Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಿಶ್ವಸಂಸ್ಥೆಯ ಮಹಾಧಿವೇಶನ: 24ರಂದು ಮೋದಿ...

ವಿಶ್ವಸಂಸ್ಥೆಯ ಮಹಾಧಿವೇಶನ: 24ರಂದು ಮೋದಿ ಭಾಷಣ; 109 ರಾಷ್ಟ್ರಗಳು ಭಾಗಿ

ವಾರ್ತಾಭಾರತಿವಾರ್ತಾಭಾರತಿ14 Sept 2021 11:30 PM IST
share
ವಿಶ್ವಸಂಸ್ಥೆಯ ಮಹಾಧಿವೇಶನ: 24ರಂದು ಮೋದಿ ಭಾಷಣ; 109 ರಾಷ್ಟ್ರಗಳು ಭಾಗಿ

ನ್ಯೂಯಾರ್ಕ್, ಸೆ.14: ಮುಂದಿನ ವಾರ ನಡೆಯಲಿರುವ ವಿಶ್ವಸಂಸ್ಥೆಯ ಮಹಾಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಜೋ ಬೈಡೆನ್,ಆಸ್ಟ್ರೇಲಿಯ ಪ್ರಧಾನಿ ಸ್ಕಾಟ್ ಮಾರಿಸನ್ ಖುದ್ದಾಗಿ ಪಾಲ್ಗೊಂಡು ಭಾಷಣ ಮಾಡಲಿದ್ದಾರೆ. ಈ ಅಧಿವೇಶನದಲ್ಲಿ 109ಕ್ಕೂ ಅಧಿಕ ರಾಷ್ಟ್ರಗಳ ವರಿಷ್ಠರು ಪಾಲ್ಗೊಳ್ಳಲಿದ್ದಾರೆ.

ಸೆಪ್ಟೆಂಬರ್ 25ರಂದು ಬೆಳಗ್ಗೆ ವಿಶ್ವಸಂಸ್ಥೆಯ ಮಹಾಧಿವೇಶನದ ಸಭಾಭವನದಲ್ಲಿ ಪ್ರಧಾನಿ ಮೋದಿಯವರು ವಿಶ್ವನಾಯಕರನ್ನುದ್ದೇಶಿಸಿ ಭಾಷಣ ಮಾಡಲಿರುವರು. ಸೆಪ್ಟೆಂಬರ್ 24ರಂದು ಅವರು ಬೈಡೆನ್ ಆತಿಥ್ಯದಲ್ಲಿ ವಾಶಿಂಗ್ಟನ್ನಲ್ಲಿ ನಡೆಯಲಿರುವ ಕ್ವಾಡ್ (ಅಮೆರಿಕ, ಆಸ್ಟ್ರೇಲಿಯ,ಜಪಾನ್,ಭಾರತ) ನಾಯಕರ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿರುವರು.
 
ಕೋವಿಡ್-19ನಿಂದ ಚೇತರಿಸಿಕೊಳ್ಳುವ ಆಶಾವಾದದೊಂದಿಗೆ ಸುಸ್ಥಿರತೆಯ ಪುನರ್ನಿರ್ಮಾಣ, ಭೂಗ್ರಹದ ಅಗತ್ಯಗಳಿಗೆ ಸ್ಪಂದಿಸುವುದು, ಜನತೆಯ ಹಕ್ಕುಗಳಿಗೆ ಗೌರವ ಹಾಗೂ ವಿಶ್ವಸಂಸ್ಥೆಗೆ ಮರುಚೈತನ್ಯ ನೀಡುವುದು’ ಈ ವರ್ಷದ ಮಹಾಧಿವೇಶನದ ಪ್ರಮುಖ ಚರ್ಚಾ ವಿಷಯವಾಗಿರುವುದು ಎಂದು ವಿಶ್ವಸಂಸ್ಥೆಯಅಧಿಕೃತ ಪ್ರಕಟಣೆಯೊಂದು ತಿಳಿಸಿದೆ.
 ‌
ವಿಶ್ವಸಂಸ್ಥೆಯ ಮಹಾಧಿವೇಶನದ ಭಾಷಣಕಾರರ ಎರಡನೆ ತಾತ್ಕಾಲಿಕಪಟ್ಟಿಯ ಪ್ರಕಾರ 109 ರಾಷ್ಟ್ರಗಳ ಗಣ್ಯರು ಖುದ್ದಾಗಿ ಪಾಲ್ಗೊಂಡು ಭಾಷಣ ಮಾಡಲಿದ್ದಾರೆ ಹಾಗೂ ಸುಮಾರು 60 ಮಂದಿ ಪೂರ್ವಭಾವಿಯಾಗಿ ರಿಕಾರ್ಡ್ ಮಾಡಲಾದ ವಿಡಿಯೋದ ಮೂಲಕ ಹೇಳಿಕೆಗಳನ್ನು ನೀಡಲಿದ್ದಾರೆ.
 
193 ಸದಸ್ಯ ಬಲದ ವಿಶ್ವಸಂಸ್ಥೆಯಲ್ಲಿ ಅಮೆರಿಕ ಅಧ್ಯಕ್ಷರಾಗಿ ಬೈಡೆನ್ ಇದೇ ಮೊದಲ ಬಾರಿಗೆ ಭಾಷಣ ಮಾಡಲಿದ್ದಾರೆ. ಬ್ರೆಝಿಲ್ ಅಧಿವೇಶನದ ಅಗ್ರ ಭಾಷಣಕಾರನಾಗಿದ್ದರೆ, ಅಫ್ಘಾನಿಸ್ತಾನವು ಕೊನೆಯದಾಗಿ ಭಾಷಣ ಮಾಡಲಿದೆ.

ಮಹಾ ಅಧಿವೇಶನದಲ್ಲಿ ಅಫ್ಘಾನ್ ಪ್ರತಿನಿಧಿ ಭಾಷಣ
 
ವಿಶ್ವಸಂಸ್ಥೆಯ ಮಹಾಧಿವೇಶನದ ಕೊನೆಯದಿನದಂದು ಅಫ್ಘಾನಿಸ್ತಾನದ ರಾಯಭಾರಿ ಅವರು ಭಾಷಣ ಮಾಡಲಿದ್ದಾರೆ. ವಿಶ್ವಸಂಸ್ಥೆಯಲ್ಲಿ ಪ್ರಸಕ್ತ ಅಫ್ಘಾನಿಸ್ತಾನದ ಪ್ರತಿನಿಧಿಯಾಗಿರುವ ಗುಲಾಂ ಇಸಾಕ್ಝಾಯ್ ಅವರನ್ನು 2021ರ ಜೂನ್ನಲ್ಲಿ ಆಗಿನ ಅಫ್ಘಾನ್ ಅಧ್ಯಕ್ಷ ಅಶ್ರಫ್ ಘನಿ ನೇಮಕ ಮಾಡಿದ್ದರು. ಆದರೆ ಇಸಾಕ್ಝಾಯ್ ಅವರ ಸ್ಥಾನಮಾನವನ್ನು ವಿರೋಧಿಸಿ ತಾಲಿಬಾನ್ ಈವರೆಗೆ ಯಾವುದೇ ಬಹಿರಂಗ ಹೇಳಿಕೆಯನ್ನು ನೀಡಿಲ್ಲ.

ವಿಶ್ವಸಂಸ್ಥೆಯ 76ನೇ ಮಹಾಧಿವೇಶನವು ಸೆಪ್ಟೆಂಬರ್ 21ರಂದು ಆರಂಭಗೊಳ್ಳಲಿದೆ. ಮಾಲ್ಡೀವ್ಸ್ ನ ವಿದೇಶಾಂಗ ಸಚಿವ ಅಬ್ದುಲ್ಲಾ ಶಾಹೀದ್ ಅವರು ಈ ವರ್ಷವಿಡೀ ಅಧಿವೇಶನದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X