Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಲಿತ ಲೇಖಕಿಯರು,ಮಹಾಶ್ವೇತ ದೇವಿ ಸಾಹಿತ್ಯ...

ದಲಿತ ಲೇಖಕಿಯರು,ಮಹಾಶ್ವೇತ ದೇವಿ ಸಾಹಿತ್ಯ ಪಠ್ಯದಲ್ಲಿ ಮರು ಸೇರ್ಪಡೆಗೆ ಆಗ್ರಹಿಸಿ ದಿಲ್ಲಿ ವಿವಿಗೆ ಶಿಕ್ಷಣ ತಜ್ಞರ ಪತ್ರ

ವಾರ್ತಾಭಾರತಿವಾರ್ತಾಭಾರತಿ14 Sept 2021 10:39 PM IST
share
ದಲಿತ ಲೇಖಕಿಯರು,ಮಹಾಶ್ವೇತ ದೇವಿ ಸಾಹಿತ್ಯ ಪಠ್ಯದಲ್ಲಿ ಮರು ಸೇರ್ಪಡೆಗೆ ಆಗ್ರಹಿಸಿ ದಿಲ್ಲಿ ವಿವಿಗೆ ಶಿಕ್ಷಣ ತಜ್ಞರ ಪತ್ರ

ಹೊಸದಿಲ್ಲಿ, ಸೆ. 14:   ತಮಿಳು ದಲಿತ ಲೇಖಕಿಯರಾದ ಬಾಮಾ ಫೌಸ್ಟಿನ ಸೂಸೈರಾಜ್, ಸುಕಿರ್ತಾರಣಿ ಹಾಗೂ ಬಂಗಾಳಿ ಲೇಖಕಿ ಮಹಾಶ್ವೇತ ದೇವಿ ಅವರ ಸಾಹಿತ್ಯವನ್ನು ಪಠ್ಯದಲ್ಲಿ ಮರು ಸೇರ್ಪಡೆಗೆ ಆಗ್ರಹಿಸಿ 348 ಗಣ್ಯ ನಾಗರಿಕರನ್ನು ಒಳಗೊಂಡ ಗುಂಪು ದಿಲ್ಲಿ ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿಗೆ ಪತ್ರ ಬರೆದಿದೆ.

‘ದಲಿತ್ ಇಂಟಲೆಕ್ಚುವಲ್ ಕಲೆಕ್ಟಿವ್’ ಪರವಾಗಿ ಪತ್ರವನ್ನು ದಿಲ್ಲಿ ವಿಶ್ವವಿದ್ಯಾನಿಲಯದ ಉಪ ಕುಲಪತಿ ಅವರಿಗೆ ರವಾನಿಸಲಾಗಿದೆ.

ಕಳೆದ ತಿಂಗಳು ದಿಲ್ಲಿ ವಿಶ್ವವಿದ್ಯಾನಿಲಯ ತನ್ನ ಬಿಎ (ಹಾನರ್ಸ್) ಇಂಗ್ಲೀಷ್ ಕೋರ್ಸ್ ನ ಪಠ್ಯಕ್ರಮದಿಂದ ಮಹಾಶ್ವೇತ ದೇವಿ ಅವರ ದ್ರೌಪದಿ, ಸುಕಿರ್ತರಿಗೆ ಅವರು ಮೈಬಾಡಿ ಹಾಗೂ ಸೂಸೈರಾಜ್ ಅವರ ಸಂಗತಿ ಪಠ್ಯಗಳನ್ನು ಕೈಬಿಟ್ಟಿತ್ತು. ವಿಶ್ವವಿದ್ಯಾನಿಲಯದ ಈ ನಿರ್ಧಾರಕ್ಕೆ ವಿ.ವಿ.ಯ ಶೈಕ್ಷಣಿಕ ಮಂಡಳಿಯ 15 ಸದಸ್ಯರು ಸೇರಿದಂತೆ ಹಲವರಿಂದ ಟೀಕೆ ವ್ಯಕ್ತವಾಗಿತ್ತು.

ಈ ನಿರ್ಧಾರವನ್ನು ಪಠ್ಯಕ್ರಮದ ‘ಗರಿಷ್ಠ ವಿಧ್ವಂಸಕ’ ಎಂದು ಆರೋಪಿಸಿದ ಮಂಡಳಿ ಸದಸ್ಯರು ಈ ನಡೆಯ ವಿರುದ್ಧ ಭಿನ್ನಾಭಿಪ್ರಾಯದ ಪತ್ರ ಸಲ್ಲಿಸಿದ್ದರು. ‘ದಲಿತ್ ಇಂಟಲೆಕ್ಚುವಲ್ ಕಲೆಕ್ಟಿವ್’ ಸಲ್ಲಿಸಿದ ಈ ಪತ್ರಕ್ಕೆ ಭಾರತ ಹಾಗೂ ವಿದೇಶದ ದಲಿತ ಹೋರಾಟಗಾರರು, ಶಿಕ್ಷಣ ತಜ್ಞರು, ಲೇಖಕರು, ಕಲಾವಿದರು, ಚಿತ್ರ ನಿರ್ದೇಶಕರು ಹಾಗೂ ವಿದ್ಯಾರ್ಥಿಗಳು ಸಹಿ ಹಾಕಿದ್ದಾರೆ.

ಪಠ್ಯ ಕ್ರಮದಿಂದ ಈ ಸಾಹಿತ್ಯವನ್ನು ಕೈಬಿಟ್ಟಿರುವುದಕ್ಕೆ ಸಂಬಂಧಿಸಿ ಲೇಖಕರಲ್ಲಿ ದಿಲ್ಲಿ ವಿಶ್ವವಿದ್ಯಾನಿಲಯ ಕ್ಷಮೆ ಕೋರಬೇಕು ಎಂದು ಸಹಿದಾರರು ಆಗ್ರಹಿಸಿದ್ದಾರೆ.

‘‘ಈ ಸಾಹಿತ್ಯ ಪಠ್ಯಗಳು ರಾಜ್ಯದ ದಮನದ ವಿರುದ್ಧ ಆದಿವಾಸಿ ಮಹಿಳೆಯ ವಿರೋಧ, ಜಾತಿ ಸೋಂಕಿತ ಭಾರತೀಯ ಗ್ರಾಮಗಳಲ್ಲಿ ದಲಿತ ಮಹಿಳೆ ಎದುರಿಸುವ ತಾರತಮ್ಯ, ಅಮಾನವೀಯ ಮಲ ಹೊರುವ ಪದ್ಧತಿಯ ವಿರುದ್ಧ ಮಾತನಾಡುತ್ತವೆ’’ ಎಂದು ಅವರು ಪ್ರತಿಪಾದಿಸಿದ್ದಾರೆ.

‘‘ಈ ಪಠ್ಯಗಳಿಂದ ಯಾರ ಭಾವನೆಗಳಿಗೆ ಘಾಸಿ ಉಂಟಾಗಿದೆ?’’ ಎಂದು ಪತ್ರ ಪ್ರಶ್ನಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X