Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರ ಸರಕಾರವು ತನ್ನ ಹೆಚ್ಚುತ್ತಿರುವ...

ಕೇಂದ್ರ ಸರಕಾರವು ತನ್ನ ಹೆಚ್ಚುತ್ತಿರುವ ಆದಾಯವನ್ನು ರಾಜ್ಯಗಳೊಂದಿಗೆ ಹಂಚಿಕೊಳ್ಳುತ್ತಿಲ್ಲ: ರಘುರಾಮ್ ರಾಜನ್

ವಾರ್ತಾಭಾರತಿವಾರ್ತಾಭಾರತಿ15 Sept 2021 2:40 PM IST
share
ಕೇಂದ್ರ ಸರಕಾರವು ತನ್ನ ಹೆಚ್ಚುತ್ತಿರುವ ಆದಾಯವನ್ನು ರಾಜ್ಯಗಳೊಂದಿಗೆ ಹಂಚಿಕೊಳ್ಳುತ್ತಿಲ್ಲ: ರಘುರಾಮ್ ರಾಜನ್

ಹೊಸದಿಲ್ಲಿ: ಕೇಂದ್ರ ಸರಕಾರ ತನ್ನ ಹೆಚ್ಚುತ್ತಿರುವ ಆದಾಯವನ್ನು ರಾಜ್ಯಗಳೊಂದಿಗೆ ಹಂಚಿಕೊಳ್ಳುತ್ತಿಲ್ಲ ಎಂದು ಖ್ಯಾತ ಅರ್ಥಶಾಸ್ತ್ರಜ್ಞ ಮತ್ತು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಾಜಿ ಗವರ್ನರ್ ರಘುರಾಮ್ ರಾಜನ್ ಹೇಳಿದ್ದಾರೆ.

"ರಾಜ್ಯ ಸರಕಾರಗಳ ಆರ್ಥಿಕತೆಗಳು ಚೆನ್ನಾಗಿಲ್ಲ, ಆದರೆ ಕೇಂದ್ರ   ಸರಕಾರವು ಕೇಂದ್ರ ತೆರಿಗೆಗಳ ಮೂಲಕ ಆದಾಯದ ಹೆಚ್ಚಿನ ಪಾಲನ್ನು ಸ್ವಾಹಾ ಮಾಡಿದೆ" ಎಂದು ಸುದ್ದಿಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಹೇಳಿದರು.

ಕೇಂದ್ರ ಸರಕಾರವೊಂದರಿಂದಲೇ ನಡೆಸುವುದಕ್ಕೆ ಭಾರತ  ಬಹಳಷ್ಟು ದೊಡ್ಡ ದೇಶವಾಗಿದೆ ಹಾಗೂ ದೇಶದ ಆರ್ಥಿಕ ಸ್ಥಿತಿಗಳಿಗೆ ಸಂಬಂಧಿಸಿದ ನಿರ್ಧಾರಗಳನ್ನು ವಿಳಂಬಿಸಲಾಗುತ್ತಿದೆ ಎಂದು ಅವರು ದೂರಿದರು.

"ಬಹಳಷ್ಟು ಜನರು ಮಾರ್ಗದರ್ಶನಕ್ಕಾಗಿ ಕೇಂದ್ರದತ್ತ ನೋಡುತ್ತಿದ್ದಾರೆ ಹಾಗೂ ಪಡೆಯುತ್ತಿಲ್ಲ, ತನ್ನ ಹೆಚ್ಚುತ್ತಿರುವ ಆದಾಯದ ಹೊರತಾಗಿಯೂ ಸರಕಾರ ಪ್ರಾಯಶಃ  ತನ್ನ ಕ್ರೆಡಿಟ್ ರೇಟಿಂಗ್‍ಗಳನ್ನು ಕಾಪಾಡುವ ಉದ್ದೇಶದಿಂದ ಖರ್ಚು ಮಾಡುತ್ತಿಲ್ಲ, ಆದರೆ ಕ್ರೆಡಿಟ್ ರೇಟಿಂಗ್ ಏಜನ್ಸಿಗಳೇ  ಅಗತ್ಯವಿರುವ ಕ್ಷೇತ್ರಗಳಲ್ಲಿ ಖರ್ಚು ಮಾಡಲು ಶಿಫಾರಸು ಮಾಡುತ್ತಿವೆ" ಎಂದು ಅವರು ಹೇಳಿದರು.

ಭಾರತೀಯರು ಚಿನ್ನ ಅಡಮಾನವಿಟ್ಟು ಸಾಲ ಪಡೆಯುವುದು ಹೆಚ್ಚುತ್ತಿದೆ ಎಂದು ಹೇಳಿದ ರಾಜನ್ "ತಮ್ಮ ಪರಿಸ್ಥಿತಿ ದಯನೀಯವಾದಾಗ ಮಾತ್ರ ಭಾರತೀಯರು ತಮ್ಮ ಕುಟುಂಬದ ಚಿನ್ನವನ್ನು ಮಾರಾಟ ಮಾಡುತ್ತಾರೆ" ಎಂದರಲ್ಲದೆ ಪರಿಸ್ಥಿತಿಯನ್ನು ಸುಧಾರಿಸಲು ನಗದು ಹಸ್ತಾಂತರಿಸುವ ಅಗತ್ಯವಿದೆ ಎಂದರು.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮಾದರಿಯಲ್ಲಿಯೇ ನಗರ ಪ್ರದೇಶಗಳಲ್ಲಿ ಕೆಲಸ ಅರಸಿಕೊಂಡು ಬರುವವರಿಗೆ ಯೋಜನೆ ರೂಪಿಸಬೇಕು ಎಂದು ಅವರು ಹೇಳಿದರು.

"ಆರ್ಥಿಕ ಸಮಸ್ಯೆಯಿಂದ ಬಳಲುತ್ತಿರುವ ನಗರ ಪ್ರದೇಶಗಳ ಜನರಿಗೆ  ಬೆಂಬಲ ದೊರೆಯದೇ ಇರುವುದರಿಂದ ಅವರು ಮರಳಿ ಹಳ್ಳಿಗಳಿಗೆ ಹೋಗುತ್ತಾರೆ, ಇದರಿಂದಾಗಿ ಕಾರ್ಮಿಕರ ಕೊರತೆ ಎದುರಾಗುತ್ತದೆ ಹಳ್ಳಿಗಳಿಗೆ ವಾಪಸಾದ ಜನರಿಗೆ ಅವರ ಸ್ಥಿತಿ ಉತ್ತಮಗೊಳ್ಳಲಿದೆ ಎಂಬ ಭರವಸೆ ನೀಡಿ ಮರಳಿ ಕರೆಸಿಕೊಳ್ಳುವುದು ಕಷ್ಟಕರ" ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X