Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಹಜ ಉದ್ಯೋಗದಿಂದ ದೇಶದ ಎಲ್ಲ...

ಸಹಜ ಉದ್ಯೋಗದಿಂದ ದೇಶದ ಎಲ್ಲ ಸಮಸ್ಯೆಗಳಿಗೆ ಪರಿಹಾರ: ಪ್ರಸನ್ನ

ನಾಲ್ಕು ದಿನಗಳ ಕೈ ಉತ್ಪನ್ನಗಳ ಪ್ರದರ್ಶನ, ಕಾರ್ಯಾಗಾರಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ13 Sept 2021 7:30 PM IST
share
ಸಹಜ ಉದ್ಯೋಗದಿಂದ ದೇಶದ ಎಲ್ಲ ಸಮಸ್ಯೆಗಳಿಗೆ ಪರಿಹಾರ: ಪ್ರಸನ್ನ

ಉಡುಪಿ, ಸೆ.13: ಪರಂಪರೆ ಮತ್ತು ಆಧುನಿಕತೆಗಳು ಪ್ರತ್ಯೇಕಗೊಂಡಿರುವುದೇ ನಮ್ಮ ದೇಶದ ಬಹಳ ದೊಡ್ಡ ಸಮಸ್ಯೆಯಾಗಿವೆ. ಇವು ಎರಡರ ಒಳಿತನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಮಧ್ಯಮ ಮಾರ್ಗದ ಹುಡುಕಾಟದಲ್ಲಿ ನಾವಿದ್ದೇವೆ. ಪರಂಪರೆ ಮತ್ತು ಆಧುನಿಕತೆಯನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಬಹುಮುಖ್ಯ ದಾರಿ ಅಂದರೆ ಸಹಜ ಉದ್ಯೋಗ. ಈ ಸಹಜ ಉದ್ಯೋಗವನ್ನು ರಕ್ಷಿಸಿದರೆ ನಮ್ಮ ದೇಶದ ಎಲ್ಲ ಸಮಸ್ಯೆಗಳು ಪರಿಹಾರವಾಗುತ್ತದೆ ಎಂದು ರಂಗಕರ್ಮಿ ಪ್ರಸನ್ನ ಹೆಗ್ಗೋಡು ಹೇಳಿದ್ದಾರೆ.

ಶಿವಮೊಗ್ಗ ಚರಕ ಮಹಿಳಾ ವಿವಿಧೋದ್ದೇಶ ಕೈಗಾರಿಕಾ ಸಹಕಾರ ಸಂಘದ ವತಿಯಿಂದ ಪವಿತ್ರ ವಸ್ತ್ರ ಅಭಿಯಾನದ ಅಂಗವಾಗಿ ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ಇಂದು ನಡೆದ ನಾಲ್ಕು ದಿನಗಳ ಕೈ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ, ಪಡಿಯಚ್ಚು ಮುದ್ರಣ ಹಾಗೂ ಶಿಬೋರಿ ಬಣ್ಣಗಾರಿಕೆಯ ಕಾರ್ಯಾಗಾರದ ಉದ್ಘಾಟನಾ ಸಮಾರಂಭದಲ್ಲಿ ದಿ.ಮುರಾರಿ ಬಲ್ಲಾಳ್ ನೆನಪಿನ ಸ್ವರಾಜ್ಯ ಹಾಗೂ ಗ್ರಾಮೋದ್ಯೋಗ ಕುರಿತು ಅವರು ಮಾತನಾಡುತಿದ್ದರು.

ಪರಂಪರೆ ಹಾಗೂ ಆಧುನಿಕತೆ ಮತ್ತು ವಿಜ್ಞಾನದಲ್ಲಿರುವ ಒಳ್ಳೆಯ ಗುಣಗಳು ಮೇಳೈಯಿಸಿ ಭಾರತ ದೇಶವನ್ನು ಕಟ್ಟಬೇಕಾಗಿದೆ. ಎಲ್ಲ ರಾಜಕೀಯ ಪಕ್ಷಗಳು ಪರಂಪರೆ ಮತ್ತು ಆಧುನಿಕತೆಯನ್ನು ಪ್ರತ್ಯೇಕಿಸಿ ನೋಡುತ್ತಿದ್ದಾರೆ. ಸಾಂಸ್ಕೃತಿಕವಾಗಿ ಮಾತನಾಡುವಾಗ ಪರಂಪರೆ ಹಾಗೂ ಪ್ರಗತಿ ಬಗ್ಗೆ ಮಾತನಾಡುವಾಗ ಯಂತ್ರಗಳ ಬಗ್ಗೆ ಮಾತನಾಡುತ್ತಾರೆ. ಇಡೀ ದೇಶದ ಆರ್ಥಿಕತೆಯನ್ನು ಯಂತ್ರ ಗಳನ್ನು ಬಳಸಿ ಕಟ್ಟುತ್ತೇವೆ ಎಂದು ರಾಜಕೀಯ ಪಕ್ಷಗಳು ಪ್ರತಿಪಾದಿಸುತ್ತಿದೆ. ಹೀಗೆ ಮಾಡುವುದರಿಂದ ಸಂಸ್ಕೃತಿ, ಜಾನಪದ, ಕೈ ಉತ್ಪನ್ನಗಳು, ಕನ್ನಡ, ತುಳು ಭಾೆಗಳು ಉಳಿಯಲು ಸಾಧ್ಯವಿಲ್ಲ ಎಂದರು.

ಶಿಕ್ಷಣ ಸಂಸ್ಥೆಗಳಲ್ಲಿ ಸಿಗುವ ವಿದ್ಯೆ ನಮ್ಮ ಶ್ರಮಗಳನ್ನು ಮರೆಸಿ ಬಿಡುತ್ತಿದೆ. ಆಧುನಿಕ ಶಿಕ್ಷಣ ಪದ್ಧತಿಯು ನಮಗೆ ಸುಲಭ ಜೀವಿಯಾಗುವಂತಹ ಭಯಾನಕ ರೋಗವನ್ನು ಬಡಿಸಲಿದೆ. ಕೇವಲ ಕುರ್ಚಿ ಮೇಲೆ ನಮ್ಮನ್ನು ಕೂರಿಸಿಬಿಡುತ್ತಿವೆ. ಆದುದರಿಂದ ಪ್ರತಿಯೊಬ್ಬರು ಆಧುನಿಕ ರೀತಿಯಲ್ಲಿ ಶ್ರಮವನ್ನು ಮೈಗೂಡಿಸಿ ಕೊಳ್ಳಬೇಕು. ಆ ಮೂಲಕ ಆರೋಗ್ಯವನ್ನು ಉಳಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಕಾರ್ಯಾಗಾರವನ್ನು ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಡಾ.ದೇವಿದಾಸ್ ನಾಯಕ್ ಉದ್ಘಾಟಿಸಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಾಲತಿ ದೇವಿ, ಅಖಿಲ ಭಾರತ ನೇಕಾರರ ಸಂಘದ ಅಧ್ಯಕ್ಷ ಪವನ್ ಉಪಸ್ಥಿತರಿ ದ್ದರು. ಅಭಿಯಾನದ ಮಾರುಕಟ್ಟೆ ವ್ಯವಸ್ಥಾಪಕಿ ಪದ್ಮಶ್ರೀ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಉಪನ್ಯಾಸಕ ಸುಚಿತ್ ಕೊೀಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.

ಪವಿತ್ರ ವಸ್ತ್ರ ಯೋಜನೆಯಡಿ ಸರಕಾರ ನಮ್ಮ ಸಂಸ್ಥೆಗೆ 33 ಲಕ್ಷ ರೂ. ಮಂಜೂರು ಮಾಡಿತ್ತು. ಆದರೆ ಆ ಹಣವನ್ನು ನಾವು ಕೆಲವೊಂದು ನಿಯಮ ಗಳಿಂದಾಗಿ ಪಡೆಯಲು ರೋಸಿ ಹೋದೆವು. ಕೊನೆಗೂ ಹಣ ಸಿಗದಿದ್ದಾಗ ಅದನ್ನು ನಾವು ವಾಪಾಸ್ಸು ಸರಕಾರಕ್ಕೆ ಕೊಟ್ಟಿದ್ದೇವೆ. ಅದಕ್ಕೆ ಬದಲು ನಾವು ಪವಿತ್ರ ವಸ್ತ್ರ ಅಭಿಯಾನದ ಮೂಲಕ ಗ್ರಾಹಕರ ಎದುರು ಬಂದು ನಮ್ಮ ವಸ್ತ್ರಗಳನ್ನು ಮಾರಾಟ ಮಾಡುತ್ತಿದ್ದೇವೆ. ಇದಕ್ಕೆ ಎಲ್ಲ ಕಡೆಗಳಲ್ಲೂ ಗ್ರಾಹಕರಿಂದ ಉತ್ತಮ ಸ್ಪಂದನೆ ದೊರೆಯುತ್ತಿದೆ.
-ಪದ್ಮಶ್ರೀ, ಅಭಿಯಾನದ ಮಾರುಕಟ್ಟೆ ವ್ಯವಸ್ಥಾಪಕಿ

30 ಲಕ್ಷ ರೂ. ಮೌಲ್ಯದ ಸೊತ್ತುಗಳ ಪ್ರದರ್ಶನ

ಈ ಪ್ರದರ್ಶದಲ್ಲಿ ನೈಸರ್ಗಿಕ ಬಣ್ಣ, ಪರಿಶುದ್ಧ ಹತ್ತಿಯ ಕೈಮಗ್ಗದ ಬಟ್ಟೆ, ಸಿದ್ಧ ಉಡುಪುಗಳು, ಬ್ಯಾಗ್, ಬುಟ್ಟಿ, ಪರಿಸರ ಸ್ನೇಹಿ ಹಾಗೂ ಕೈ ಉತ್ಪನ್ನಗಳು, ಚೆನ್ನಪಟ್ಟಣದ ಆಟಿಕೆ ಸಾಮಾನುಳು, ಪುಸ್ತಕಗಳು ಲಭ್ಯ ಇವೆ.

ಉತ್ತರ ಕರ್ನಾಟಕ, ಬೆಳಗಾಂ, ಶಿವಮೊಗ್ಗ, ಉಡುಪಿ, ಚೆನ್ನಪಟ್ಟಣ ಸೇರಿದಂತೆ ರಾಜ್ಯದ ನಾನಾ ಕಡೆಗಳ ಒಟ್ಟು 16 ಸಂಸ್ಥೆಗಳು ಈ ಪ್ರದರ್ಶನದಲ್ಲಿ ತೊಡಗಿಸಿ ಕೊಂಡಿವೆ. 25ರೂ.ನಿಂದ ಹಿಡಿದು 7000ರೂ.ವರೆಗಿನ ಖಾದಿ ಬಟ್ಟೆಗಳು ಇಲ್ಲಿ ದೊರೆಯುತ್ತವೆ. ಒಟ್ಟು 30ಲಕ್ಷ ರೂ. ವೌಲ್ಯದ ವಸ್ತುಗಳ ಪ್ರದರ್ಶನ ಇಲ್ಲಿ ನಡೆಯುತ್ತಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X