Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪರಮಾಣು ಸ್ಥಾವರದ ವಿಶ್ವಸಂಸ್ಥೆ ಕಣ್ಗಾವಲು...

ಪರಮಾಣು ಸ್ಥಾವರದ ವಿಶ್ವಸಂಸ್ಥೆ ಕಣ್ಗಾವಲು ಕ್ಯಾಮೆರಾದಲ್ಲಿ ಮೆಮೊರಿ ಕಾರ್ಡ್ ಅಳಡಿಕೆಗೆ ಇರಾನ್ ಸಮ್ಮತಿ‌

ವಾರ್ತಾಭಾರತಿವಾರ್ತಾಭಾರತಿ12 Sept 2021 10:22 PM IST
share

ಟೆಹ್ರಾನ್, ಸೆ.12: ಅಂತರಾಷ್ಟೀಯ ಪರಿವೀಕ್ಷಕರು ತನ್ನ ಗುಪ್ತ ಪರಮಾಣು ಸ್ಥಾವರದ ವಿಶ್ವಸಂಸ್ಥೆಯ ಕಣ್ಗಾವಲು ಕ್ಯಾಮೆರಾದಲ್ಲಿ ಹೊಸ ಮೆಮೊರಿ ಕಾರ್ಡ್ಗಳನ್ನು ಸ್ಥಾಪಿಸಲು ಮತ್ತು ಈ ಮೂಲಕ ಅಲ್ಲಿನ ಚಟುವಟಿಕೆಗಳ ಚಿತ್ರೀಕರಣಕ್ಕೆ ಅವಕಾಶ ನೀಡುವುದಾಗಿ ಇರಾನ್ ರವಿವಾರ ಒಪ್ಪಿಕೊಂಡಿದೆ.

 ಟೆಹ್ರಾನ್ ನಲ್ಲಿ ಅಂತರಾಷ್ಟ್ರೀಯ ಪರಮಾಣು ಶಕ್ತಿ ಏಜೆನ್ಸಿಯ (ಐಎಇಎ) ಮಹಾನಿರ್ದೇಶಕ ರಫೇಲ್ ಗ್ರಾಸಿ ಜತೆ ಸಭೆ ನಡೆಸಿದ ಬಳಿಕ ಇರಾನ್ನ ಪರಮಾಣು ಇಂಧನ ಸಂಸ್ಥೆಯ ಅಧಿಕಾರಿ ಮುಹಮ್ಮದ್ ಇಸ್ಲಾಮಿ ಈ ಘೋಷಣೆ ಮಾಡಿದ್ದಾರೆ. ಇರಾನ್ ಅಂತರ್ ರಾಷ್ಟ್ರೀಯ ಪರಿಶೀಲನೆಗೆ ಸಹಕಾರ ನೀಡಲು ನಿರಾಕರಿಸಿರುವುದರಿಂದ ಅದರ ಮೇಲೆ ಕಠಿಣ ನಿರ್ಬಂಧ ವಿಧಿಸಬೇಕೆಂಬ ಪಶ್ಚಿಮದ ಶಕ್ತ ದೇಶಗಳು ಆಗ್ರಹಿಸಿದ್ದವು. ಈ ವಾರದಲ್ಲಿ ನಡೆಯಲಿರುವ ಐಎಇಎ ಆಡಳಿತ ಮಂಡಳಿ ಸಭೆಗೂ ಮುನ್ನ ಇರಾನ್ ಈ ಗಮನಾರ್ಹ ಕ್ರಮ ಕೈಗೊಂಡಿದೆ.

ಇರಾನ್ ನ ಈ ಕುತಂತ್ರದ ಬಲೆಯೊಳಗೆ ಸಿಲುಕಬೇಡಿ ಎಂದು ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನ್ನೆಟ್ ವಿಶ್ವದ ಬಲಿಷ್ಟ ದೇಶಗಳನ್ನು ಆಗ್ರಹಿಸಿದ್ದಾರೆ. ಇಕ್ಕಟ್ಟಿನಿಂದ ತಪ್ಪಿಸಿಕೊಳ್ಳುವ ಮಾರ್ಗ ಹುಡುಕಲು ಹೆಚ್ಚಿನ ಸಮಯಾವಕಾಶ ದಕ್ಕಿಸಿಕೊಳ್ಳಲು ಇರಾನ್ ಈ ತಂತ್ರ ಹೂಡಿದೆ. ಇರಾನ್ನ ಪರಮಾಣು ಸ್ಥಾವರಗಳ ಪರಿಶೀಲನೆಯನ್ನು ಬಿಡಬಾರದು ಮತ್ತು ಇರಾನ್ಗೆ ಒಂದು ಸಮಯದ ಮಿತಿ ಸೂಚಿಸಬೇಕು. ಸಾಧ್ಯವಾದಷ್ಟು ವಿಳಂಬಿಸುವುದು ಇರಾನ್ನ ತಂತ್ರವಾಗಿದೆ. ಆದ್ದರಿಂದ ಸಮಯದ ಮಿತಿ ನಿಗದಿಗೊಳಿಸಬೇಕು ಎಂದವರು ಆಗ್ರಹಿಸಿದ್ದಾರೆ.

 ಇರಾನ್ ನ ಪರಮಾಣು ಕಾರ್ಯಕ್ರಮದ ಬಗ್ಗೆ ಸೌದಿ ಅರೇಬಿಯಾ ಮತ್ತು ಆಸ್ಟ್ರಿಯಾದ ರಾಜತಾಂತ್ರಿಕರ ಜಂಟಿ ಹೇಳಿಕೆಯಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ. ವಿಶ್ವದ ಪರಮಾಣು ಶಕ್ತ ರಾಷ್ಟ್ರಗಳೊಂದಿಗಿನ ಪರಮಾಣು ಒಪ್ಪಂದ ಮುರಿದುಬಿದ್ದ ಬಳಿಕ, ಫೆಬ್ರವರಿ ಅಂತ್ಯದಿಂದ ತನ್ನ ಅಣುಸ್ಥಾವರದ ಕಣ್ಗಾವಲು ಕ್ಯಾಮೆರಾ ಪರಿಶೀಲಿಸಲು ಇರಾನ್ ಅವಕಾಶ ನೀಡಿರಲಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X