Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಫೆಲೆಸ್ತೀನ್ ಕೈದಿಗಳ ಬಗ್ಗೆ ಇಸ್ರೇಲ್...

ಫೆಲೆಸ್ತೀನ್ ಕೈದಿಗಳ ಬಗ್ಗೆ ಇಸ್ರೇಲ್ ದಮನಕಾರಿ ನೀತಿ: ಮಾನವ ಹಕ್ಕು ಸಂಘಟನೆ ಖಂಡನೆ

ವಾರ್ತಾಭಾರತಿವಾರ್ತಾಭಾರತಿ12 Sept 2021 10:45 PM IST
share

ಜಿದ್ದಾ, ಸೆ.12: ಫೆಲೆಸ್ತೀನಿಯನ್ ಕೈದಿಗಳ ವಿಷಯದಲ್ಲಿ ಇಸ್ರೇಲ್ ದಮನಕಾರಿ ನೀತಿ ಅನುಸರಿಸುತ್ತಿದೆ ಎಂದು ಇಸ್ಲಾಮಿಕ್ ಸಹಕಾರ ಸಂಘಟನೆ(ಒಐಸಿ)ಯ ಸ್ವತಂತ್ರ ಸ್ಥಾಯೀ ಮಾನವಹಕ್ಕು ಆಯೋಗ ಖಂಡಿಸಿದೆ.

‌
ಉತ್ತರ ಇಸ್ರೇಲ್ ನ ಬಿಗಿಭದ್ರತಾ ವ್ಯವಸ್ಥೆಯಿದ್ದ ಜೈಲಿನಿಂದ ಪೆಲೆಸ್ತೀನ್ ಕೈದಿಗಳು ತಪ್ಪಿಸಿಕೊಂಡ ಬಳಿಕ ಮುಂದಿನ ದಿನದಲ್ಲಿ ಇಂತಹ ಕೃತ್ಯಗಳನ್ನು ನಡೆಸಬಾರದು ಎಂಬ ಉದ್ದೇಶದಿಂದ ಇಸ್ರೇಲ್ ಅಧಿಕಾರಿಗಳು ಫೆಲೆಸ್ತೀನ್ ಕೈದಿಗಳನ್ನು ಶಿಕ್ಷಿಸುತ್ತಿದ್ದಾರೆ. ಭದ್ರತೆ ಬಿಗಿಗೊಳಿಸುವ ನೆಪದಲ್ಲಿ ಸಾಮೂಹಿಕ ದೌರ್ಜನ್ಯ, ಹಿಂಸೆ, ಚಿತ್ರಹಿಂಸೆ ಮತ್ತು ಏಕಪಕ್ಷೀಯ ಬಂಧನ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಆಯೋಗ ಖಂಡಿಸಿದೆ.
  
ಅಮಾಯಕ ಫೆಲೆಸ್ತೀನಿಯನ್ ಪ್ರಜೆಗಳನ್ನು, ಅದರಲ್ಲೂ ಕೈದಿಗಳ ಕುಟುಂಬದವರನ್ನು ಗುರಿಯಾಗಿಸಿಕೊಂಡು ಮನೆಮನೆ ಶೋಧ ಕಾರ್ಯ ನಡೆಸಲಾಗುತ್ತಿದೆ. ಈ ಪ್ರತೀಕಾರದ ಕ್ರಮಗಳಿಗೆ ಯಾವುದೇ ಕಾನೂನಿನ ಆಧಾರವಿಲ್ಲ. ಆದ್ದರಿಂದ ಇವು ಅಂತರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಮಾನವೀಯ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಮಾನವಹಕ್ಕು ಆಯೋಗದ ಹೇಳಿಕೆ ತಿಳಿಸಿದೆ.
 
ಭದ್ರತಾ ಅಪರಾಧ ಎಂಬ ಹುರುಳಿಲ್ಲದ ಆರೋಪದಲ್ಲಿ ಮಕ್ಕಳು, ಮಹಿಳೆಯರ ಸಹಿತ ಸಾವಿರಾರು ಅಮಾಯಕ ಪೆಲೆಸ್ತೀನಿಯನ್ನರನ್ನು ಇಸ್ರೇಲ್ ಬಂಧನದಲ್ಲಿರಿಸಿದೆ. ಯಾವುದೇ ಕಾನೂನುಪ್ರಕ್ರಿಯೆ ನಡೆಸದೆ ಅವರನ್ನು ದೀರ್ಘಾವಧಿಯಲ್ಲಿ ಬಂಧನದಲ್ಲಿಡುವ ಮೂಲಕ ಮುಕ್ತ ವಿಚಾರಣೆಯ ಹಕ್ಕನ್ನು ಪೂರ್ಣ ಉಲ್ಲಂಸಲಾಗಿದೆ . ಮಹಿಳೆಯರು ಮತ್ತು ಮಕ್ಕಳನ್ನು ಹೆಚ್ಚಾಗಿ ರಾತ್ರಿ ವೇಳೆ ಬಂಧಿಸಲಾಗುತ್ತಿದೆ ಮತ್ತು ಈ ಸಂದರ್ಭ ಅಸಮಾನ ಬಲ ಪ್ರಯೋಗಿಸಲಾಗುತ್ತಿದೆ ಮತ್ತು ಅವರ ಮೇಲೆ ಕಸ್ಟಡಿಯಲ್ಲಿ ದೈಹಿಕ ಹಿಂಸೆ ನೀಡಲಾಗುತ್ತಿದೆ ಎಂದು ಆಯೋಗ ಹೇಳಿದೆ.

ಫೆಲೆಸ್ತೀನ್ ಕೈದಿಗಳಿಗೆ ವಿಚಾರಣಾ ಪೂರ್ವ ಬಂಧನ ಮತ್ತು ಮುಕ್ತ ವಿಚಾರಣೆ ಹಕ್ಕು ಸೇರಿದಂತೆ ಅಂತರಾಷ್ಟ್ರೀಯ ಮಾನವಹಕ್ಕುಗಳು ಮತ್ತು ಮಾನವೀಯ ಕಾನೂನಿಗೆ ಸಂಬಂಧಿಸಿ ಇಸ್ರೇಲ್ನ ಮೇಲೆ ಹಲವು ಬಾಧ್ಯತೆಗಳಿವೆ. ಈ ನಿಟ್ಟಿನಲ್ಲಿ ಆರೋಗ್ಯರಕ್ಷಣೆ, ಮುಕ್ತ ಮತ್ತು ನ್ಯಾಯಸಮ್ಮತ ವಿಚಾರಣೆ, ನಿಯಮಿತವಾಗಿ ಕುಟುಂಬ ಸದಸ್ಯರ ಭೇಟಿಗೆ ಅವಕಾಶದಂತಹ ಕ್ರಮಗಳಿಗೆ ಇಸ್ರೇಲ್ ಆದ್ಯತೆ ನೀಡಬೇಕು ಎಂದು ಆಯೋಗ ಆಗ್ರಹಿಸಿದೆ.
ಚಿತ್ರಹಿಂಸೆ ಬಗ್ಗೆ 1,300 ದೂರು ದಾಖಲು
 
ಇಸ್ರೇಲ್ ನ ನ್ಯಾಯ ಇಲಾಖೆಯಲ್ಲಿ 2001ರಿಂದ 2020ರ ಅವಧಿಯಲ್ಲಿ ಚಿತ್ರಹಿಂಸೆಗೆ ಸಂಬಂಧಿಸಿದ ಸುಮಾರು 1,300 ದೂರುಗಳು ದಾಖಲಾಗಿವೆ ಎಂದು ಇಸ್ರೇಲ್ನ ಮಾನವಹಕ್ಕು ಸಂಘಟನೆ ‘ ಪಬ್ಲಿಕ್ ಕಮಿಟಿ ಎಗೈನ್ಸ್ಟ್ ಟಾರ್ಚರ್’ ವರದಿ ಮಾಡಿದೆ. ಈ ದೂರುಗಳ ಪೈಕಿ ಒಂದರ ಕ್ರಿಮಿನಲ್ ವಿಚಾರಣೆ ಮಾತ್ರ ನಡೆಸಲಾಗಿದ್ದು ಯಾವುದೇ ಕಾನೂನು ಕ್ರಮ ಜರುಗಿಸಲಾಗಿಲ್ಲ. ಇದು ಶಿಕ್ಷೆ ಮತ್ತು ನ್ಯಾಯದ ಕೊರತೆಯ ಸ್ಪಷ್ಟ ನಿದರ್ಶನವಾಗಿದೆ ಎಂದು ಸಂಸ್ಥೆ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X