಕುಲಾಲ್ ಮತ್ತು ನನ್ನ ಮಗಳು ಪ್ರೀತಿಸುತ್ತಿದ್ದ ವಿಚಾರ ನಮಗೆ ಮೂರು ನಾಲ್ಕು ವರ್ಷಗಳ ಹಿಂದೆ ಗೊತ್ತಾಯಿತು. ಇವರಿಬ್ಬರ ಮದುವೆಗೆ ಒಪ್ಪಿ, ಸಂದೇಶ್‌ನ ಮನೆಗೆ ಹಲವು ಬಾರಿ ಹೋಗಿ ಮದುವೆ ಮಾಡಿಕೊಡುವಂತೆ ಕೇಳಿಕೊಂಡಿದ್ದೆವು. ಮೊದಲು ಮಾವನಿಗೆ ಮದುವೆ ಆಗಬೇಕೆಂದು ಅವರು ಸಬೂಬು ನೀಡಿದರು. ನಂತರ ಅಣ್ಣನಿಗೆ ಮದುವೆಯಾಗಬೇಕೆಂದು ಹೇಳಿ ಮತ್ತೆ ದಿನ ಮುಂದೂಡಿದರು ಎಂದರು.

ಪೊಲೀಸ್ ಠಾಣೆಗೆ ದೂರು

‘ಇಷ್ಟೆಲ್ಲಾ ಕೇಳಿಯೂ ಸಂದೇಶ್, ಆಕೆಗೆ ನಿರಂತರ ಕಿರುಕುಳ ನೀಡುತ್ತಿದ್ದನು. ಈ ಮಧ್ಯೆ ಆಕೆಯ ತಂದೆಗೆ ಹೃದಯಾಘಾತವಾಗಿತ್ತು. ಇನ್ನೊಮ್ಮೆ ಹೃದಯಾಘಾತ ವಾದರೆ ಅವರ ಜೀವಕ್ಕೆ ಅಪಾಯವಿದೆ ಎಂದು ವೈದ್ಯರು ತಿಳಿಸಿದರು. ಅದಕ್ಕೆ ನಾವು ಮತ್ತೆ ಸಂದೇಶ್ ಮನೆಯವರನ್ನು ಸಂಪರ್ಕಿಸಿ ಮದುವೆಗೆ ಒತ್ತಾಯಿಸಿದೆವು. ಅದಕ್ಕೆ ಅವರು ಎರಡು ವರ್ಷ ಬಿಟ್ಟು ಮದುವೆಯಾಗುವುದಾಗಿ ಹೇಳಿದರು. ರಿಜಿಸ್ಟಾರ್ ಮದುವೆ ಆಗುವಂತೆ ಕೇಳಿಕೊಂಡೆವು. ಅದಕ್ಕೂ ಆತ ಒಪ್ಪಲಿಲ್ಲ. ಇದರಿಂದ ನನ್ನ ಮಗಳು ಸಾಕಷ್ಟು ನೊಂದು ಕೊಂಡಳು’ ಎಂದು ಅವರು ತಿಳಿಸಿದರು.

ಹೀಗೆ ಸಂದೇಶ್, ಆಕೆಗೆ ನಿರಂತರ ಕಿರುಕುಳ ನೀಡುತ್ತಿದ್ದನು. ಅದಕ್ಕೆ ಒಂದು ತಿಂಗಳ ಹಿಂದೆ ಉಡುಪಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದೆವು. ಅದರಂತೆ ಪೊಲೀಸರು ಆತನನ್ನು ಕರೆದು ಬುದ್ದಿ ಹೇಳಿ ಕಳುಹಿಸಿದ್ದರು ಎಂದ ಅವರು, ಮೊಬೈಲ್, ಲ್ಯಾಪ್‌ಟಾಪ್ ದುರಸ್ತಿ ಸೇರಿದಂತೆ ಎಲ್ಲ ಕೆಲಸವನ್ನು ಆತ ಅವಳಿಂದಲೇ ಮಾಡಿಸುತ್ತಿದ್ದನು. ಮದುವೆಗೆ ಒತ್ತಡ ಹಾಕಿದ್ದಕ್ಕೆ ನನ್ನ ಹತ್ತಿರ ಹಣ ಇಲ್ಲ, ಬೇಕಾದರೆ ನೀನು ಐದು ಲಕ್ಷ ರೂ. ಕೊಡು ಎಂದು ಆತ ಹೇಳಿದ್ದನು. ಆದರೂ ನನ್ನ ಮಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸಲಾಗುತ್ತಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸೌಮ್ಯಶ್ರೀ ಅಣ್ಣ ಸುನೀಲ್, ಅವರ ಪತ್ನಿ ನಿಕ್ಷೀತಾ, ಸಂಬಂಧಿ ಜಗದೀಶ್, ಅಶೋಕ್ ಕುಮಾರ್ ಅಲೆವೂರು, ಸೋಮಶೇಖರ್ ಭಂಡಾರಿ ಉಪಸ್ಥಿತರಿದ್ದರು.

‘ಸೆ.20ಕ್ಕೆ ಮದುವೆ ನಿಗದಿಯಾಗಿತ್ತು'

‘ಸೌಮ್ಯಶ್ರೀಗೆ ನಿಶ್ಛಿತಾರ್ಥ ಆಗಿ ಸೆ.20ಕ್ಕೆ ಮದುವೆ ನಿಗದಿಯಾಗಿತ್ತು. ಅದಕ್ಕಾಗಿ ಆಕೆ ಕೊಲೆಯಾಗುವ ದಿನ ಕೆಲಸಕ್ಕೆ ರಾಜೀನಾಮೆ ನೀಡಿದ್ದಳು. ಆ ಹಿನ್ನೆಲೆಯಲ್ಲಿ ಮೂರು ವರ್ಷಗಳ ಕಾಲ ದುಡಿದ ಆಕೆಗೆ ಬ್ಯಾಂಕಿನಲ್ಲಿ ಬೀಳ್ಕೊಡುಗೆ ಸಮಾರಂಭ ವನ್ನು ಕೂಡ ಏರ್ಪಡಿಸಲಾಗಿತ್ತು’ ಎಂದು ಸೌಮ್ಯಶ್ರೀ ಅಣ್ಣ ಸುನೀಲ್ ತಿಳಿಸಿದರು.

ಆತ ಈ ಕೃತ್ಯ ಎಸಗುವ ಸಮಯದಲ್ಲಿ ಡ್ರಗ್ಸ್ ಸೇವನೆ ಮಾಡಿರುವ ಸಾಧ್ಯತೆ ಕೂಡ ಇದೆ. ಯಾಕೆಂದರೆ ಯಾವುದೇ ಸಾಮಾನ್ಯ ವ್ಯಕ್ತಿಗೆ ಇಂತಹ ಕೃತ್ಯ ಎಸಗಲು ಸಾಧ್ಯವೇ ಇಲ್ಲ. ಮನೆಯವರು ಸರಿಯಾಗಿ ಸ್ಪಂದಿಸಿ ಒಪ್ಪಿದ್ದರೆ ಇಂದು ಅವರಿಬ್ಬರು ಮದುವೆಯಾಗಿ ಉತ್ತಮ ಜೀವನ ನಡೆಸುತ್ತಿದ್ದರು. ಇಬ್ಬರ ಜೀವ ಕೂಡ ಉಳಿಯುತ್ತಿತ್ತು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X