‘ಫಿಟ್ ರಹೋ ಉಡುಪಿ’ 75ಕಿ.ಮೀ. ಓಟಕ್ಕೆ ಚಾಲನೆ
![‘ಫಿಟ್ ರಹೋ ಉಡುಪಿ’ 75ಕಿ.ಮೀ. ಓಟಕ್ಕೆ ಚಾಲನೆ ‘ಫಿಟ್ ರಹೋ ಉಡುಪಿ’ 75ಕಿ.ಮೀ. ಓಟಕ್ಕೆ ಚಾಲನೆ](https://www.varthabharati.in/sites/default/files/images/articles/2021/09/6/305512-1630929495.jpg)
ಉಡುಪಿ, ಸೆ.6: ಟೀಮ್ ನೇಶನ್ ಫಸ್ಟ್ ವತಿಯಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ಉಡುಪಿಯ ಒಟ್ಟು 100 ಗ್ರಾಮಗಳಲ್ಲಿ ಹಾದು ಹೋಗುವ ಎರಡು ದಿನಗಳ ‘ಫಿಟ್ ರಹೋ ಉಡುಪಿ’ 75 ಕಿ.ಮೀ. ಓಟಕ್ಕೆ ಇಂದು ಉಡುಪಿ ನಗರದ ಕ್ಲಾಕ್ ಟವರ್ ಬಳಿ ಚಾಲನೆ ನೀಡಲಾಯಿತು.
ಪಲಿಮಾರು ಮಠಾಧೀಶ ಶ್ರೀವಿದ್ಯಾಧೀಶ ತೀರ್ಥ ಸ್ವಾಮೀಜಿ ಹಾಗೂ ಉಡುಪಿ ಚರ್ಚಿನ ಧರ್ಮಗುರು ಚಾರ್ಲ್ಸ್ ಮೆನೇಜಸ್ ಹಾಗೂ ಉಡುಪಿ ಶಾಸಕ ಕೆ.ರಘುಪತಿ ಭಟ್ ಓಟಕ್ಕೆ ಹಸಿರು ನಿಶಾನೆ ತೋರಿಸಿದರು. ಬಳಿಕ ಮನೋಳಿಗುಜ್ಜಿಯಲ್ಲಿ ದೊಡ್ಡಣಗುಡ್ಡೆ ಮಸೀದಿ ಧರ್ಮಗುರು ನಜೀರ್ ಅಹಮ್ಮದ್ ಸಅದಿ ಹಸಿರು ನಿಶಾನೆ ತೋರಿಸಿ, ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಪ್ರಾಂಶುಪಾಲ ಡಾ. ರಾಘವೇಂದ್ರ ಎ., ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್.ನಾಯಕ್, ಸ್ಥಾಯಿ ಸಮಿತಿ ಅಧ್ಯಕ್ಷ ಗಿರೀಶ್ ಅಂಚನ್, ಸದಸ್ಯ ಟಿ.ಜಿ.ಹೆಗ್ಡೆ, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ನೇಶನ್ ಫಸ್ಟ್ ತಂಡದ ಅಧ್ಯಕ್ಷ ಸೂರಜ್ ಕಿದಿಯೂರು ಮೊದಲಾದವರು ಉಪಸ್ಥಿತರಿದ್ದರು.
ಬಳಿಕ ಮಣಿಪಾಲ ತಲುಪಿದ ಮ್ಯಾರಥಾನ್ ಓಟಕ್ಕೆ ಮಾಹೆ ಸಹಕುಲಪತಿ ಡಾ.ಎಚ್.ಎಸ್.ಬಲ್ಲಾಳ್, ಕುಲಪತಿ ಎಂ.ಡಿ.ವೆಂಕಟೇಶ್ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಾಸಕ ರಘುಪತಿ ಭಟ್, ನೇಶನ್ ಫಸ್ಟ್ ತಂಡದ ಮೇಜರ್ ಪ್ರಕಾಶ್ ರಾವ್ ಉಪಸ್ಥಿತರಿದ್ದರು.
ಮುಂದೆ ಕಿನ್ನಿಮೂಲ್ಕಿ ಸ್ವಾಗತ ಗೋಪುರ ತಲುಪಿದ ಮ್ಯಾರಥಾನ್ ಓಟಕ್ಕೆ ಅಂತಾರಾಷ್ಟ್ರೀಯ ಕ್ರೀಡಾಪಟು ಅಶ್ವಿನಿ ನಾಚಪ್ಪಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ್ ಚಂದ್ರ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ಕೆ.ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಕೆಂಪರಾಜ್, ಮಾಜಿ ಅಧ್ಯಕ್ಷ ಅಶೋಕ್ ಅಡ್ಯಂತಾಯ, ಎನ್.ಇ.ಬಿ ಸ್ಪೋರ್ಟ್ಸ್ನ ನಾಗರಾಜ್ ಅಡಿಗ ಮೊದಲಾದವರು ಉಪಸ್ಥಿತರಿದ್ದರು.