Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದ ರಕ್ಷಣಾ ಮಾಹಿತಿಗಳನ್ನು...

ಭಾರತದ ರಕ್ಷಣಾ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಹಂಚುತ್ತಿದ್ದ ರೈಲ್ವೆ ಪೋಸ್ಟಲ್‌ ಸಿಬ್ಬಂದಿ ಭರತ್‌ ಬಂಧನ

ಸೇನೆಗೆ ಬರುತ್ತಿದ್ದ ಅಧಿಕೃತ ಪತ್ರಗಳನ್ನು ಪಾಕ್ ಐಎಸ್‌ಐಗೆ ರವಾನಿಸುತ್ತಿದ್ದ ಆರೋಪಿ

ವಾರ್ತಾಭಾರತಿವಾರ್ತಾಭಾರತಿ11 Sept 2021 3:12 PM IST
share
ಭಾರತದ ರಕ್ಷಣಾ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಹಂಚುತ್ತಿದ್ದ ರೈಲ್ವೆ ಪೋಸ್ಟಲ್‌ ಸಿಬ್ಬಂದಿ ಭರತ್‌ ಬಂಧನ

ಹೊಸದಿಲ್ಲಿ: ರಕ್ಷಣಾ ಸಂಬಂಧಿ ಪತ್ರಗಳ ಫೋಟೋಗಳನ್ನು ತೆಗೆದು ಮಾಹಿತಿಯನ್ನು ಪಾಕಿಸ್ತಾನದ ಐಎಸ್‍ಐ ಏಜಂಟರಿಗೆ ರವಾನಿಸುತ್ತಿದ್ದ ರೈಲ್ವೆ ಪೋಸ್ಟಲ್ ಸೇವೆಗಳ  ಸಿಬ್ಬಂದಿಯೊಬ್ಬರನ್ನು ಬಂಧಿಸುವುದರೊಂದಿಗೆ ಸೇನಾ ಗುಪ್ತಚರ ವಿಭಾಗ ಹಾಗೂ ರಾಜಸ್ಥಾನ ಪೊಲೀಸರು ʼವಿಶಿಷ್ಟ' ಬೇಹುಗಾರಿಕಾ ಜಾಲವೊಂದನ್ನು ಬೇಧಿಸಿದ್ದಾರೆ. ಆರೋಪಿಯನ್ನು ಭರತ್‌ ಎಂದು ಗುರುತಿಸಲಾಗಿದೆ.

ಭರತ್ ಗೊದರ ಎಂಬ ಹೆಸರಿನ ರೈಲ್ವೆ ಪೋಸ್ಟಲ್ ಸಿಬ್ಬಂದಿಯ ಮೇಲೆ ಸೇನೆಯ ಗುಪ್ತಚರ ಏಜನ್ಸಿ ಕೆಲ ಕಾಲದಿಂದ ನಿಗಾ ಇಟ್ಟಿತ್ತು. ಈತ ರೈಲ್ವೆ ಪೋಸ್ಟಲ್ ಸೇವೆಯ ಸಾರ್ಟಿಂಗ್ ಹಬ್ ಅಥವಾ ವಿಂಗಡಣಾ ಹಬ್‍ನಲ್ಲಿ ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್) ಆಗಿದ್ದ. ಆರ್ಮಿ ಪೋಸ್ಟಲ್ ಆಫೀಸ್ ವಿಳಾಸಕ್ಕೆ ಬರುತ್ತಿದ್ದ ಎಲ್ಲಾ ಪತ್ರಗಳನ್ನೂ ಆತ ತೆರೆಯುತ್ತಿದ್ದನೆನ್ನಲಾಗಿದೆ.

ಸೇನೆಗೆ ತಲುಪಬೇಕಿದ್ದ ಅಧಿಕೃತ ಹಾಗೂ ಖಾಸಗಿ ಪತ್ರಗಳನ್ನು ಐಎಸ್‍ಐಗೆ ರವಾನಿಸಿದ ಪ್ರಕರಣ ಇದೇ ಮೊದಲು. ಮೂಲಗಳ ಪ್ರಕಾರ ಆರೋಪಿಯು ಫೇಸ್‍ಬುಕ್ ಮೆಸೆಂಜರ್ ಮೂಲಕ  ಮಹಿಳೆಯೊಬ್ಬಳ ಸಂಪರ್ಕಕ್ಕೆ ಬಂದಿದ್ದ. ಆಕೆ ತಾನು ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಪೋರ್ಟ್ ಬ್ಲೇರ್ ಎಂಬಲ್ಲಿ  ನರ್ಸಿಂಗ್ ಸಹಾಯಕಿ ಎಂದು ಹೇಳಿಕೊಂಡಿದ್ದಳು. ಕೇವಲ ರಾತ್ರಿ ಪಾಳಿಯಲ್ಲಿ ಮಾತ್ರ ಕೆಲಸ ಮಾಡುತ್ತಿದ್ದ ಭರತ್,  ಎಪಿಒ ವಿಳಾಸದ ಎಲ್ಲಾ ಪತ್ರಗಳನ್ನು ತೆರೆದು ಅದರ ಫೋಟೋ ಕ್ಲಿಕ್ಕಿಸಿ ಆ ಮಹಿಳೆಗೆ ಕಳುಹಿಸುತ್ತಿದ್ದನೆನ್ನಲಾಗಿದೆ.

ಇಬ್ಬರ ನಡುವೆ ಆತ್ಮೀಯತೆ ಬಹಳಷ್ಟು ಹೆಚ್ಚಾಗಿತ್ತಲ್ಲದೆ ಇಬ್ಬರೂ ವಾಟ್ಸ್ಯಾಪ್ ಮೂಲಕ ವೀಡಿಯೋ ಕರೆಗಳನ್ನು ಮಾಡುತ್ತಿದ್ದರಲ್ಲದೆ ಆತ ಆಕೆಗೆ ಭಾರತೀಯ ಸಂಖ್ಯೆಯೊಂದರಿಂದ ವಾಟ್ಸ್ಯಾಪ್ ಖಾತೆಯನ್ನು ಸಕ್ರಿಯಗೊಳಿಸಿದ್ದ ಹಾಗೂ ಇದನ್ನೇ ಆಕೆ ಬಳಸುತ್ತಿದ್ದಳೆಂದು ಅಧಿಕಾರಿಗಳು ಹೇಳಿದ್ದಾರೆ.

ಈತನ ಕೃತ್ಯದಿಂದ ಅಧಿಕಾರಿಗಳ ದೂರವಾಣಿ ಸಂಖ್ಯೆಗಳು, ಸೇನಾ ಘಟಕಗಳ ಪಿನ್‍ಕೋಡ್‍ಗಳು ಮತ್ತಿತರ ಮಾಹಿತಿ ಐಎಸ್‍ಐಗೆ  ಹೋಗಿತ್ತು. ಆತ ಸಂಪರ್ಕದಲ್ಲಿದ್ದ ಮಹಿಳೆ ಪಾಕ್ ಐಎಸ್‍ಐ ಏಜಂಟ್ ಎಂದು ತಿಳಿದು ಬಂದಿದೆ.

ಗುರುವಾರ ರಾತ್ರಿ ಭರತ್‍ನನ್ನು ಮಿಲಿಟರಿ ಇಂಟಲಿಜೆನ್ಸ್ (ಸದರ್ನ್ ಕಮಾಂಡ್) ಮತ್ತು ರಾಜ್ಯ ಗುಪ್ತಚರ ಇಲಾಖೆ ಅಧಿಕಾರಿಗಳು ಅಧಿಕೃತ ಗೌಪ್ಯತಾ ಕಾಯಿದೆಯನ್ವಯ ಬಂಧಿಸಲಾಗಿದ್ದು, ಆತನ ವಿಚಾರಣೆ ನಡೆಯುತ್ತಿದೆ. ಆತನ ಮೊಬೈಲ್ ಫೋನಿನಿಂದ ರಕ್ಷಣಾ ಸಂಬಂಧಿ ಪತ್ರಗಳು ಹಾಗೂ ಫೋಟೋಗಳನ್ನು ವಶಪಡಿಸಿಕೊಳ್ಳಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X