Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅನಿಲ್‌ ದೇಶ್‌ ಮುಖ್‌ ಟಿಆರ್ಪಿ...

ಅನಿಲ್‌ ದೇಶ್‌ ಮುಖ್‌ ಟಿಆರ್ಪಿ ಹಗರಣದಲ್ಲಿ ಅರ್ನಬ್‌ ಗೋಸ್ವಾಮಿಯನ್ನು ಬಂಧಿಸಲು ಬಯಸಿದ್ದರು: ಸಚಿನ್‌ ವಾಝೆ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ18 Sept 2021 1:42 PM IST
share
ಅನಿಲ್‌ ದೇಶ್‌ ಮುಖ್‌ ಟಿಆರ್ಪಿ ಹಗರಣದಲ್ಲಿ ಅರ್ನಬ್‌ ಗೋಸ್ವಾಮಿಯನ್ನು ಬಂಧಿಸಲು ಬಯಸಿದ್ದರು: ಸಚಿನ್‌ ವಾಝೆ ಹೇಳಿಕೆ

ಮುಂಬೈ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರು ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿಯನ್ನು ಟಿಆರ್‍ಪಿ ಹಗರಣದಲ್ಲಿ ಬಂಧಿಸಬೇಕೆಂದು ಬಯಸಿದ್ದರು ಎಂದು ಅಮಾನತುಗೊಂಡಿರುವ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಝೆ ಅವರು ಜಾರಿ ನಿರ್ದೇಶನಾಲಯದ ಸಹಾಯಕ ನಿರ್ದೇಶಕರಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ದೇಶಮುಖ್ ಮತ್ತು ಇತರರ ವಿರುದ್ಧ ಇರುವ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಝೆ ಅವರ ಈ ಹೇಳಿಕೆ ಬಂದಿದೆ.

ದೇಶಮುಖ್ ಅವರು ಮುಂಬೈ ಬಾರ್ ಮತ್ತು ರೆಸ್ಟಾರೆಂಟ್ ಮಾಲಕರಿಂದ ತಮ್ಮ ಪರವಾಗಿ ಹಣ ವಸೂಲಿ ಮಾಡಲು ಮುಂಬೈ ಪೊಲೀಸ್ ಅಧಿಕಾರಿಗಳನ್ನು ಬಲವಂತಪಡಿಸಿದ್ದಾರೆಂಬ ಆರೋಪಗಳ ಕುರಿತಂತೆ ಸಿಬಿಐ ದಾಖಲಿಸಿದ್ದ ಎಫ್‍ಐಆರ್ ಆಧಾರದಲ್ಲಿ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದೆ.

ಡಿಸೆಂಬರ್ ಹಾಗೂ ಫೆಬ್ರವರಿ ನಡುವೆ  ಬಾರ್ ಮಾಲೀಕರಿಂದ ಸಂಗ್ರಹಿಸಲಾದ ರೂ 4 ಕೋಟಿಗೂ ಅಧಿಕ ಹಣವನ್ನು ದಿಲ್ಲಿಯ ನಾಲ್ಕು ಶೆಲ್ ಕಂಪೆನಿಗಳ ಮೂಲಕ ದೇಶಮುಖ್ ಅವರಿಗೆ ಸೇರಿದ ನಾಗ್ಪುರ್‍ದಲ್ಲಿರುವ ಚ್ಯಾರಿಟೇಬಲ್ ಟ್ರಸ್ಟಿಗೆ ವರ್ಗಾಯಿಸಲಾಗಿತ್ತು ಎಂದು ಜಾರಿ ನಿರ್ದೇಶನಾಲಯ  ಹೇಳುತ್ತಿದೆ. ಆದರೆ ಇಡಿ ಚಾರ್ಜ್‍ಶೀಟ್‍ನಲ್ಲಿ ದೇಶಪಾಂಡೆ ಹೆಸರು ಉಲ್ಲೇಖವಿಲ್ಲ. ದೇಶಮುಖ್ ಅವರ ಆಪ್ತ ಸಹಾಯಕ ಮತ್ತು ಆಪ್ತ ಕಾರ್ಯದರ್ಶಿ ಸಹಿತ 14 ಆರೋಪಿಗಳಲ್ಲಿ ವಾಝೆ ಕೂಡ ಒಬ್ಬರಾಗಿದ್ದಾರೆ.

ಟಿಆರ್‍ಪಿ ಹಗರಣ, ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣದಲ್ಲಿ ಗೋಸ್ವಾಮಿ ಬಂಧನ, ದಿಲೀಪ್ ಛಾಬ್ರಿಯ ಪ್ರಕರಣ ಮತ್ತು ಸಾಮಾಜಿಕ ಜಾಲತಾಣ ನಕಲಿ ಫಾಲೋವರ್ಸ್ ಪ್ರಕರಣದಲ್ಲಿ ದೇಶಪಾಂಡೆ ನೇರವಾಗಿ ತಮಗೆ ಸೂಚನೆಗಳನ್ನು ನೀಡುತ್ತಿದ್ದರೆಂದೂ ವಾಝೆ ತಮ್ಮ ಹೇಳಿಕೆಯಲ್ಲಿ ಜಾರಿ ನಿರ್ದೇಶನಾಲಯಕ್ಕೆ ತಿಳಿಸಿದ್ದಾರೆ.

ರಾಜ್ಯದ ಸಾರಿಗೆ ಸಚಿವ ಹಾಗೂ ದೇಶಮುಖ್ ಅವರು ಆಗಿನ ಮುಂಬೈ ಪೊಲೀಸ್ ಮುಖ್ಯಸ್ಥ ಪರಂ ಬೀರ್ ಸಿಂಗ್ ಅವರ ಹೊರಡಿಸಿದ ವರ್ಗಾವಣೆ ಆದೇಶಗಳನ್ನು ರದ್ದುಗೊಳಿಸಲು 10 ಡಿಸಿಪಿಗಳಿಂದ ರೂ 40 ಕೋಟಿ ಪಡೆದಿದ್ದಾರೆಂದೂ ವಾಝೆ ಆರೋಪಿಸಿದ್ದಾರೆ. ಇದರ ಪೈಕಿ ರೂ 20 ಕೋಟಿಯನ್ನು  ದೇಶಮುಖ್ ಅವರಿಗೆ ಅವರ ಆಪ್ತ ಸಹಾಯಕ ಸಂಜೀವ್ ಪಲಂಡೆ ಹಾಗೂ ಅನಿಲ್ ಪರಬ್ ಮೂಲಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಬಜರಂಗ್ ಕರ್ಮಾಟೆ ಮೂಲಕ ನೀಡಲಾಗಿತ್ತು ಎಂದು ವಾಝೆ ಹೇಳಿದ್ದಾರೆ.

ಆದರೆ ದೇಶಮುಖ್ ಪರವಾಗಿ ಸಂಗ್ರಹಿಸಲಾದ ಹಣದಿಂದ ತಾವು ಏನನ್ನೂ ಪಡೆದುಕೊಂಡಿಲ್ಲ, "ಪೊಲೀಸ್ ಇಲಾಖೆ ಸೇವೆಯಲ್ಲಿ ಪುನಃಸ್ಥಾಪನೆಗೊಂಡ ನಂತರ ನನ್ನ ಹುದ್ದೆಯನ್ನು ಉಳಿಸಿಕೊಳ್ಳುವ  ಅನಿವಾರ್ಯತೆ ಜತೆಗೆ ರಾಜಕೀಯ ಒತ್ತಡದಿಂದ ದೇಶಮುಖ್ ಸೂಚನೆಯಂತೆ ನಡೆದುಕೊಂಡಿದ್ದೆ" ಎಂದೂ ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X