ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ
ಮಂಗಳೂರು ಸೆ.15: ಬಂಟ್ವಾಳ ತಾಲೂಕಿನ ರಾಯಿ ಗ್ರಾಪಂ ವ್ಯಾಪ್ತಿಯಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯುವ ಬಗ್ಗೆ ಅರ್ಜಿ ಆಹ್ವಾನಿಸಿದೆ.
ಜಂಟಿ ನಿರ್ದೇಶಕರ ಕಚೇರಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ದ.ಕ. ಜಿಲ್ಲೆ ಅಥವಾ ತಹಶೀಲ್ದಾರರು ಬಂಟ್ವಾಳ ತಾಲೂಕು ಈ ವಿಳಾಸಕ್ಕೆ ಅ.14ರೊಳಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಮಾಹಿತಿಗೆ ಬಂಟ್ವಾಳ ತಹಶೀಲ್ದಾರರ ಕಚೇರಿ ಅಥವಾ ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ (ದೂ.ಸಂ: 0824-2220571)ಯನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.
Next Story