Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬೆನ್ನುನೋವಿನಿಂದ ಬೇಸತ್ತು ನಿವೃತ್ತಿಗೆ...

ಬೆನ್ನುನೋವಿನಿಂದ ಬೇಸತ್ತು ನಿವೃತ್ತಿಗೆ ನಿರ್ಧರಿಸಿದ ಅಥ್ಲೀಟ್ ಸ್ವಪ್ನಾ ಬರ್ಮನ್

ವಾರ್ತಾಭಾರತಿವಾರ್ತಾಭಾರತಿ17 Sept 2021 5:49 PM IST
share
ಬೆನ್ನುನೋವಿನಿಂದ ಬೇಸತ್ತು ನಿವೃತ್ತಿಗೆ ನಿರ್ಧರಿಸಿದ ಅಥ್ಲೀಟ್ ಸ್ವಪ್ನಾ ಬರ್ಮನ್

ಹೊಸದಿಲ್ಲಿ: ಬೆನ್ನು ನೋವಿನಿಂದ ಬಳಲುತ್ತಿರುವ,  ಖಿನ್ನತೆಯ ವಿರುದ್ಧ ಹೋರಾಡುತ್ತಿರುವ ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತೆ ಕ್ರೀಡಾಪಟು ಸ್ವಪ್ನಾ ಬರ್ಮನ್ ನಿವೃತ್ತಿಯಾಗಲು ನಿರ್ಧರಿಸಿದ್ದಾರೆ. ಈ ಕುರಿತು ಕೆಲವೇ ದಿನಗಳಲ್ಲಿ ಅಧಿಕೃತ ಘೋಷಣೆಯನ್ನು ಮಾಡಲಿದ್ದಾರೆ.

ನಾರ್ತ್ ಈಸ್ಟ್ ಫ್ರಾಂಟಿಯರ್ ರೈಲ್ವೇ ಕ್ರೀಡಾಪಟುವಾಗಿರುವ  ಸ್ವಪ್ನಾ ಅವರು ವಾರಂಗಲ್‌ನಲ್ಲಿ ನಡೆದ 60 ನೇ ರಾಷ್ಟ್ರೀಯ ಓಪನ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಹೈಜಂಪ್‌ನಲ್ಲಿ ಚಿನ್ನದ ಪದಕ ಗೆದ್ದ 24 ಗಂಟೆಯೊಳಗೆ ಈ ನಿರ್ಧಾರ ಕೈಗೊಂಡಿದ್ದಾರೆ.

"ನನಗೆ ನೋವು ಸಹಿಸಿಕೊಳ್ಳಲಾಗುತ್ತಿಲ್ಲ. ಮಾನಸಿಕವಾಗಿ ನಾನು ತುಂಬಾ ಖಿನ್ನತೆಗೆ ಒಳಗಾಗಿದ್ದೇನೆ. ಕ್ರೀಡಾಕೂಟಗಳಲ್ಲಿ ಇನ್ನು ಸ್ಪರ್ಧಿಸುವುದು ಸುಲಭವಲ್ಲ. ಸ್ವಲ್ಪ ಗೊಂದಲವಿದ್ದರೂ ವಿದಾಯ ಹೇಳಲು ಸಿದ್ಧವಾಗಿದ್ದೇನೆ. ಕೋಲ್ಕತಾ ತಲುಪಿದ ನಂತರ ಈ ಕುರಿತಾಗಿ ಘೋಷಣೆ ಮಾಡುವೆ’’ ಎಂದು ಸ್ವಪ್ನಾ ವಾರಂಗಲ್‌ನಿಂದ ಪಿಟಿಐಗೆ ತಿಳಿಸಿದರು.

ಸ್ವಪ್ನಾ ಜಕಾರ್ತಾದಲ್ಲಿ 2018 ರಲ್ಲಿ ನಡೆದಿದ್ದ ಏಷ್ಯನ್ ಗೇಮ್ಸ್ ನಲ್ಲಿ  ಚಿನ್ನ ಗೆದ್ದ ಮೊದಲ ಭಾರತೀಯ ಹೆಪ್ಟಾಥ್ಲೀಟ್ ಎಂಬ ಹಿರಿಮೆಗೆ ಪಾತ್ರರಾಗಿದ್ದರು.  ಸ್ವಪ್ನಾ ಅವರ ಎರಡೂ ಪಾದದ ಮೇಲೆ ಆರು ಕಾಲ್ಬೆರಳುಗಳಿವೆ. 2019ರಲ್ಲಿ ದೋಹಾದಲ್ಲಿ ನಡೆದ ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಗೆದ್ದಿದ್ದರು. ಅದು ಅವರ ಕೊನೆಯ ಅಂತರ್ ರಾಷ್ಟ್ರೀಯ ಸ್ಪರ್ಧೆಯಾಗಿತ್ತು.

ಕೋವಿಡ್-19ನಿಂದಾಗಿ ಹೇರಲಾಗಿದ್ದ ಲಾಕ್‌ಡೌನ್ ನಿಂದಾಗಿ ಸ್ವಪ್ನಾ 2020 ರಲ್ಲಿ ಯಾವುದೇ ಸ್ಪರ್ಧೆಯಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ ಹಾಗೂ 2021 ರಲ್ಲಿ ಅವರು ಟೋಕಿಯೊ ಗೇಮ್ಸ್ ಅರ್ಹತಾ ಅಂಕವನ್ನು ಗುರಿಯಾಗಿಸಿಕೊಂಡಿದ್ದರು. ಆದರೆ ಮತ್ತೆ ಕಾಡಿದ ಗಾಯದ ಸಮಸ್ಯೆಗಳು ಹಾಗೂ ಕೊರೋನದ  ಎರಡನೇ ಅಲೆಯು ಅವರ ಎಲ್ಲಾ ಯೋಜನೆಗಳನ್ನು ಹಳಿ ತಪ್ಪಿಸಿತ್ತು.

ಈ ವರ್ಷ ಸ್ವಪ್ನಾ ಅವರು ಫೆಡರೇಶನ್ ಕಪ್ ಹಾಗೂ ಈಗ ನಡೆಯುತ್ತಿರುವ ಓಪನ್ ನ್ಯಾಷನಲ್ಸ್‌ನಲ್ಲಿ ಮಾತ್ರ ಭಾಗವಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X