Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯ ಸರ್ಕಾರದ ಮಂತ್ರಿಗಳು ಪೈಪೋಟಿಯಲ್ಲಿ...

ರಾಜ್ಯ ಸರ್ಕಾರದ ಮಂತ್ರಿಗಳು ಪೈಪೋಟಿಯಲ್ಲಿ ಲೂಟಿ ಮಾಡುತ್ತಿದ್ದಾರೆ : ಕಾಂಗ್ರೆಸ್ ಟೀಕೆ

''ಮುಖ್ಯಮಂತ್ರಿ ಬದಲಾದರೂ ರಾಜ್ಯಕ್ಕೆ ನಯಾಪೈಸೆ ಉಪಯೋಗವಿಲ್ಲ''

ವಾರ್ತಾಭಾರತಿವಾರ್ತಾಭಾರತಿ11 Sept 2021 5:08 PM IST
share
ರಾಜ್ಯ ಸರ್ಕಾರದ ಮಂತ್ರಿಗಳು ಪೈಪೋಟಿಯಲ್ಲಿ ಲೂಟಿ ಮಾಡುತ್ತಿದ್ದಾರೆ : ಕಾಂಗ್ರೆಸ್ ಟೀಕೆ

ಬೆಂಗಳೂರು, ಸೆ. 11: 'ಭ್ರಷ್ಟಾಚಾರದ ಸೋಂಕು ತಗುಲಿಸಿಕೊಂಡ ರಾಜ್ಯ ಬಿಜೆಪಿ ಸರ್ಕಾರದ ಮಂತ್ರಿಗಳು ಪೈಪೋಟಿಯಲ್ಲಿ ಲೂಟಿ ಮಾಡುತ್ತಿದ್ದಾರೆ, ಸಿಎಂ ಮೌನವು ಅದಕ್ಕೆ ಸಮ್ಮತಿಯ ಲಕ್ಷಣದಂತಿದೆ' ಎಂದು ರಾಜ್ಯ ಸರಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. 

ಶನಿವಾರ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, 'ಕೃಷಿ ಸಚಿವರ ಕೃಷಿ ಉಪಕರಣ ಖರೀದಿಯ ಕಿಕ್ ಬ್ಯಾಕ್ ಹಗರಣದ ಬಗ್ಗೆ ಇದುವರೆಗೂ ಸರ್ಕಾರ ಗಂಭೀರವಾಗಿ ಪರಿಗಣಿಸಿ ತನಿಖೆಗೆ ಮುಂದಾಗಿಲ್ಲ. ಮೊಟ್ಟೆ, ಸ್ವೆಟರ್ ಹಗರಣಗಳ ತನಿಖೆಯೂ ಇಲ್ಲ' ಎಂದು ಆರೋಪಿಸಿದೆ. 

`ನಾಯಕತ್ವ ಬದಲಾದರೂ, ಸಿಎಂ ಬದಲಾದರೂ ಕರ್ನಾಟಕದೆಡೆಗಿನ ಕೇಂದ್ರ ಸರಕಾರದ ನಿರ್ಲಕ್ಷ್ಯ ಧೋರಣೆ ಮಾತ್ರ ಬದಲಾಗದು. ನೂತನ ಸಿಎಂ ಕೆಲವೇ ದಿನಗಳಲ್ಲಿ ನಾಲ್ಕು ಬಾರಿ ಹೊಸದಿಲ್ಲಿಗೆ ಹೋಗಿಬಂದರೂ ರಾಜ್ಯಕ್ಕೆ ನಯಾಪೈಸೆ ಉಪಯೋಗವಿಲ್ಲದಾಗಿದೆ. ಜಿಎಸ್‍ಟಿ ಬಾಕಿ ಕೊಡಲಿಲ್ಲ, ಲಸಿಕೆ ಕೊರತೆ ನೀಗಲಿಲ್ಲ, ನೆರೆ ಪರಿಹಾರವೂ ಇಲ್ಲ, ನರೇಗಾ ಕೂಲಿ ಬಾಕಿಯೂ ಬರಲಿಲ್ಲ' ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

 `ಯುಪಿಎ ಸರಕಾರದ ಅವಧಿಯಲ್ಲಿ ಫೋರ್ಡ್ ಕಂಪೆನಿ ಗುಜರಾತ್, ಚೆನ್ನೈನಲ್ಲಿ ಉತ್ಪಾದನಾ ಘಟಕ ತೆರೆದಿತ್ತು. ಬಿಜೆಪಿ ಅವಧಿಯಲ್ಲಿ ನಷ್ಟ ಅನುಭವಿಸಿ ತನ್ನ ಎರಡೂ ಘಟಕಗಳನ್ನು ಮುಚ್ಚುತ್ತಿದೆ.

ಮೋದಿ ಅವರ ಆಡಳಿತದಲ್ಲಿ `ಮೇಕ್ ಇನ್ ಇಂಡಿಯಾ' ಬದಲಾಗಿ `ಕ್ವಿಟ್ ಇಂಡಿಯಾ' ಎಂಬಂತಾಗಿದೆ! ದೇಶದಲ್ಲಿ ಹೂಡಿಕೆ ಸ್ನೇಹಿ ವಾತಾವರಣ ಕಳೆದುಹೋಗಿದೆ' ಎಂದು ವಾಗ್ದಾಳಿ ನಡೆಸಿದೆ.

`ಮೋದಿಯವರ ಜನ್ಮದಿನವನ್ನು ಮೂರು ವಾರಗಳ ಕಾಲ ಸಂಭ್ರಮಾಚರಣೆ ಮಾಡಲು ಬಿಜೆಪಿ ಮುಂದಾಗಿದೆ. ಯಾವ ಸಾಧನೆಗಾಗಿ ಈ ಸಂಭ್ರಮ? ಕಳಪೆ ಕೊರೋನ ನಿರ್ವಹಣೆಯಿಂದ ಜನರನ್ನು ಕೊಂದಿದ್ದಕ್ಕಾ? ಆಕ್ಸಿಜನ್ ನೀಡದೆ ನರಳಿಸಿದ್ದಕ್ಕಾ? ನಿರುದ್ಯೋಗ ಸೃಷ್ಟಿಸಿದ್ದಕ್ಕಾ? ಬೆಲೆ ಏರಿಕೆಯಿಂದ ಜನರನ್ನು ಹಿಂಸಿಸುತ್ತಿರುವುದಕ್ಕಾ? ಆರ್ಥಿಕತೆ ಕುಸಿದಿದ್ದಕ್ಕಾ?' ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

`ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಅನಿವಾರ್ಯತೆಯನ್ನ ಬಳಸಿಕೊಂಡು ಖಾಸಗಿ ಬಸ್ ಮಾಲಕರು ದುಪ್ಪಟ್ಟು ದರ ವಿಧಿಸಿ ಸುಲಿಗೆ ನಡೆಸಿದ್ದಾರೆ, ಆದರೆ ಸಾರಿಗೆ ಇಲಾಖೆ ಮಾತ್ರ ಕಣ್ಮುಚ್ಚಿ ಕುಳಿತಿದೆ. ಖಾಸಗಿ ಬಸ್‍ಗಳ ಮೇಲೆ ಸರಕಾರಕ್ಕೆ ನಿಯಂತ್ರಣವಿಲ್ಲವೇ ಅಥವಾ ಖಾಸಗಿ ಲಾಭಿಗೆ ಮಣಿದಿದೆಯೇ? ಸರಕಾರ ಕೂಡಲೇ ಕ್ರಮವಹಿಸಿ ಪ್ರಯಾಣಿಕರ ಹಿತ ಕಾಪಾಡಬೇಕು' ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಕೃಷಿ ಸಚಿವರ ಕೃಷಿ ಉಪಕರಣ ಖರೀದಿಯ ಕಿಕ್ ಬ್ಯಾಕ್ ಹಗರಣದ ಬಗ್ಗೆ ಇದುವರೆಗೂ ಸರ್ಕಾರ ಗಂಭೀರವಾಗಿ ಪರಿಗಣಿಸಿ ತನಿಖೆಗೆ ಮುಂದಾಗಿಲ್ಲ.
ಮೊಟ್ಟೆ, ಸ್ವೆಟರ್ ಹಗರಣಗಳ ತನಿಖೆಯೂ ಇಲ್ಲ.

ಭ್ರಷ್ಟಾಚಾರದ ಸೋಂಕು ತಗುಲಿಸಿಕೊಂಡ @BJP4Karnataka ಸರ್ಕಾರದ ಮಂತ್ರಿಗಳು ಪೈಪೋಟಿಯಲ್ಲಿ ಲೂಟಿ ಮಾಡುತ್ತಿದ್ದಾರೆ, ಸಿಎಂ ಮೌನವು ಅದಕ್ಕೆ ಸಮ್ಮತಿಯ ಲಕ್ಷಣದಂತಿದೆ!

— Karnataka Congress (@INCKarnataka) September 11, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X