Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ‘ಬ್ರಿಕ್ಸ್’ ಇನ್ನಷ್ಟು ಫಲದಾಯಕವಾಗುವ...

‘ಬ್ರಿಕ್ಸ್’ ಇನ್ನಷ್ಟು ಫಲದಾಯಕವಾಗುವ ಅಗತ್ಯವಿದೆ : ಪ್ರಧಾನಿ ಮೋದಿ

ವಾರ್ತಾಭಾರತಿವಾರ್ತಾಭಾರತಿ9 Sept 2021 11:37 PM IST
share
‘ಬ್ರಿಕ್ಸ್’ ಇನ್ನಷ್ಟು ಫಲದಾಯಕವಾಗುವ ಅಗತ್ಯವಿದೆ : ಪ್ರಧಾನಿ ಮೋದಿ

 ಮಾಸ್ಕೋ, ಸೆ.9: ಬಹುಪಕ್ಷೀಯ ವ್ಯವಸ್ಥೆಯನ್ನು ಬಲಪಡಿಸುವ ಮತ್ತು ಸುಧಾರಿಸುವ ನಿಟ್ಟಿನಲ್ಲಿ ಇದೇ ಮೊದಲ ಬಾರಿ ‘ಬ್ರಿಕ್ಸ್’ ಸಾಮೂಹಿಕ ನಿಲುವು ತಳೆದಿದೆ. ಮುಂದಿನ 15 ವರ್ಷದಲ್ಲಿ ‘ಬ್ರಿಕ್ಸ್’ ಇನ್ನಷ್ಟು ಫಲದಾಯಕವಾಗುವುದನ್ನು ಖಾತರಿಪಡಿಸುವ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ವರ್ಚುವಲ್ ವೇದಿಕೆಯ ಮೂಲಕ ನಡೆದ 5 ರಾಷ್ಟ್ರಗಳ ‘ಬ್ರಿಕ್ಸ್’ ಗುಂಪಿನ ಶೃಂಗಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಭಯೋತ್ಪಾದನೆಯ ವಿರುದ್ಧದ ಕ್ರಿಯಾಯೋಜನೆಯನ್ನು ಬ್ರಿಕ್ಸ್ ಅಂಗೀಕರಿಸಿದೆ ಎಂದವರು ಈ ಸಂದರ್ಭ ಹೇಳಿದರು.

ವಿಶ್ವದ 5 ಬೃಹತ್ ಅಭಿವೃದ್ಧಿಶೀಲ ದೇಶಗಳಾದ ಬ್ರೆಝಿಲ್-ರಶ್ಯ-ಭಾರತ-ಚೀನಾ-ದಕ್ಷಿಣ ಆಫ್ರಿಕಾ ದೇಶಗಳ ಸಹಕಾರ ಗುಂಪಿಗೆ ‘ಬ್ರಿಕ್ಸ್’ ಎಂದು ಹೆಸರಿಸಲಾಗಿದೆ. ಜಾಗತಿಕ ಜನಸಂಖ್ಯೆಯ ಶೇ.41, ಜಾಗತಿಕ ಜಿಡಿಪಿಯ 24% ಮತ್ತು ಜಾಗತಿಕ ವ್ಯವಹಾರದ ಶೇ.16 ಪಾಲನ್ನು ‘ಬ್ರಿಕ್ಸ್’ ದೇಶಗಳು ಹೊಂದಿವೆ. ಬ್ರಿಕ್ಸ್ ಗುಂಪಿನ ಅಧ್ಯಕ್ಷನಾಗಿರುವ ಭಾರತ ಈ ಶೃಂಗಸಭೆಯನ್ನು ಆಯೋಜಿಸಿದೆ. “ಬ್ರಿಕ್ಸ್‌ನ 15ನೇ ವಾರ್ಷಿಕೋತ್ಸವದ ಸಂದರ್ಭ ಅದರ ನಾಯಕತ್ವ ವಹಿಸುವ ಅವಕಾಶ ಸಿಕ್ಕಿರುವುದು ತನಗೆ ಹಾಗೂ ದೇಶಕ್ಕೆ ಸಂತಸದ ವಿಷಯವಾಗಿದೆ. ಭಾರತಕ್ಕೆ ಇತರ ಸದಸ್ಯ ದೇಶಗಳ ಪೂರ್ಣ ಸಹಕಾರ ಸಿಕ್ಕಿದೆ. ಕಳೆದ ಒಂದೂವರೆ ದಶಕದಲ್ಲಿ ಬ್ರಿಕ್ಸ್ ಹಲವು ಸಾಧನೆಗಳನ್ನು ಮಾಡಿದ್ದು ಈಗ ವಿಶ್ವದಲ್ಲಿ ಅಭಿವೃದ್ಧಿ ಹೊಂದುವ ಅರ್ಥವ್ಯವಸ್ಥೆಯ ಪ್ರಭಾವೀ ಧ್ವನಿಯಾಗಿ ರೂಪುಗೊಂಡಿದೆ” ಎಂದು ಪ್ರಧಾನಿ ಮೋದಿ ಹೇಳಿದರು.

ರಶ್ಯದ ಅಧ್ಯಕ್ಷ ವ್ಲಾದಿಮಿರ್ ಪುಟಿನ್, ಚೀನಾದ ಅಧ್ಯಕ್ಷ ಕ್ಸಿ ಜಿಂಪಿಂಗ್, ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್ ರಮಫೋಸ ಮತ್ತು ಬ್ರೆಝಿಲ್ ಅಧ್ಯಕ್ಷ ಜೈರ್ ಬೊಲ್ಸನಾರೊ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದರು.

ಅಫ್ಘಾನಿಸ್ತಾನದಲ್ಲಿ ಶಾಂತಿ ಮತ್ತು ಸ್ಥಿರತೆಗೆ ಕರೆ: ‘ಹೊಸದಿಲ್ಲಿ ಘೋಷಣೆ’ಅಂಗೀಕರಿಸಿದ ಬ್ರಿಕ್ಸ್ ನಾಯಕರು

 ಹೊಸದಿಲ್ಲಿ,ಸೆ.9: 13ನೇ ಬ್ರಿಕ್ಸ್ (ಬ್ರೆಝಿಲ್,ರಷ್ಯಾ,ಭಾರತ,ಚೀನಾ ಮತ್ತು ದಕ್ಷಿಣ ಆಫ್ರಿಕಾ) ಶೃಂಗಸಭೆಯು ಗುರುವಾರ ಸಮಾರೋಪಗೊಂಡಿದ್ದು, ಅಫ್ಘಾನಿಸ್ತಾನದಲ್ಲಿ ಶಾಂತಿಯನ್ನು ಕಾಯ್ದುಕೊಳ್ಳಲು ಮತ್ತು ಮಾನವ ಹಕ್ಕುಗಳನ್ನು ಎತ್ತಿ ಹಿಡಿಯಲು ಕರೆ ನೀಡಿರುವ ‘ಹೊಸದಿಲ್ಲಿ ಘೋಷಣೆ ’ಯನ್ನು ನಾಯಕರು ಅಂಗೀಕರಿಸಿದರು. ಘೋಷಣೆಯು ಕಳೆದ ತಿಂಗಳು ಕಾಬೂಲಿನ ಹಮೀದ್ ಕರ್ಝಾಯಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಭಾರೀ ಸಂಖ್ಯೆಯಲ್ಲಿ ಸಾವುನೋವುಗಳಿಗೆ ಕಾರಣವಾಗಿದ್ದ ಭಯೋತ್ಪಾದಕ ದಾಳಿಗಳನ್ನೂ ಖಂಡಿಸಿದೆ.

‘ಅಫ್ಘಾನಿಸ್ತಾನದಲ್ಲಿಯ ಇತ್ತೀಚಿನ ಬೆಳವಣಿಗೆಗಳನ್ನು ನಾವು ಕಳವಳದಿಂದ ಗಮನಿಸುತ್ತಿದ್ದೇವೆ. ಹಿಂಸೆಯಿಂದ ದೂರವಿರಲು ಮತ್ತು ಶಾಂತಿಯುತ ವಿಧಾನಗಳ ಮೂಲಕ ಪರಿಸ್ಥಿತಿಯನ್ನು ಬಗೆಹರಿಸಲು ನಾವು ಕರೆ ನೀಡುತ್ತಿದ್ದೇವೆ. ದೇಶದಲ್ಲಿ ಸ್ಥಿರತೆ,ನಾಗರಿಕ ಶಾಂತಿ,ಕಾನೂನು ಮತ್ತು ಸುವ್ಯವಸ್ಥೆಯನ್ನು ಖಚಿತಪಡಿಸಲು ಎಲ್ಲರನ್ನೂ ಒಳಗೊಂಡ ಅಂತರ್-ಅಫ್ಘಾನ್ ಸಂವಾದವನ್ನು ಉತ್ತೇಜಿಸಲು ಕೊಡುಗೆಯ ಅಗತ್ಯಕ್ಕೆ ನಾವು ಒತ್ತು ನೀಡುತ್ತಿದ್ದೇವೆ ’ಎಂದು ಘೋಷಣೆಯಲ್ಲಿ ಹೇಳಲಾಗಿದೆ.

ಬ್ರಿಕ್ಸ್ ಭಯೋತ್ಪಾದನೆ ನಿಗ್ರಹ ಕಾರ್ಯತಂತ್ರದ ಅನುಷ್ಠಾನಕ್ಕಾಗಿ ಬ್ರಿಕ್ಸ್ ಭಯೋತ್ಪಾದನೆ ನಿಗ್ರಹ ಕ್ರಿಯಾ ಯೋಜನೆಯ ಅಳವಡಿಕೆಯನ್ನು ಹೊಸದಿಲ್ಲಿ ಘೋಷಣೆಯು ಸ್ವಾಗತಿಸಿದೆ.

ವರ್ಚುವಲ್ ಶೃಂಗಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರು ಅಫ್ಘಾನಿಸ್ತಾನದಲ್ಲಿಯ ಪರಿಸ್ಥಿತಿಯನ್ನು ಪ್ರಮುಖವಾಗಿ ಬಿಂಬಿಸಿ,ಆ ದೇಶವು ನೆರೆಯ ದೇಶಗಳಿಗೆ ಬೆದರಿಕೆ ಹಾಗೂ ಮಾದಕದ್ರವ್ಯ ಕಳ್ಳಸಾಗಣೆ ಮತ್ತು ಭಯೋತ್ಪಾದನೆಯ ಮೂಲವಾಗಬಾರದು ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X