Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೈತರ ಶ್ರಮಕ್ಕೆ ಬೆಲೆ ನೀಡಲು ಒತ್ತು:...

ರೈತರ ಶ್ರಮಕ್ಕೆ ಬೆಲೆ ನೀಡಲು ಒತ್ತು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ5 Sept 2021 11:44 PM IST
share
ರೈತರ ಶ್ರಮಕ್ಕೆ ಬೆಲೆ ನೀಡಲು ಒತ್ತು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಸೆ. 5: `ಕೃಷಿ ಕ್ಷೇತ್ರ ಬೆಳೆದರೂ, ಕೃಷಿ ಬೆಳೆಸಿದ ರೈತ ಇಂದಿಗೂ ಸಂಕಷ್ಟದಲ್ಲಿದ್ದಾನೆ. ರೈತರ ಶ್ರಮಕ್ಕೆ ಸಂಪೂರ್ಣ ಬೆಲೆ ನೀಡುವ ಕಾಲ ಸನ್ನಿಹಿತವಾಗಿದ್ದು, ಇದಕ್ಕಾಗಿ ಸಮಗ್ರ ಕೃಷಿ ನೀತಿಯಡಿ ಕೊಯ್ಲಿನ ನಂತರದ ನಿರ್ವಹಣೆಗೆ ಒತ್ತು ನೀಡಲಾಗುವುದು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರವಿವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುವ `ಮುಖ್ಯಮಂತ್ರಿಗಳ ರೈತ ವಿದ್ಯಾನಿಧಿ' ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, `ಕೃಷಿ ಉತ್ಪನ್ನಗಳ ವೈಜ್ಞಾನಿಕ ಸಂಗ್ರಹ, ಸಾಗಾಣಿಕೆ, ಮಾರುಕಟ್ಟೆ ಸೌಲಭ್ಯ ಮತ್ತಿತರ ಸವಲತ್ತುಗಳ ಮೂಲಕ ರೈತ ಬೆಳೆದ ಬೆಳೆಗೆ ಉತ್ತಮ ಬೆಲೆ ದೊರಕಿಸಲು ಪ್ರಯತ್ನಿಸಲಾಗುವುದು' ಎಂದು ತಿಳಿಸಿದರು.

`ಕೃಷಿ ವಿಶ್ವ ವಿದ್ಯಾನಿಲಯಗಳು ತಾವು ಸಂಶೋಧನೆ ಮಾಡಿದ ತಳಿಗಳನ್ನು ರೈತರ ಹೊಲದಲ್ಲಿ ಯಶಸ್ವಿಯಾಗಿ ಬೆಳೆಯಬೇಕು. ವಿಶ್ವವಿದ್ಯಾಲಯಗಳು ತಮ್ಮ ಆವರಣದಿಂದ ಹೊರಬಂದು ಕಾರ್ಯನಿರ್ವಹಿಸಬೇಕು. ರೈತರ ಬೆವರು, ಕೂಲಿಕಾರನ ಶ್ರಮದಲ್ಲಿ ದೇವರು ಇದ್ದಾನೆಂದು ನುಡಿದ ಮುಖ್ಯಮಂತ್ರಿ ಬೊಮ್ಮಾಯಿ, ಪ್ರಧಾನಿ ನರೇಂದ್ರ ಮೋದಿಯವರು ಹಿಂದೆ ಯಾವುದೇ ಸರಕಾರ, ಪ್ರಧಾನ ಮಂತ್ರಿಗಳು, ಜನನಾಯಕರು, ಹೋರಾಟಗಾರರು ಯೋಚಿಸದಿರುವ `ರೈತರ ಆದಾಯ ದ್ವಿಗುಣಗೊಳಿಸುವ ಸಂಕಲ್ಪ'ವನ್ನು ಮಾಡಿದ್ದಾರೆ. ಇದು ಅತ್ಯಂತ ಕಠಿಣ ಸವಾಲಿನ ಹಾದಿಯಾಗಿದ್ದರೂ, ಸವಾಲನ್ನು ಸ್ವೀಕರಿಸಿ ಯೋಜನೆ ರೂಪಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

`ರೈತರ ಬದುಕಿಗೆ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನಿಯವರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ಜಾರಿಗೊಳಿಸಿ ವರ್ಷಕ್ಕೆ 6 ಸಾವಿರ ರೂ  ನೆರವು ನೀಡಿದರು. ರಾಜ್ಯದಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾದ ಕೂಡಲೇ ಇದಕ್ಕೆ ಹೆಚ್ಚುವರಿಯಾಗಿ ನಾಲ್ಕು ಸಾವಿರ ರೂ.ನೆರವು ಘೋಷಿಸಿದರು. ರಾಜ್ಯದಲ್ಲಿಯೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ರೈತರ ಅಭ್ಯುದಯಕ್ಕಾಗಿ ಹಲವು ಯೋಜನೆಗಳನ್ನು ರೂಪಿಸಿದರು.

ಕೃಷಿ ನೀರಾವರಿ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ನೀಡುವ ಜೊತೆಗೆ ಭೂಚೇತನ, ಸುವರ್ಣ ಭೂಮಿ, ಸಾವಯವಕೃಷಿ ಉತ್ತೇಜನ ಮೊದಲಾದ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದರು. ರೈತನಾಯಕರಾಗಿ ಯಾವ ಸಮಸ್ಯೆಗಳ ಪರಿಹಾರಕ್ಕಾಗಿ ಹೋರಾಡಿದರೋ, ಮುಖ್ಯಮಂತ್ರಿಯಾಗಿ ಅವುಗಳನ್ನು ಬಗೆಹರಿಸಲು ಪ್ರಯತ್ನಿಸಿದರು. ಪ್ರಧಾನಿ ನಾಯಕತ್ವದಲ್ಲಿ, ಯಡಿಯೂರಪ್ಪರ ಮಾರ್ಗದರ್ಶನದಲ್ಲಿ ತಾವೂ ರೈತರ ಹಿತಕ್ಕಾಗಿ ಕಾರ್ಯನಿರ್ವಹಿಸುವೆ ಎಂದು ಬೊಮ್ಮಾಯಿ ತಿಳಿಸಿದರು.

`ಈ ವಿದ್ಯಾರ್ಥಿ ವೇತನ ಯೋಜನೆಯ ಹಿನ್ನೆಲೆಯನ್ನು ವಿವರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, `ತಾವು ಹಳ್ಳಿಗಳಿಗೆ ಭೇಟಿ ನೀಡಿದಾಗ ರೈತರ ಮಕ್ಕಳು ಹಣಕಾಸಿನ ಕೊರತೆಯ ಕಾರಣ ಎಸೆಸೆಲ್ಸಿ, ಪಿಯುಸಿಗೆ ಓದು ನಿಲ್ಲಿಸಿರುವ ಹಲವಾರು ಪ್ರಕರಣಗಳು ಗಮನಕ್ಕೆ ಬಂದಿತ್ತು. ಈ ಮಕ್ಕಳೂ ವಿದ್ಯಾವಂತರಾದರೆ, ಆ ರೈತರ ಸ್ಥಿತಿಯಲ್ಲೂ ಸುಧಾರಣೆಯಾಗಲು ಸಾಧ್ಯ ಎಂಬ ಚಿಂತನೆಯೊಂದಿಗೆ ಈ ಯೋಜನೆ ಜಾರಿಗೊಳಿಸಲಾಗಿದೆ. ಎಸೆಸೆಲ್ಸಿ ನಂತರ ವಿವಿಧ ಕೋರ್ಸ್‍ಗಳಿಗೆ ದಾಖಲಾಗುವ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನ ನೀಡಲಾಗುತ್ತಿದ್ದು, ಸುಮಾರು 17 ಲಕ್ಷ ವಿದ್ಯಾರ್ಥಿಗಳಿಗೆ ಡಿಬಿಟಿ ಮೂಲಕ ವರ್ಗಾಯಿಸಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರು ರೂಪಿಸಿರುವ ರೈತರ ಆದಾಯ ದ್ವಿಗುಣಗೊಳಿಸುವ ಯೋಜನೆಯನ್ನು ಭಾರತ ಸರ್ಕಾರ, ರಾಜ್ಯ ಸರ್ಕಾರಗಳು ಹಾಗೂ ರೈತರು ಜೊತೆಯಾಗಿ ಸಾಕಾರಗೊಳಿಸುತ್ತಿದ್ದಾರೆ. ಕೇಂದ್ರ ಸರಕಾರ ರೈತರ ಸಬಲೀಕರಣಕ್ಕೆ ರೈತರ ಉತ್ಪಾದಕರ ಸಂಘಗಳ ಸ್ಥಾಪನೆ ಮತ್ತು ಚಟುವಟಿಕೆಗಳಿಗೆ 6,850 ಕೋಟಿ ರೂ.ಒದಗಿಸಲಾಗಿದೆ. ಮೂಲಸೌಕರ್ಯ ಕೊರತೆಯಿಂದ ಕೃಷಿ ಉತ್ಪನ್ನಗಳು ಹಾಳಾಗಿ ವ್ಯರ್ಥವಾಗುವುದನ್ನು ತಡೆಗಟ್ಟಲು ಆತ್ಮನಿರ್ಭರ್ ಯೋಜನೆಯಡಿ 1.5 ಲಕ್ಷ ಕೋಟಿ ರೂ.ಒದಗಿಸಲಾಗಿದೆ ಎಂದು ವಿವರಿಸಿದರು.

ಕರ್ನಾಟಕ ಪ್ರಗತಿಪರ ರಾಜ್ಯವಾಗಿದ್ದು, ಕೃಷಿ ವಲಯದಲ್ಲಿಯೂ ಸರ್ಕಾರ ಕೈಗೊಂಡಿರುವ ಹಲವು ಯೋಜನೆಗಳು ಇತರರಿಗೆ ಮಾದರಿಯಾಗಿವೆ. ವಿಶೇಷವಾಗಿ ಡಿಜಿಟಲ್ ಮಾದರಿಗಳನ್ನು ನಾಳೆ, ನಾಡಿದ್ದು ನಡೆಯಲಿರುವ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕೃಷಿ ಸಚಿವರ ಸಮ್ಮೇಳನದಲ್ಲಿ ಪ್ರಸ್ತುತ ಪಡಿಸಲಾಗುವುದು ಎಂದು ಅವರು ತಿಳಿಸಿದರು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಕೃಷಿ ಸಚಿವ ಬಿ.ಸಿ.ಪಾಟೀಲ್, ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್, ತೋಟಗಾರಿಕಾ ಸಚಿವ ಎಂ.ಮುನಿರತ್ನ, ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಸಾವಯವ ಕೃಷಿ ಉನ್ನತಾಧಿಕಾರ ಸಮಿತಿ ಅಧ್ಯಕ್ಷ ಎ.ಎಸ್.ಆನಂದ್, ಸಂಸದರು, ಶಾಸಕರು ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X