Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪ್ಯಾರಿಸ್: 2015/11 ದಾಳಿಯ ವಿಚಾರಣೆ...

ಪ್ಯಾರಿಸ್: 2015/11 ದಾಳಿಯ ವಿಚಾರಣೆ ಆರಂಭ‌

ವಾರ್ತಾಭಾರತಿವಾರ್ತಾಭಾರತಿ5 Sept 2021 10:26 PM IST
share

ಪ್ಯಾರಿಸ್, ಸೆ.5: ಫ್ರಾನ್ಸ್ ನ ಆಧುನಿಕ ಯುಗದ ಕಾನೂನು ಇತಿಹಾಸದಲ್ಲೇ ಅತ್ಯಂತ ಬೃಹತ್ ನ್ಯಾಯವಿಚಾರಣೆ ಎಂದು ಪರಿಗಣಿಸಲಾಗಿರುವ 2015ರ ನವೆಂಬರ್ನಲ್ಲಿ ನಡೆದ ದಾಳಿ ಪ್ರಕರಣದ ವಿಚಾರಣೆ ಬುಧವಾರ ಆರಂಭವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ದಯೇಷ್ ಎಂಬ ಭಯೋತ್ಪಾದಕ ಗುಂಪಿನ ಸದಸ್ಯರು ಬಾರ್, ರೆಸ್ಟಾರೆಂಟ್ ಹಾಗೂ ಸಂಗೀತ ಕಾರ್ಯಕ್ರಮದ ಸ್ಥಳದ ಮೇಲೆ ನಡೆಸಿದ ಆತ್ಮಹತ್ಯಾ ಬಾಂಬ್ ದಾಳಿ ಮತ್ತು ಗುಂಡಿನ ದಾಳಿಯಲ್ಲಿ 130 ಮಂದಿ ಹತರಾಗಿದ್ದರು.

 ಕೇಂದ್ರ ಪ್ಯಾರಿಸ್ನ ಇಲೆಡೆಲ ಸೈಟ್ನ ಚಾರಿತ್ರಿಕ ನ್ಯಾಯಾಲಯದಲ್ಲಿ 20 ಪ್ರತಿವಾದಿಗಳ ಪೈಕಿ 14 ಮಂದಿ ಮತ್ತು ಜೀವಂತವಾಗಿರುವ ಏಕೈಕ ದಾಳಿಕೋರ ಸಲೇಹ್ ಅಬ್ದೆಸ್ಲಾಮ್ ಉಪಸ್ಥಿತಿಯಲ್ಲಿ ನ್ಯಾಯವಿಚಾರಣೆ ಪ್ರಕ್ರಿಯೆ ಆರಂಭವಾಗಿದೆ. 2022ರ ಮೇ ತಿಂಗಳಿನವರೆಗೆ ನಡೆಯಲಿರುವ ನ್ಯಾಯ ವಿಚಾರಣೆಯಲ್ಲಿ ಸುಮಾರು 330 ನ್ಯಾಯವಾದಿಗಳು, 300 ಸಂತ್ರಸ್ತರು ಹಾಗೂ ಮಾಜಿ ಅಧ್ಯಕ್ಷ ಫ್ರಾಂಕೋಯಿಸ್ ಹೊಲಾಂಡೆಯವರ ಹೇಳಿಕೆ ದಾಖಲಿಸಲಾಗುವುದು.

ಆತ್ಮಹತ್ಯಾ ಬಾಂಬ್ ದಾಳಿಕೋರರಲ್ಲಿ ಒಬ್ಬನಾಗಿದ್ದ ಅಬ್ದೆಸ್ಲಾಮ್ನ ಸೊಂಟಕ್ಕೆ ಸಿಕ್ಕಿಸಿದ್ದ ಬಾಂಬ್ ತಾಂತ್ರಿಕ ವೈಫಲ್ಯದಿಂದ ಸ್ಫೋಟಗೊಳ್ಳಲು ವಿಫಲವಾದ ಬಳಿಕ ಆತ ಅಲ್ಲಿಂದ ಪರಾರಿಯಾಗಿದ್ದ. ಬಳಿಕ ಆತನನ್ನು ಬ್ರಸೆಲ್ಸ್ ನಲ್ಲಿ ಬಂಧಿಸಲಾಗಿತ್ತು. ಇತರ 14 ಆರೋಪಿಗಳ ವಿಚಾರಣೆಯೂ ನಡೆಯುವ ನಿರೀಕ್ಷೆಯಿದೆ. ಇತರ 6 ಶಂಕಿತ ಆರೋಪಿಗಳ ಗೈರುಹಾಜರಿಯಲ್ಲಿ ವಿಚಾರಣೆ ನಡೆಯಲಿದೆ. ಇವರಲ್ಲಿ 5 ಮಂದಿ ಸಿರಿಯಾದ ಬಾಂಬ್ ದಾಳಿಯಲ್ಲಿ ಮೃತರಾಗಿರುವರೆಂದು ಶಂಕಿಸಲಾಗಿದೆ. ದಾಳಿಯ ಪ್ರಧಾನ ಸಂಚುಕೋರ ಬೆಲ್ಜಿಯಂ ಮೂಲದ ಅಬ್ದೆಲ್ ಹಮೀದ್ ಅಬೌದ್ ನನ್ನು ಘಟನೆ ನಡೆದ 5 ದಿನದ ಬಳಿಕ ಪ್ಯಾರಿಸ್ ನಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X