Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಠಿಣ ಪರಿಶ್ರಮ ಹಾಗೂ ಶಿಸ್ತಿನ ಜೀವನದಿಂದ...

ಕಠಿಣ ಪರಿಶ್ರಮ ಹಾಗೂ ಶಿಸ್ತಿನ ಜೀವನದಿಂದ ಯಶಸ್ಸು ಸಾಧ್ಯ: ಇಕ್ಬಾಲ್ ಹೊತ್ತೂರ್

ವಾರ್ತಾಭಾರತಿವಾರ್ತಾಭಾರತಿ18 Sept 2021 5:49 PM IST
share
ಕಠಿಣ ಪರಿಶ್ರಮ ಹಾಗೂ ಶಿಸ್ತಿನ ಜೀವನದಿಂದ ಯಶಸ್ಸು ಸಾಧ್ಯ: ಇಕ್ಬಾಲ್ ಹೊತ್ತೂರ್

ಬೆಂಗಳೂರು, ಸೆ.18: ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾದದ್ದು. ಶಾಲೆಗಳು ಮಕ್ಕಳಿಗೆ ಜ್ಞಾನ, ಕೌಶಲ, ಮೌಲ್ಯಗಳು ಹಾಗೂ ಉತ್ತಮ ಹವ್ಯಾಸಗಳನ್ನು ಕಲಿಸುವ ಸ್ಥಳವಾಗಿದೆ. ಕಠಿಣ ಪರಿಶ್ರಮ ಹಾಗೂ ಶಿಸ್ತಿನ ಜೀವನದಿಂದ ಯಶಸ್ಸು ಗಳಿಸಲು ಸಾಧ್ಯ ಎಂಬುದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು ಎಂದು ಸಲ್ ಸಬೀಲ್ ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷ ಇಕ್ಬಾಲ್ ಹೊತ್ತೂರ್ ಹೇಳಿದರು.

ಶನಿವಾರ ಸಲ್ ಸಬೀಲ್ ಎಜುಕೇಷನಲ್ ಟ್ರಸ್ಟ್ ಅಧೀನದಲ್ಲಿರುವ ಇಂದಿರಾ ನಗರದ ಸಿಲಿಕಾನ್ ಸಿಟಿ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಲಾಗಿದ್ದ 2019-20 ಹಾಗೂ 2020-21ನೆ ಶೈಕ್ಷಣಿಕ ಸಾಲಿನಲ್ಲಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿರುವ ವಿದ್ಯಾರ್ಥಿಗಳಿಗೆ ಪುರಸ್ಕಾರ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶಾಲೆಗಳಿಗೆ ಶಿಕ್ಷಣ ಪಡೆಯಲು ಬರುವಂತಹ ಎಲ್ಲ ವಿದ್ಯಾರ್ಥಿಗಳು ಸನ್ಮಾನಕ್ಕೆ ಅರ್ಹರು. ಕೇವಲ ಅಂಕಗಳ ಆಧಾರದಲ್ಲಿ ವಿದ್ಯಾರ್ಥಿಗಳ ಅರ್ಹತೆಯನ್ನು ಅಳೆಯಲು ಸಾಧ್ಯವಿಲ್ಲ. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಪ್ರತಿಭೆಗಳು ಇರುತ್ತವೆ. ಅವುಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ಅವರು ಕರೆ ನೀಡಿದರು.

ಕೋವಿಡ್ ಮಹಾಮಾರಿ ಇಡೀ ವಿಶ್ವದಲ್ಲಿ ಹಲವಾರು ಸವಾಲುಗಳನ್ನು ಸೃಷ್ಟಿಸಿದೆ. ಇದು ನಮ್ಮ ಸಮಾಜ, ದಿನನಿತ್ಯದ ಬದುಕಿನ ಮೇಲೂ ಪರಿಣಾಮ ಬೀರಿದೆ. ಮನೆಯಿಂದಲೆ ಕೆಲಸ, ಮನೆಯಿಂದಲೆ ಶಿಕ್ಷಣ ಎಂಬುದು ನಾವು ಅನುಭವಿಸಿದ್ದೇವೆ ಎಂದು ಅವರು ಹೇಳಿದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ನಿವೃತ್ತ ಐಎಎಸ್ ಅಧಿಕಾರಿ ಮುಹಮ್ಮದ್ ಸನಾವುಲ್ಲಾ ಮಾತನಾಡಿ, ಕಳೆದ ಎರಡು ವರ್ಷಗಳಿಂದ ಮಕ್ಕಳು ಶಾಲೆಗೆ ಬಂದಿಲ್ಲ, ಭೌತಿಕ ತರಗತಿಗಳಲ್ಲಿ ಭಾಗವಹಿಸಿಲ್ಲ. ಆನ್‍ಲೈನ್ ಮೂಲಕ ತರಗತಿಗಳಿಗೆ ಹಾಜರಾಗಿ ಕಠಿಣ ಪರಿಶ್ರಮದಿಂದ ಉತ್ತಮ ಶ್ರೇಣಿಯೊಂದಿಗೆ ತೇರ್ಗಡೆಯಾಗಿದ್ದಾರೆ ಎಂದರು.

ಅಲ್ಲದೆ, ಹಲವು ವಿದ್ಯಾರ್ಥಿಗಳು ಕನ್ನಡ ಭಾಷೆ ಪರೀಕ್ಷೆಯಲ್ಲಿ 100ಕ್ಕೆ 100 ಅಂಕಗಳನ್ನು ಪಡೆದಿರುವುದು ಶ್ಲಾಘನೀಯ. ತಂತ್ರಜ್ಞಾನದ ಮೂಲಕ ತರಗತಿಗಳನ್ನು ನಡೆಸಿದ್ದು ಶಿಕ್ಷಕರಿಗೆ ಒಂದು ಹೊಸ ಅನುಭವ. ತಂತ್ರಜ್ಞಾನವೇ ಭವಿಷ್ಯವಾಗಿದೆ. ಆದರೆ, ಈ ಕೋವಿಡ್ ಕಾರಣದಿಂದ ತಂತ್ರಜ್ಞಾನದ ಬಳಕೆಯನ್ನು ನಾವು ಬಹಳ ಬೇಗನೆ ಆರಂಭಿಸುವಂತಾಯಿತು ಎಂದು ಅವರು ಹೇಳಿದರು.

ಪಿಯು ಶಿಕ್ಷಣದ ಬಳಿಕ ಮಕ್ಕಳು ತಮ್ಮ ಭವಿಷ್ಯಕ್ಕೆ ಸಂಬಂಧಿಸಿದಂತೆ ಹಲವು ಆಯ್ಕೆಗಳನ್ನು ಮುಂದೆ ಇಟ್ಟುಕೊಳ್ಳಬೇಕು. ಇದರಿಂದ, ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಒತ್ತಡ ಬೀಳಲ್ಲ. ಅಲ್ಲದೆ, ಹಲವು ಅವಕಾಶಗಳು ಮುಂದೆ ಬರುತ್ತವೆ ಎಂದು ಮುಹಮ್ಮದ್ ಸನಾವುಲ್ಲಾ ತಿಳಿಸಿದರು.

ಇದೇ ಸಂದರ್ಭದಲ್ಲಿ ಭಾರತೀಯ ಕನ್ನಡ ಸಂಘದ ವತಿಯಿಂದ ಕನ್ನಡ ಭಾಷಾ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದಂತಹ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ, ಪಾರಿತೋಷಕವನ್ನು ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಡಿ.ವಿ.ಪ್ರಸಾದ್, ನಾಸಿಹ್ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ಮೌಲಾನಾ ಸೈಯ್ಯದ್ ಶಬ್ಬೀರ್ ಅಹ್ಮದ್ ನದ್ವಿ, ಕರ್ನಾಟಕ ವಿವಿಯ ವಿಶ್ರಾಂತ ಕುಲಪತಿ ಪ್ರೊ.ಎಂ.ಖಾಜಾ ಪೀರ್, ಸಲ್ ಸಬೀಲ್ ಎಜುಕೇಷನಲ್ ಟ್ರಸ್ಟ್ ಕಾರ್ಯದರ್ಶಿ ಝಿಯಾವುಲ್ಲಾ ಖಾನ್, ಟ್ರಸ್ಟಿಗಳಾದ ಮುಹಮ್ಮದ್ ಇಬ್ರಾಹಿಮ್ ಶಫಿಕ್, ಅಬ್ದುಲ್ ರಹ್ಮಾನ್, ಮುಹಮ್ಮದ್ ಯೂಸುಫ್, ನಿಸಾರ್ ಅಹ್ಮದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X