Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೌರಿ ಲಂಕೇಶ್ ಹತ್ಯೆ ಪ್ರಕರಣ : ನಾಲ್ಕು...

ಗೌರಿ ಲಂಕೇಶ್ ಹತ್ಯೆ ಪ್ರಕರಣ : ನಾಲ್ಕು ವರ್ಷ ಸಂದರೂ ಇನ್ನೂ ಆರಂಭಗೊಳ್ಳದ ವಿಚಾರಣೆ

ವಾರ್ತಾಭಾರತಿವಾರ್ತಾಭಾರತಿ4 Sept 2021 11:14 PM IST
share
ಗೌರಿ ಲಂಕೇಶ್ ಹತ್ಯೆ ಪ್ರಕರಣ : ನಾಲ್ಕು ವರ್ಷ ಸಂದರೂ ಇನ್ನೂ ಆರಂಭಗೊಳ್ಳದ ವಿಚಾರಣೆ

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ನಡೆದು ನಾಲ್ಕು ವರ್ಷಗಳೇ ಸಂದರೂ, ಹಿಂದುತ್ವ ಸಂಘಟನೆಗೆ ಸೇರಿದವರೆನ್ನಲಾದ ಪ್ರಕರಣದ 17 ಆರೋಪಿಗಳ ವಿಚಾರಣೆ ಇನ್ನಷ್ಟೇ ಆರಂಭಗೊಳ್ಳಬೇಕಿದೆ.

ನಕಲಿ ಗುರುತು ಪತ್ರಗಳನ್ನು ಹಾಗೂ ತಮ್ಮ ಗುರುತುಪರಿಚಯದವರ ಮೂಲಕ ಆರೋಪಿಗಳು ಸಿಮ್ ಕಾರ್ಡ್‍ಗಳನ್ನು ಪಡೆದಿರುವುದಕ್ಕೆ ಸಂಬಂಧಿಸಿದಂತೆ ಕಳೆದ ಕೆಲ ವಾರಗಳಲ್ಲಿ ಹೊಸ ಚಾರ್ಜ್ ಶೀಟ್‍ಗಳನ್ನು ಸಲ್ಲಿಸಲಾಗಿದೆ.

ಕಳೆದ ತಿಂಗಳು ಮಣಿಪಾಲದಲ್ಲಿ ಪ್ರಮುಖ ಆರೋಪಿ ಅಮೋಲ್ ಕಾಳೆ ವಿರುದ್ಧ ಅಕ್ರಮವಾಗಿ ಸಿಮ್ ಕಾರ್ಡ್ ಪಡೆದಿರುವುದಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು. ಕೊಲೆಗೆ ಪೂರ್ವತಯಾರಿ ಉದ್ದೇಶದಿಂದ ಈ ಸಿಮ್ ಪಡೆದುಕೊಳ್ಳಲಾಗಿತ್ತು. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳಾದ ಮೋಹನ್ ನಾಯಕ್ ಹಾಗೂ ಸುಜೀತ್ ಕುಮಾರ್ ಎಂಬವರನ್ನು ಕುಶಾಲನಗರದ ಪೊಲೀಸರು ವಿಚಾರಣೆ ನಡೆಸಿದ್ದರು.

ಕುಶಾಲನಗರದ ಮಾಜಿ ಬಿಎಸ್ಸೆನ್ನೆಲ್ ಅಧಿಕಾರಿಯೊಬ್ಬರು ಹಿಂದುತ್ವ ಸಂಘಟನೆ ಸನಾತನ ಸಂಸ್ಥೆಯ ಸದಸ್ಯರಿಗೆ  ಸೂಕ್ತ ನಿಯಮಾವಳಿ ಪಾಲಿಸದೆ ಸಿಮ್ ಕಾರ್ಡ್‍ಗಳನ್ನು ಒದಗಿಸಿದ್ದರು ಎಂದು ತನಿಖೆಯಿಂದ ತಿಳಿದು ಬಂದಿತ್ತು. ಈ ಕುರಿತಂತೆ ಪೊಲೀಸರು ಮಾಜಿ ಬಿಎಸ್ಸೆನ್ನೆಲ್ ಅಧಿಕಾರಿ ವಿರುದ್ಧ ಪ್ರಕರಣ ದಾಖಲಿಸಿದ್ದರೂ ಸಣ್ಣ ದಂಡ ಮೊತ್ತವನ್ನು ಲೋಕ್ ಅದಾಲತ್ ನ್ಯಾಯಾಲಯದ ಮೂಲಕ ಸಲ್ಲಿಸುವುದರೊಂದಿಗೆ ಪ್ರಕರಣವನ್ನು ಇತ್ಯರ್ಥಪಡಿಸಲಾಗಿದೆ.

ಸನಾತನ ಸಂಸ್ಥೆ ಮಾತ್ರ ತನಗೂ ಆರೋಪಿಗಳಿಗೂ ನಂಟು ಇರುವುದನ್ನು ನಿರಾಕರಿಸಿತ್ತು. ಮಣಿಪಾಲದಲ್ಲಿ ಸಲ್ಲಿಸಲಾಗಿರುವ ಚಾರ್ಜ್ ಶೀಟ್ ಪ್ರಕಾರ ಆರೋಪಿ ಕಾಳೆ ತನ್ನ ಹೆಸರು ವಿನೋದ್ ಆಲಿಯಾಸ್ ಸಮೀರ್ ಹಾಗೂ ಕುಶಾಲನಗರ ಸಮೀಪದ ಬೈಲಕುಪ್ಪೆಯ ಕೃಷಿ ಕಾರ್ಮಿಕ ಎಂದು ಸಿಮ್ ಕಾರ್ಡ್ ಪಡೆದಿದ್ದನೆಂದು ತಿಳಿದು ಬಂದಿದೆ. ಇದೇ ರೀತಿ ಹಲವಾರು ಕಡೆಗಳಿಂದ ಸಿಮ್ ಪಡೆದಿರುವ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರಕರಣದಲ್ಲಿ ಶಾಮೀಲಾಗಿದೆಯೆನ್ನಲಾದ ಹಿಂದುತ್ವ ಸಂಘಟನೆಯು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂವಹನ ನಡೆಸಲು ಪ್ರತ್ಯೇಕ ಮೊಬೈಲ್ ಫೋನ್ ಬಳಸಿತ್ತೆಂದು ತಿಳಿದು ಬಂದಿದೆ. ಕಾಳೆ,  ಹಾಗೂ ಕುಮಾರ್ ಬಂಧನದ ನಂತರ ಕಾಳೆ ಚೀಲದಲ್ಲಿ 20 ಮೊಬೈಲ್ ಫೋನ್ ಹಾಗೂ ಕುಮಾರ್ ಉಡುಪಿಯಲ್ಲಿ ವಾಸಿಸುತ್ತಿದ್ದ ಮನೆಯ ಅಡುಗೆ ಕೋಣೆ ಶೆಲ್ಫ್‍ನಲ್ಲಿ 22 ಮೊಬೈಲ್ ಫೋನ್‍ಗಳಿರುವುದು ಪತ್ತೆಯಾಗಿದ್ದವು.

ಪ್ರಮುಖ ಚಾರ್ಜ್‍ಶೀಟ್ ನವೆಂಬರ್ 23, 2018ರಂದು ಸಲ್ಲಿಸಲಾಗಿತ್ತು. ಆದರೆ ಆರೋಪಿಗಳು ಸಲ್ಲಿಸಿರುವ ಹಲವಾರು ಅರ್ಜಿಗಳು ಹಾಗೂ ಆರೋಪಿಗಳನ್ನು ವಿವಿಧ ಜೈಲುಗಳಲ್ಲಿರಿಸಿರುವುದು ಹಾಗೂ ಪ್ರಸಕ್ತ ಕೋವಿಡ್ ಸಾಂಕ್ರಾಮಿಕದಿಂದಾಗಿ ವಿಚಾರಣೆ ಆರಂಭದಲ್ಲಿ ವಿಳಂಬವಾಗಿದೆ.

ಆಗಸ್ಟ್ 9ರಂದು ಎರಡು ಆರೋಪಿಗಳ ಪರ ವಾದಿಸುತ್ತಿದ್ದ ವಕೀಲರಿಗೆ  ಜಾಮೀನಿಗೆ ಸಲ್ಲಿಸಿದ್ದ ಹೊಸ ಅರ್ಜಿಗೆ ಸಂಬಂಧಿಸಿದಂತೆ ವಾದ ಮಂಡನೆಗೆ ಸೆಷನ್ ಕೋರ್ಟ್ ಸೂಚಿಸಿದ್ದರೂ, ಸುಪ್ರೀಂ ಕೋರ್ಟ್‍ನಲ್ಲಿನ ಬಾಕಿ ಪ್ರಕರಣ ಉಲ್ಲೇಖಿಸಿ ಹೆಚ್ಚಿನ ಸಮಯಾವಕಾಶ ಕೋರಲಾಗಿತ್ತು. ಆಗಸ್ಟ್ 17ರಂದು ಮತ್ತೆ ಮುಂದೂಡಿಕೆಯನ್ನು ಮೇಲಿನ ಕಾರಣ ನೀಡಿಯೇ ಕೋರಲಾಗಿತ್ತು.

ಆಗಸ್ಟ್ 21ರಂದು ಪ್ರಕರಣ ಮತ್ತೆ ವಿಚಾರಣೆಗೆ ಬಂದಾಗ ಜಾಮೀನು ಅರ್ಜಿಯನ್ನು ತಿರಸ್ಕರಿಸಲಾಗಿತ್ತು. ಇನ್ನೂ ಹೆಚ್ಚಿನ ಸಮಯ ನೀಡಲು ಯಾವುದೇ ಆಧಾರವಿಲ್ಲ. ಈ ಪ್ರಕರಣದಲ್ಲಿ ಒಂದೊಂದರಂತೆ ಅರ್ಜಿಯನ್ನು ಸಲ್ಲಿಸಿದ ಕಾರಣ ವಿಚಾರಣೆಯಲ್ಲಿ ಯಾವ ಪ್ರಗತಿಯೂ ಆಗಿಲ್ಲ" ಎಂದು ಹೇಳಿದ ನ್ಯಾಯಾಲಯವು ಈ ವಿಷಯ ಕುರಿತಂತೆ ಮನವಿ ಸಲ್ಲಿಸಲು ಸೂಚಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X