Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪೌರತ್ವ ಪ್ರಮುಖ ಹಕ್ಕು: ವ್ಯಕ್ತಿಯನ್ನು...

ಪೌರತ್ವ ಪ್ರಮುಖ ಹಕ್ಕು: ವ್ಯಕ್ತಿಯನ್ನು ವಿದೇಶಿ ಎಂದು ಘೋಷಿಸಿದ್ದ ಆದೇಶವನ್ನು ತಳ್ಳಿಹಾಕಿದ ಗುವಾಹಟಿ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ14 Sept 2021 8:39 PM IST
share
ಪೌರತ್ವ ಪ್ರಮುಖ ಹಕ್ಕು: ವ್ಯಕ್ತಿಯನ್ನು ವಿದೇಶಿ ಎಂದು ಘೋಷಿಸಿದ್ದ ಆದೇಶವನ್ನು ತಳ್ಳಿಹಾಕಿದ ಗುವಾಹಟಿ ಹೈಕೋರ್ಟ್

ಗುವಾಹಟಿ, ಸೆ.14: ಅಸ್ಸಾಮಿನ ಮೋರಿಗಾಂವ್ ಜಿಲ್ಲೆಯ ನಿವಾಸಿಯನ್ನು ವಿದೇಶಿ ಎಂದು ಘೋಷಿಸಿದ್ದ ವಿದೇಶಿಯರ ನ್ಯಾಯಾಧಿಕರಣದ ಏಕಪಕ್ಷೀಯ ಆದೇಶವನ್ನು ತಳ್ಳಿಹಾಕಿರುವ ಗುವಾಹಟಿ ಉಚ್ಚ ನ್ಯಾಯಾಲಯವು, ಪೌರತ್ವವು ವ್ಯಕ್ತಿಯ ಪ್ರಮುಖ ಹಕ್ಕು ಆಗಿದೆ ಎಂದು ಎತ್ತಿಹಿಡಿದಿದೆ.

ಏಕಪಕ್ಷೀಯ ಆದೇಶವು ಪ್ರಕರಣದಲ್ಲಿಯ ಎಲ್ಲ ಕಕ್ಷಿಗಳ ಅಹವಾಲುಗಳನ್ನು ಆಲಿಸದೆ ಹೊರಡಿಸುವ ಆದೇಶವಾಗಿದೆ. ತನ್ನ ಅನುಪಸ್ಥಿತಿಯಲ್ಲಿ ನಡೆದಿದ್ದ ವಿಚಾರಣೆಯಲ್ಲಿ ತನ್ನನ್ನು ವಿದೇಶಿ ಎಂದು ಘೋಷಿಸಿದ್ದ ಆದೇಶವನ್ನು ಪ್ರಶ್ನಿಸಿ ಮೋರಿಗಾಂವ್ ನಿವಾಸಿ ಅಸೂರುದ್ದೀನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯವು ಕೈಗೆತ್ತಿಕೊಂಡಿತ್ತು. ತನ್ನ ಕಕ್ಷಿದಾರರು ಸೌಲಭ್ಯವಂಚಿತರಾಗಿದ್ದಾರೆ ಮತ್ತು ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಂಗ್ರಹಿಸಲು ಅಥವಾ ತನ್ನ ವಕೀಲರನ್ನು ಸಂಪರ್ಕಿಸಲು ಅವರಿಗೆ ಸಾಧ್ಯವಾಗಿರಲಿಲ್ಲ ಎಂದು ಅಸೂರುದ್ದೀನ್ ಪರ ವಕೀಲ ಎಂ.ಎ.ಶೇಖ್ ಅವರು ನ್ಯಾಯಾಲಯಕ್ಕೆ ತಿಳಿಸಿದರು.

ತನ್ನ ಜೀವನೋಪಾಯಕ್ಕಾಗಿ ತಾನು ಅಸ್ಸಾಂ ತೊರೆದು ಕೇರಳಕ್ಕೆ ತೆರಳುವಂತಾಗಿತ್ತು ಎಂದೂ ಅರ್ಜಿದಾರರು ತಿಳಿಸಿದರು. ಅಸೂರುದ್ದೀನ್ ಗೈರು ಹಾಜರಿಯಿಂದಾಗಿ ನ್ಯಾಯಾಧಿಕರಣಕ್ಕೆ ತನ್ನ ಏಕಪಕ್ಷೀಯ ಆದೇಶದಲ್ಲಿ ಅವರನ್ನು ವಿದೇಶಿ ಎಂದು ಘೋಷಿಸುವುದನ್ನು ಬಿಟ್ಟು ಬೇರೆ ದಾರಿಯಿರಲಿಲ್ಲ ಎಂದು ವಿದೇಶಿಯರ ನ್ಯಾಯಾಲಯದ ಪರ ವಕೀಲರು ವಾದಿಸಿದರು.

ಪೌರತ್ವಕ್ಕೆ ಸಂಬಂಧಿಸಿದ ವಿಷಯಗಳನ್ನು ಸಾಮಾನ್ಯವಾಗಿ ಪೂರ್ವ ನಿಯೋಜಿತ ರೀತಿಯ ಬದಲು ಪ್ರಕರಣದ ಅರ್ಹತೆಯ ಆಧಾರದ ಮೇಲೆ ನಿರ್ಧರಿಸಬೇಕು ಎಂದು ಹೇಳಿದ ನ್ಯಾ.ಮನೀಷ ಚೌಧರಿ ನೇತೃತ್ವದ ಪೀಠವು,ಅರ್ಜಿದಾರರು 1965,1970 ಮತ್ತು 1971ರ ಮತದಾರರ ಪಟ್ಟಿಗಳನ್ನು ತನ್ನ ಗಮನಕ್ಕೆ ತಂದಿದ್ದಾರೆ ಮತ್ತು ಅವುಗಳಲ್ಲಿ ಅರ್ಜಿದಾರರು,ಅವರ ಹೆತ್ತವರು ಮತ್ತು ಅಜ್ಜ-ಅಜ್ಜಿ ಹೆಸರುಗಳನ್ನು ಉಲ್ಲೇಖಿಸಲಾಗಿದೆ. 

ಇವೆಲ್ಲ ನ್ಯಾಯಾಧಿಕರಣವು ಪರಿಗಣಿಸಬೇಕಾದ ವಾಸ್ತವಿಕ ಅಂಶಗಳಾಗಿವೆ ಎಂದು ಹೇಳಿತು.
ಆದಾಗ್ಯೂ ಅರ್ಜಿದಾರರಿಗೆ ಮೇಲ್ಕಂಡ ದಾಖಲೆಗಳನ್ನು ಸಾಬೀತುಗೊಳಿಸಲು ಸಾಧ್ಯವಾದರೆ ಖಂಡಿತವಾಗಿಯೂ ಅವರು ತಾನೋರ್ವ ಭಾರತೀಯ ಪ್ರಜೆ ಮತ್ತು ವಿದೇಶಿಯನಲ್ಲ ಎಂಬ ನ್ಯಾಯಯುತ ಹಕ್ಕುಸಾಧನೆ ಮಾಡಬಹುದು ಎಂದು ನ್ಯಾಯಾಲಯವು ಆದೇಶದಲ್ಲಿ ತಿಳಿಸಿದೆ.

ಹೊಸದಾಗಿ ಕಲಾಪಗಳಿಗಾಗಿ ನ.8ರಂದು ಅಥವಾ ಅದಕ್ಕೆ ಮೊದಲು ನ್ಯಾಯಾಧಿಕರಣದ ಮುಂದೆ ಹಾಜರಾಗುವಂತೆ ಉಚ್ಚ ನ್ಯಾಯಾಲಯವು ಅಸೂರುದ್ದೀನ್ಗೆ ನಿರ್ದೇಶವನ್ನು ನೀಡಿತು. ಆದರೆ ಅವರ ಪೌರತ್ವವು ಸಂಶಯದ ಸುಳಿಯಲ್ಲಿರುವುದರಿಂದ ನ್ಯಾಯಾಧಿಕರಣದ ಕಲಾಪಗಳ ಅವಧಿಯಲ್ಲಿ ಜಾಮೀನಿನಲ್ಲಿ ಇರಬೇಕಾಗುತ್ತದೆ ಎಂದು ಹೇಳಿತು.

15 ದಿನಗಳಲ್ಲಿ ಮೋರಿಗಾಂವ್ ಜಿಲ್ಲಾ ಪೊಲೀಸ್ ಅಧೀಕ್ಷಕರ ಮುಂದೆ ಹಾಜರಾಗಿ 5,000 ರೂ.ಗಳ ಜಾಮೀನು ಬಾಂಡ್ ಅನ್ನು ಸಲ್ಲಿಸುವಂತೆ ಅರ್ಜಿದಾರರಿಗೆ ನಿರ್ದೇಶ ನೀಡಿದ ನ್ಯಾಯಾಲಯವು,5,000 ರೂ.ಗಳ ಪ್ರತ್ಯೇಕ ವೆಚ್ಚವನ್ನು ವಿಧಿಸಿ ಅದನ್ನು ನ್ಯಾಯಾಧಿಕರಣಕ್ಕೆ ಪಾವತಿಸುವಂತೆ ಸೂಚಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X