ಮಹಮ್ಮದ್ ಆಲಿ ಕುಂಡಾಜೆ
ಪುತ್ತೂರು : ತಾಲೂಕಿನ ರಾಮಕುಂಜ ಗ್ರಾಮದ ಕುಂಡಾಜೆ ನಿವಾಸಿ ಸಿ.ಕೆ. ಮಹಮ್ಮದ್ ಆಲಿ (58) ಕೆಲ ದಿನಗಳ ಅನಾರೋಗ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು.
ಜೆಡಿಎಸ್ ಮುಖಂಡರಾಗಿದ್ದ ಮಹಮ್ಮದ್ ಆಲಿಯವರು ಆತೂರು ಬದ್ರಿಯಾ ಜುಮಾ ಮಸೀದಿ ಆಡಳಿತ ಸಮಿತಿಯ ಉಪಾಧ್ಯಕ್ಷ, ಸದಸ್ಯರಾಗಿ, ಆತೂರು ಬದ್ರಿಯಾ ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದಿಯಾಗಿ ಹಲವಾರು ಸಂಘ ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಸಮಾಜ ಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು.
ಮೃತರು ಪತ್ನಿ, ನಾಲ್ವರು ಪುತ್ರರನ್ನು ಅಗಲಿದ್ದಾರೆ.
Next Story