Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರಥಮ ಪಿಯು ಕಾಲೇಜು ಭೌತಿಕ ತರಗತಿಗಳು...

ಪ್ರಥಮ ಪಿಯು ಕಾಲೇಜು ಭೌತಿಕ ತರಗತಿಗಳು ಆರಂಭ

ವಾರ್ತಾಭಾರತಿವಾರ್ತಾಭಾರತಿ16 Sept 2021 5:27 PM IST
share
ಪ್ರಥಮ ಪಿಯು ಕಾಲೇಜು ಭೌತಿಕ ತರಗತಿಗಳು ಆರಂಭ

ಮಂಗಳೂರು, ಸೆ.16: ಪ್ರೌಢ ಶಿಕ್ಷಣವನ್ನು ಮುಗಿಸಿ ಕಾಲೇಜು ಮೆಟ್ಟಿಲು ಹತ್ತುವುದು ವಿದ್ಯಾರ್ಥಿಗಳ ಪಾಲಿಗೊಂದು ಹೊಸ ಅನುಭವ, ಹುರುಪು. ಆದರೆ ಕೊರೋನ ಆತಂಕವು ಕಳೆದೆರಡು ವರ್ಷಗಳಿಂದ ಮಕ್ಕಳ ಈ ಹುರುಪನ್ನು ಕಸಿದಿತ್ತು. ಆನ್‌ಲೈನ್ ತರಗತಿಗಳು ಮಕ್ಕಳ ಶೈಕ್ಷಣಿಕ ಭವಿಷ್ಯದ ಮೇಲೆ ಆತಂಕದ ಛಾಯೆಯೆನ್ನು ಎಳೆದಿದೆ.

ಈ ನಡುವೆ ಇದೀಗ ಹಂತಹಂತವಾಗಿ ಶಾಲಾ ಕಾಲೇಜುಗಳು ಆರಂಭಿಸಲು ರಾಜ್ಯ ಸರಕಾರ ಸೂಚನೆ ನೀಡಿರುವಂತೆಯೇ ಇಂದಿನಿಂದ ಪ್ರಥಮ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳು ಆರಂಭಗೊಂಡಿವೆ. ದ.ಕ. ಜಿಲ್ಲೆಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಹುರುಪಿನಿಂದ ಕಾಲೇಜಿನತ್ತ ಹೆಜ್ಜೆ ಹಾಕಿದ್ದಾರೆ. ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಶಾಲಾ ಕಾಲೇಜುಗಳಲ್ಲಿ ಭೌತಿಕ ತರಗತಿಗಳನ್ನು ಆರಂಭಿಸಲು ರಾಜ್ಯ ಸರಕಾರ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಈಗಾಗಲೇ ಎಸೆಸೆಲ್ಸಿ, ದ್ವಿತೀಯ ಪಿಯುಸಿ ತರಗತಿಗಳು ಆರಂಭಗೊಂಡಿವೆ.

ದ್ವಿತೀಯ ಪಿಯುನ ಭೌತಿಕ ತರಗತಿಗಳು ಆರಂಭವಾಗಿದ್ದು ದಿನದಿಂದ ದಿನಕ್ಕೆ ವಿದ್ಯಾರ್ಥಿಗಳ ಹಾಜರಾತಿ ಹೆಚ್ಚುತ್ತಿದೆ. ಅವರಿಗೆ ಪೂರ್ವಾಹ್ನದಲ್ಲಿ ತರಗತಿಗಳು ಸಾಗಿದರೆ ಅಪರಾಹ್ನದ ಬಳಿಕ ಪ್ರಥಮ ಪಿಯುಗೂ ತರಗತಿ ಆರಂಭವಾಗಿದ್ದು ಜಿಲ್ಲೆಯ ಎಲ್ಲ ಕಾಲೇಜುಗಳಲ್ಲಿ ಮೊದಲ ದಿನವೇ ಉತ್ತಮ ಸ್ಪಂಧನೆ ದೊರಕಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ವಿದ್ಯಾರ್ಥಿಗಳು ತರಗತಿಗೆ ಹಾಜರಾಗುವ ಸಾಧ್ಯತೆಯಿದೆ ಎಂದು ಕಾಲೇಜುಗಳ ಪ್ರಾಂಶುಪಾಲರು ಮಾಹಿತಿ ಹಂಚಿಕೊಂಡಿದ್ದಾರೆ.ಈಗಾಗಲೇ ದ್ವಿತೀಯ ಪಿಯುಗೆ 18,172 ವಿದ್ಯಾರ್ಥಿಗಳು ತರಗತಿಗೆ ಹಾಜರಾಗಿದ್ದಾರೆ. ಇದರಲ್ಲಿ 234 ಮಂದಿ ಕೇರಳದ ವಿದ್ಯಾರ್ಥಿಗಳು ಹಾಗೂ 2811 ಮಂದಿ ಹಾಸ್ಟೆಲ್‌ನಲ್ಲಿ ನಿಂತು ಕಾಲೇಜಿಗೆ ಬಂದಿದ್ದಾರೆ. ಈ ಮೂಲಕ 21,217 ವಿದ್ಯಾರ್ಥಿಗಳು ಹಾಜರಾಗಿದ್ದಾರೆ.

ಇದೇ ರೀತಿಯಲ್ಲಿ ಗುರುವಾರ ಜಿಲ್ಲೆಯಲ್ಲಿ ಪ್ರಥಮ ಪಿಯುಸಿಗೆ 11,633 ವಿದ್ಯಾರ್ಥಿಗಳು ಹಾಜರಾಗಿದ್ದು, 91 ಮಂದಿ ಕೇರಳದ ವಿದ್ಯಾರ್ಥಿಗಳು 1,337 ಮಂದಿ ಹಾಸ್ಟೆಲ್‌ನಿಂದ ತರಗತಿಗೆ ಬಂದಿದ್ದಾರೆ. ಒಟ್ಟು 13,061 ಮಂದಿ ವಿದ್ಯಾರ್ಥಿಗಳು ತರಗತಿಗೆ ಹಾಜರಾಗಿದ್ದಾರೆ.ಕಳೆದ ವರ್ಷವೂ ಕೋವಿಡ್ ಪ್ರಥಮ ಅಲೆಯ ಹಿನ್ನೆಲೆಯಲ್ಲಿ ಸುಮಾರು ಒಂದು ತಿಂಗಳ ಅವಧಿಗೆ ಮಾತ್ರವೇ ಪ್ರಥಮ ಪಿಯುಸಿ ಸೇರಿದಂತೆ ಶಾಲಾ ಕಾಲೇಜುಗಳು ಭೌತಿಕ ತರಗತಿಗಳನ್ನು ನಡೆಸಲು ಸಾಧ್ಯವಾಗಿತ್ತು. ಈ ಬಾರಿ ಕೊರೋನ ದ್ವಿತೀಯ ಅಲೆ ಬಹುತೇಕ ತಗ್ಗಿದ್ದು, ಜನಸಾಮಾನ್ಯರು ಹಾಗೂ ಪೋಷಕರೂ ಬಹುತೇಕವಾಗಿ ಆತಂಕರಹಿತರಾಗಿ ಮಕ್ಕಳನ್ನು ಶಾಲಾ ಕಾಲೇಜಿಗೆ ಕಳುಹಿಸಲು ಉತ್ಸುಕರಾಗಿದ್ದಾರೆ. ಹಾಗಾಗಿ ಮುಂದಿನ ಕೆಲ ದಿನಗಳಲ್ಲಿಯೇ ಭೌತಿಕ ತರಗತಿಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಇನ್ನಷ್ಟು ಹೆಚ್ಚಲಿದೆ. ಹಿಂದಿನಂತೆ ಭೌತಿಕ ತರಗತಿಗಳ ಮೂಲಕ ವಿದ್ಯಾರ್ಥಿಗಳ ಶಿಕ್ಷಣದ ಭವಿಷ್ಯವೂ ಸಹಜವಾಗುವ ಭರವಸೆ ಮೂಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X