ಎಸ್ಡಿಎಂ ಆಯುರ್ವೇದ ಆಸ್ಪತ್ರೆಗೆ ಡಾ.ಹೆಗ್ಗಡೆ ಭೇಟಿ
ಉಡುಪಿ, ಸೆ.14: ಕುತ್ಪಾಡಿಯಲ್ಲಿರುವ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಆಸ್ಪತ್ರೆಯ ನೂತನ ಅಂಗವಾದ ರತ್ನಶ್ರೀ ಆರೋಗ್ಯಧಾಮ ಮಲ್ಪಿ ಸ್ಪೆಷಾಲಿಟಿ ಆಸ್ಪತ್ರೆ ಶೀಘ್ರವೇ ಉದ್ಘಾಟನೆಗೊಳ್ಳಲಿದ್ದು, ಇದರ ನಿರ್ಮಾಣ ಕಾಮಗಾರಿಯ ಪ್ರಗತಿ ವೀಕ್ಷಿಸಲು ಸಂಸ್ಥೆಯ ಮುಖ್ಯಸ್ಥರಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ.ಮಮತಾ ಕೆ.ವಿ., ವೈದ್ಯಕೀಯ ಅಧೀಕ್ಷಕ ಡಾ.ನಾಗರಾಜ ಎಸ್. ಹಾಗೂ ಇತರರು ಕಾಮಗಾರಿ ಪ್ರಗತಿಯ ಮಾಹಿತಿ ನೀಡಿದರು. ಡಾ.ಹೆಗ್ಗಡೆ ತಮ್ಮ ಸಲಹೆಗಳನ್ನು ನೀಡಿದರು.
ಆಯುರ್ವೇದ ಕ್ಷೇತ್ರದ ಈ ಮಲ್ಪಿ ಸ್ಪೆಷಾಲಿಟಿ ಆಸ್ಪತ್ರೆಯು ಸಂಪೂರ್ಣ ಹವಾ ನಿಯಂತ್ರಿತವಾಗಿದ್ದು, ಸ್ಪೆಷಲ್ ಹಾಗೂ ಡಿಲಕ್ಸ್ ಮಾದರಿಯ 122 ಹಾಸಿಗೆಗಳನ್ನು ಹೊಂದಿರುತ್ತದೆ. ಸಂಸ್ಥೆಯ ಮುಖ್ಯ ಕಾರ್ಯದರ್ಶಿಗಳಾದ ಡಾ. ಯೋಶವರ್ಮ ಅವರು ಸಹ ಸಂಸ್ಥೆಗೆ ಭೇಟಿ ನೀಡಿ ಸಲಹೆ-ಸೂಚನೆಗಳನ್ನು ನೀಡಿದರು.
Next Story