ಸೆ.14ರಂದು ಡಿ.ಕೆ.ಶಿವಕುಮಾರ್ ಉಡುಪಿ, ಮಂಗಳೂರಿಗೆ ಭೇಟಿ
![ಸೆ.14ರಂದು ಡಿ.ಕೆ.ಶಿವಕುಮಾರ್ ಉಡುಪಿ, ಮಂಗಳೂರಿಗೆ ಭೇಟಿ ಸೆ.14ರಂದು ಡಿ.ಕೆ.ಶಿವಕುಮಾರ್ ಉಡುಪಿ, ಮಂಗಳೂರಿಗೆ ಭೇಟಿ](https://www.varthabharati.in/sites/default/files/images/articles/2021/09/13/306343-1631552592.jpg)
ಮಂಗಳೂರು: ಆಸ್ಕರ್ ಫರ್ನಾಂಡಿಸ್ ಅವರ ನಿಧನದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಉಡುಪಿ, ಮಂಗಳೂರಿಗೆ ಭೇಟಿ ನೀಡಲಿದ್ದಾರೆ.
ಮಂಗಳವಾರ ಬೆಳಗ್ಗೆ 10.50ಕ್ಕೆ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಲಿರುವ ಅವರು, ಮಧ್ಯಾಹ್ನ 12.30ರ ವೇಳೆಗೆ ಉಡುಪಿಯಲ್ಲಿ ಆಸ್ಕರ್ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಮಂಗಳೂರಿನಲ್ಲಿ ನಡೆಯಲಿರುವ ಆಸ್ಕರ್ ಪಾರ್ಥಿವ ಶರೀರ ಸಾರ್ವಜನಿಕ ದರ್ಶನ ಕಾರ್ಯಕ್ರಮದಲ್ಲೂ ಭಾಗವಹಿಸಲಿದ್ದು, ಸಂಜೆ 6.55ಕ್ಕೆ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.
ಬುಧವಾರ ಆಸ್ಕರ್ ಪಾರ್ಥಿವ ಶರೀರಕ್ಕೆ ಮಂಗಳೂರಿನಲ್ಲಿ ಅಂತಿಮ ವಿಧಿ ವಿಧಾನಗಳನ್ನು ಪೂರೈಸಿದ ಬಳಿಕ ಬೆಂಗಳೂರಿಗೆ ಕೊಂಡೊಯ್ಯಲು ನಿರ್ಧರಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story