Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿಶ್ವಾಸದ ಮನೆಯಿಂದ 12 ವರ್ಷಗಳ ಬಳಿಕ...

ವಿಶ್ವಾಸದ ಮನೆಯಿಂದ 12 ವರ್ಷಗಳ ಬಳಿಕ ಒಂದಾದ ತಾಯಿ ಮಕ್ಕಳು!

ವಾರ್ತಾಭಾರತಿವಾರ್ತಾಭಾರತಿ18 Sept 2021 9:37 PM IST
share
ವಿಶ್ವಾಸದ ಮನೆಯಿಂದ 12 ವರ್ಷಗಳ ಬಳಿಕ ಒಂದಾದ ತಾಯಿ ಮಕ್ಕಳು!

ಉಡುಪಿ, ಸೆ.18: ಮಾನಸಿಕ ಅಸ್ವಸ್ಥರಾಗಿ ಬೀದಿ ಬೀದಿ ಅಲೆದಾಡುತ್ತಿದ್ದ ಅಸ್ಸಾಂ ಮೂಲದ ಮಲ್ಲಿಕಾ ಬೇಗಂ ಯಾನೆ ಖತೂನ್(55) ಇದೀಗ ಶಂಕರ ಪುರದ ವಿಶ್ವಾಸದ ಮನೆ ಅನಾಥಾಶ್ರಮದ ಆರೈಕೆಯಿಂದ ಗುಣಮುಖರಾಗಿ 12 ವರ್ಷಗಳ ನಂತರ ತನ್ನ ಮಕ್ಕಳನ್ನು ಸೇರಿಕೊಂಡಿದ್ದಾರೆ.

ಉಡುಪಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವಾಸದ ಮನೆಯ ಸಂಸ್ಥಾಪಕ ಪಾ.ಸುನೀಲ್ ಜಾನ್ ಡಿಸೋಜ, ಬೇಗಂಗೆ ಐವರು ಮಕ್ಕಳಿದ್ದು, ಅವರಲ್ಲಿ ಎರಡನೇ ಮಗ ತಹಜುದ್ದೀನ್ ಹಾಗೂ ಸಂಬಂಧಿಕರೊಬ್ಬರು ಸೆ.17ರಂದು ಮಲ್ಲಿಕಾರನ್ನು ಕರೆದುಕೊಂಡು ಹೋಗಲು ಆಗಮಿಸಿದ್ದಾರೆ. ಇವರು ಇಂದು ಇಲ್ಲಿಂದ ಹೊರಟು ನಾಲ್ಕು ದಿನಗಳಲ್ಲಿ ತಮ್ಮ ಊರು ಸೇರಲಿದ್ದಾರೆ ಎಂದರು.

ಮಂಗಳೂರಿನಲ್ಲಿ ಮಾನಸಿಕ ಅಸ್ವಸ್ಥರಾಗಿ, ಊಟವಿಲ್ಲದೆ ಅಲೆದಾಡುತ್ತಿದ್ದ ಇವರನ್ನು 2009ರ ಸೆ.14ರಂದು ವಿಶ್ವಾಸದ ಮನೆಗೆ ಕರೆ ತರಲಾಯಿತು. ನಂತರ ಅಲ್ಲಿನ ಆರೈಕೆ, ಪ್ರೀತಿ ಮತ್ತು ಔಷಧೋಪಚಾರದಿಂದ ಒಂದು ತಿಂಗಳ ಒಳಗೆ ಗುಣಮುಖರಾದರು. ಬಳಿಕ ತನ್ನ ಹೆಸರು, ಊರು ತಿಳಿಸಿದ ಅವರು, ತನ್ನ ಊರಿಗೆ ಹೋಗಬೇಕೆಂದು ಹೇಳುತ್ತಿದ್ದರು.

ವಿದ್ಯಾರ್ಥಿಯಿಂದ ವಿಳಾಸ ಪತ್ತೆ

ಬಂಗಾಳಿ ಹೊರತು ಬೇರೆ ಭಾಷೆ ಬರದಿರುವುದರಿಂದ ಯಾರಿಗೂ ಅವರು ಏನು ಹೇಳುತ್ತಿದ್ದರೆಂದು ಅರ್ಥ ಆಗುತ್ತಿರಲಿಲ್ಲ. ಮುಂದೆ ಆಕೆ ತಿಳಿಸಿದ ವಿಳಾಸಕ್ಕೆ ವಿಶ್ವಾಸದ ಮನೆಯಿಂದ ಸುಮಾರು 25 ಪತ್ರಗಳನ್ನು ಬರೆದೆವು. ಆದರೆ ಎಲ್ಲ ಪತ್ರಗಳು ವಾಪಾಸ್ಸು ಬಂದವು. ಅಲ್ಲಿಯ ಪೊಲೀಸ್ ಅಧಿಕಾರಿಯೊಬ್ಬರು ಸ್ಪಂದಿಸಿದರೂ ವಿಳಾಸ ಪತ್ತೆ ಹಚ್ಚಲು ಸಾಧ್ಯವಾಗರಿಲಿಲ್ಲ ಎಂದು ಅವರು ವಿವರಿಸಿದರು.

ಆಶ್ರಮಕ್ಕೆ ಬಂದವರೆಲ್ಲರ ಬಳಿ ನನ್ನನ್ನು ಊರಿಗೆ ಕರೆದುಕೊಂಡು ಹೋಗಿ ಎಂದು ಅಂಗಲಾಚಿ ಬೇಡಿಕೊಂಡು ಅಳುತ್ತಿದ್ದರು. ಇವರ ನಂತರ ಆಶ್ರಮಕ್ಕೆ ಬಂದು ಗುಣಮುಖರಾಗಿ ವಾಪಾಸ್ಸು ಊರಿಗೆ ಹೋದರೆ ಕಣ್ಣೀರು ಹಾಕುತ್ತಿದ್ದರು. ಇವರನ್ನು ನಾವು ಸಮಾಧಾನ ಪಡಿಸಿ ಧೈರ್ಯ ತುಂಬುತ್ತಿದ್ದೇವು ಎಂದು ಅವರು ತಿಳಿಸಿದರು.

ಸಂಸ್ಥೆಯಲ್ಲಿ ಶಿಬಿರ ಮಾಡುವುದಕ್ಕಾಗಿ ತಿಂಗಳಿಗೊಮ್ಮೆ ಮಣಿಪಾಲ ಕೆಎಂಸಿ ವೈದ್ಯರ ತಂಡ ವಿದ್ಯಾರ್ಥಿಗಳ ಜೊತೆ ಬರುತ್ತಿದ್ದಾರೆ. ಹೀಗೆ ಶಿಬಿರಕ್ಕೆ ಬಂದ ತಂಡದಲ್ಲಿದ್ದ ಅಸ್ಸಾಂನ ವಿದ್ಯಾರ್ಥಿಯೊಬ್ಬಳು ಮಲ್ಲಿಕಾ ಬೇಗಂ ಜೊತೆ ಮಾತನಾಡಿ ಕೆಲವು ಮಾಹಿತಿ ಸಂಗ್ರಹಿಸಿ ಅವರ ವಿಳಾಸ ಪತ್ತೆ ಹಚ್ಚುವಲ್ಲಿ ಯಶಸ್ವಿಯಾದರು. ಹೀಗೆ ಮಲ್ಲಿಕಾ ಬೇಗಂರ ದೊಡ್ಡ ಮಗನನ್ನು ಸಂಪರ್ಕಿಸಿ, ತಾಯಿ ಜೊತೆ ಮಾತನಾಡಿಸಿದೆವು. ಮಕ್ಕಳು ಸಿಕ್ಕಿದಕ್ಕೆ ಮಲ್ಲಿಕಾ ಬೇಗಂ ಸಾಕಷ್ಟು ಖುಷಿ ಪಟ್ಟರು ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಲ್ಲಿಕಾ ಬೇಗಂ, ತಹಜುದ್ದೀನ್, ಸಂಸ್ಥೆಯ ಉಪಾಧ್ಯಕ್ಷ ಮ್ಯಾಥ್ಯೂ ಕೆಸ್ತಲಿನೋ, ವಕೀಲ ದೇವಿನ್ ಶೆಟ್ಟಿ ಉಪಸ್ಥಿತರಿದ್ದರು.

‘ನಾನು 12 ವರ್ಷ ಇರುವಾಗ ನಮ್ಮ ತಂದೆ ತೀರಿ ಹೋದ ವಿಚಾರದಲ್ಲಿ ತಾಯಿ ಮಾನಸಿಕ ಅಸ್ವಸ್ಥಕ್ಕೆ ಒಳಗಾದರು. ಒಮ್ಮೆ ಅವರು ಮನೆಯಿಂದ ನಾಪತ್ತೆ ಯಾದರು. ನಾವು ಹುಡುಕಾಟ ನಡೆಸಿದೆವು. ಎಲ್ಲೂ ಪತ್ತೆಯಾಗಿಲ್ಲ. ಸುಮಾರು 12 ವರ್ಷಗಳ ನಂತರ ನನ್ನ ತಾಯಿ ನನಗೆ ಸಿಕ್ಕಿದ್ದಾರೆ. ಇದಕ್ಕಿಂತ ದೊಡ್ಡ ಖುಷಿಯ ವಿಚಾರ ಇನ್ನೊಂದಿಲ್ಲ’
-ತಹಜುದ್ದೀನ್, ಮಲ್ಲಿಕಾ ಬೇಗಂರ ಮಗ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X