Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿ ದಂಗೆಗಳ ಆರೋಪಿಯ ವಿರುದ್ಧದ...

ದಿಲ್ಲಿ ದಂಗೆಗಳ ಆರೋಪಿಯ ವಿರುದ್ಧದ ನಾಲ್ಕು ಎಫ್ ಐಆರ್ ಗಳನ್ನು ರದ್ದುಗೊಳಿಸಿದ ಹೈಕೋರ್ಟ್ ತೀರ್ಪಿಗೆ ಎಪಿಸಿಆರ್ ಸ್ವಾಗತ

ವಾರ್ತಾಭಾರತಿವಾರ್ತಾಭಾರತಿ6 Sept 2021 10:36 PM IST
share
ದಿಲ್ಲಿ ದಂಗೆಗಳ ಆರೋಪಿಯ ವಿರುದ್ಧದ ನಾಲ್ಕು ಎಫ್ ಐಆರ್ ಗಳನ್ನು ರದ್ದುಗೊಳಿಸಿದ ಹೈಕೋರ್ಟ್ ತೀರ್ಪಿಗೆ ಎಪಿಸಿಆರ್ ಸ್ವಾಗತ

ಹೊಸದಿಲ್ಲಿ,ಸೆ.6: ಒಂದೇ ಅಪರಾಧಕ್ಕಾಗಿ ಹಲವಾರು ಎಫ್ಐಆರ್ಗಳನ್ನು ದಾಖಲಿಸುವಂತಿಲ್ಲ ಮತ್ತು ಹಲವಾರು ತನಿಖೆಗಳನ್ನು ಕೈಗೊಳ್ಳುವಂತಿಲ್ಲ ಎನ್ನುವುದನ್ನು ಬುಧವಾರ ಎತ್ತಿ ಹಿಡಿದ ದಿಲ್ಲಿ ಉಚ್ಚ ನ್ಯಾಯಾಲಯವು ದಿಲ್ಲಿ ದಂಗೆಗಳ ಸಂದರ್ಭದಲ್ಲಿ ಲೂಟಿ ಮತ್ತು ಮನೆಗಳಿಗೆ ಬೆಂಕಿ ಹಚ್ಚಿದ್ದ ಘಟನೆಗೆ ಸಂಬಂಧಿಸಿದಂತೆ ಆತಿರ್ ಮತ್ತು ಇತರರ ವಿರುದ್ಧ ದಾಖಲಾಗಿದ್ದ ಐದು ಎಫ್ಐಆರ್ಗಳ ಪೈಕಿ ನಾಲ್ಕನ್ನು ರದ್ದುಗೊಳಿಸಿದ್ದನ್ನು ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ (ಎಪಿಸಿಆರ್) ಸ್ವಾಗತಿಸಿದೆ.

   ‘ಈ ತೀರ್ಪುಗಳ ರೂಪದಲ್ಲಿ ನಮ್ಮ ಪ್ರಯತ್ನಗಳು ಫಲ ನೀಡುತ್ತಿರುವುದು ನಮಗೆ ಹರ್ಷವನ್ನುಂಟು ಮಾಡಿದೆ ಮತ್ತು ಇವು ನಿಷ್ಪಕ್ಷತನ ಮತ್ತು ನ್ಯಾಯದ ತತ್ತ್ವಗಳನ್ನು ಬಲಗೊಳಿಸುತ್ತವೆ. 2006ರಲ್ಲಿ ಸ್ಥಾಪನೆಗೊಂಡಾಗಿನಿಂದಲೂ ಎಪಿಸಿಆರ್ ದುರ್ಬಲರ ಪರ ಕಾನೂನು ಹೋರಾಟದಲ್ಲಿ ತೊಡಗಿಕೊಂಡಿದೆ. ಹಲವಾರು ನ್ಯಾಯಾಲಯಗಳಲ್ಲಿಯ ಪ್ರಕರಣಗಳಲ್ಲಿ ಪರಿಶ್ರಮದಿಂದಾಗಿ ನಾವು ಜನಮಾನಸದಲ್ಲಿ ಗೌರವವನ್ನು ಗಳಿಸಿದ್ದೇವೆ. ಯಾವುದೇ ವ್ಯಕ್ತಿ ನ್ಯಾಯದಿಂದ ವಂಚಿತನಾಗಬಾರದು ಎಂದು ನಾವು ಬಯಸಿದ್ದೇವೆ ’ ಎಂದು ಎಪಿಸಿಆರ್ನ ಪ್ರಧಾನ ಕಾರ್ಯದರ್ಶಿ ಮಲಿಕ್ ಮೊಹ್ತಾಸಿಮ್ ಖಾನ್ ಹೇಳಿದರು.

ದಿಲ್ಲಿ ದಂಗೆಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಪೊಲೀಸರ ಕಳಪೆ ತನಿಖೆಯಿಂದಾಗಿ ಅನಗತ್ಯ ಕಿರುಕುಳವನ್ನು ಅನುಭವಿಸುತ್ತಿದ್ದ ಮತ್ತು ಕಳೆದ ಒಂದೂವರೆ ವರ್ಷಗಳಿಂದ ಜೈಲಿನಲ್ಲಿ ಕೊಳೆಯುತ್ತಿದ್ದ ಯುವಕರಲ್ಲಿ ಆತಿರ್ ಒಬ್ಬನಾಗಿದ್ದಾನೆ. ಆದರೆ ನ್ಯಾಯಾಲಯದ ತೀರ್ಪು ಒಂದೇ ಅಪರಾಧಕ್ಕಾಗಿ ಹಲವಾರು ಎಫ್ ಐಆರ್ ಗಳಿಂದಾಗಿ ಸುದೀರ್ಘ ಜೈಲುವಾಸವನ್ನು ನಿವಾರಿಸಲು ನೆರವಾಗುತ್ತದೆ ಮತ್ತು ನ್ಯಾಯಾಂಗದ ಅಮೂಲ್ಯ ಸಮಯವನ್ನೂ ಉಳಿಸುತ್ತದೆ ಎಂದರು.

ಎಪಿಸಿಆರ್ ನುರಿತ ವಕೀಲರ ತಂಡವೊಂದರ ಮೂಲಕ ದೀರ್ಘಸಮಯದಿಂದ ಜೈಲುಗಳಲ್ಲಿ ಕೊಳೆಯುತ್ತಿರುವ ಆತಿರ್ ಮತ್ತು ಇತರ ಹಲವಾರು ಜನರಿಗೆ ಉಚಿತ ಕಾನೂನು ನೆರವನ್ನು ಒದಗಿಸುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X