Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಧ್ಯಪ್ರದೇಶದಲ್ಲಿ ಯುವಕನ ಸಜೀವ ದಹನ:...

ಮಧ್ಯಪ್ರದೇಶದಲ್ಲಿ ಯುವಕನ ಸಜೀವ ದಹನ: ನಾಲ್ವರ ಸೆರೆ

ವಾರ್ತಾಭಾರತಿವಾರ್ತಾಭಾರತಿ18 Sep 2021 4:07 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮಧ್ಯಪ್ರದೇಶದಲ್ಲಿ ಯುವಕನ ಸಜೀವ ದಹನ: ನಾಲ್ವರ ಸೆರೆ

ಹೊಸದಿಲ್ಲಿ,ಸೆ.18: ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ)ಗೆ ಸೇರಿದ 23ರ ಹರೆಯದ ಯುವಕನೋರ್ವ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ತನ್ನ ಮಾಜಿ ಪ್ರೇಯಸಿಯ ಕುಟುಂಬ ಸದಸ್ಯರಿಂದ ಸಜೀವ ದಹನಗೊಂಡ ಬರ್ಬರ ಘಟನೆ ಮಧ್ಯಪ್ರದೇಶದ ಸಾಗರ ಜಿಲ್ಲೆಯ ಸೆಮ್ರಾ ಲಹರಿಯಾ ಗ್ರಾಮದಲ್ಲಿ ಸಂಭವಿಸಿದೆ.

ಗುರುವಾರ ತಡರಾತ್ರಿ ಘಟನೆ ನಡೆದಿದ್ದು, ಮಹಿಳೆಯ ಕುಟುಂಬದ ನಾಲ್ವರನ್ನು ಬಂಧಿಸಲಾಗಿದೆ ಎಂದು ಎಸ್ಪಿ ಅತುಲ್ ಸಿಂಗ್ ಅವರು ಶನಿವಾರ ತಿಳಿಸಿದರು.
ಮೃತ ರಾಹುಲ್ ಯಾದವ್ ಜೊತೆ ಸಂಬಂಧವನ್ನು ಹೊಂದಿದ್ದ ಚಂಚಲ ಶರ್ಮಾ (23)ಗೆ ಕೂಡ ಸುಟ್ಟಗಾಯಗಳಾಗಿವೆ. ತನ್ನ ಮನೆಗೆ ಬಂದಿದ್ದ ರಾಹುಲ್ ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಲು ಪ್ರಯತ್ನಿಸುತ್ತಿದ್ದಾಗ ಆಕಸ್ಮಿಕವಾಗಿ ಆತನ ಮೈಗೆ ಬೆಂಕಿ ಹತ್ತಿಕೊಂಡಿತ್ತು ಮತ್ತು ತನ್ನ ಕುಟುಂಬದ ಸದಸ್ಯರು ತಮ್ಮಿಬ್ಬರನ್ನು ರಕ್ಷಿಸಲು ಪ್ರಯತ್ನಿಸಿದ್ದರು ಎಂದು ಆಕೆ ಪೊಲೀಸರಿಗೆ ತಿಳಿಸಿದ್ದಾಳೆ. ‌

ಯಾದವ್ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ಮಾತುಕತೆಗಾಗಿ ಮಹಿಳೆಯ ಮನೆಗೆ ಬರುವಂತೆ ಗುರುವಾರ ರಾತ್ರಿ ತನಗೆ ದೂರವಾಣಿ ಮೂಲಕ ತಿಳಿಸಲಾಗಿತ್ತು. ತಾನು ಅಲ್ಲಿಗೆ ಹೋದಾಗ ಕುಟುಂಬದ ನಾಲ್ವರು ತನ್ನ ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದರು ಎಂದು ಆತ ತನ್ನ ಮರಣ ಹೇಳಿಕೆಯಲ್ಲಿ ತಿಳಿಸಿದ್ದಾನೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ್ದ ಯಾದವ್ ಕುಟುಂಬದವರು ಆತನನ್ನು ಆಸ್ಪತ್ರೆಗೆ ಸಾಗಿಸಿದ್ದರು.

ನಾಲ್ವರು ಆರೋಪಿಗಳ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದ್ದು, ತನಿಖೆಯು ಪ್ರಗತಿಯಲ್ಲಿದೆ ಎಂದು ಸಿಂಗ್ ತಿಳಿಸಿದರು. ಮೃತನ ಕುಟುಂಬದ ಸದಸ್ಯರು ಮಹಿಳೆಯ ಕುಟುಂಬದ ಮನೆಯನ್ನು ನೆಲಸಮಗೊಳಿಸಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟು ಶುಕ್ರವಾರ ಸಂಜೆ ಸಾಗರ-ಬಿನಾ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ತಡೆಯನ್ನೊಡ್ಡಿದ್ದರು. ತಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸುವುದಾಗಿ ಮಧ್ಯಪ್ರದೇಶದ ನಗರಾಡಳಿತ ಸಚಿವ ಭೂಪೇಂದ್ರ ಸಿಂಗ್ ಭರವಸೆಯ ಬಳಿಕ ಅವರು ತಮ್ಮ ಪ್ರತಿಭಟನೆಯನ್ನು ಹಿಂದೆಗೆದುಕೊಂಡಿದ್ದರು.
 
ಯಾದವ್ ಮತ್ತು ಚಂಚಲ ಕೆಲ ವರ್ಷಗಳ ಕಾಲ ಸಂಬಂಧವನ್ನು ಹೊಂದಿದ್ದರು. ಆದರೆ ಆಕೆಯ ಹೆತ್ತವರು ಇದಕ್ಕೆ ಸಮ್ಮತಿಸಿರಲಿಲ್ಲ ಮತ್ತು ಕಳೆದ ವರ್ಷ ಬೇರೆ ಯುವಕನ ಜೊತೆ ಆಕೆಯ ಮದುವೆಯನ್ನು ನೆರವೇರಿಸಿದ್ದರು. ಕೆಲವು ದಿನಗಳ ಹಿಂದೆ ತವರುಮನೆಗೆ ಆಗಮಿಸಿದ್ದ ಚಂಚಲಳ ಆಹ್ವಾನದ ಮೇರೆಗೆ ಆಕೆಯನ್ನು ಭೇಟಿಯಾಗಲು ಯಾದವ್ ಆಕೆಯ ಮನೆಗೆ ತೆರಳಿದ್ದ ಮತ್ತು ಅವರು ಒಟ್ಟಿಗೆ ಇರುವುದು ಶರ್ಮಾ ಕುಟುಂಬದ ಕಣ್ಣಿಗೆ ಬಿದ್ದಿತ್ತು ಎಂದು ಮಾಧ್ಯಮಗಳು ವರದಿ ಮಾಡಿವೆ.
 ‌
‘ಚಂಚಲ ಕೊನೆಯ ಬಾರಿಗೆ ತನ್ನನ್ನು ಭೇಟಿಯಾಗುವಂತೆ ಕೇಳಿಕೊಂಡಿದ್ದಾಳೆ ಎಂದು ರಾಹುಲ್ ಗುರುವಾರ ಸಂಜೆ ತಿಳಿಸಿದ್ದ. ಕಳೆದ ಮೂರು ದಿನಗಳಿಂದಲೂ ಆಕೆ ಆತನಿಗೆ ಕರೆಗಳನ್ನು ಮಾಡುತಿದ್ದಳು. ಕೊನೆಯ ಬಾರಿ ಆಕೆಯನ್ನು ಭೇಟಿಯಾಗಲು ರಾಹುಲ್ ಅಲ್ಲಿಗೆ ತೆರಳಿದ್ದ,ಆದರೆ ಅವರು ಆತನನ್ನು ಕೊಲ್ಲುತ್ತಾರೆ ಎನ್ನುವುದು ನಮಗೆ ಗೊತ್ತಿರಲಿಲ್ಲ ’ ಎಂದು ಮೃತನ ಚಿಕ್ಕಪ್ಪ ಸುದ್ದಿಗಾರರಿಗೆ ತಿಳಿಸಿದರು.
 
ಆರೋಪಿಗಳು ಯಾದವನ ಕೈಗಳನ್ನು ಕಟ್ಟಿಹಾಕಿ ನಿರ್ದಯವಾಗಿ ಆತನನ್ನು ಥಳಿಸಿದ್ದರು,ಬಳಿಕ ಆತನ ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಛಾವಣಿಯಿಂದ ಕೆಳಕ್ಕೆ ತಳ್ಳಿದ್ದರು. ಆತ ಮನೆಯ ಕೊಟ್ಟಿಗೆಯಲ್ಲಿ ಬಿದ್ದಿದ್ದ ಎಂದು ಸಿಂಗ್ ಹೇಳಿದ್ದನ್ನು ಮಾಧ್ಯಮಗಳು ಉಲ್ಲೇಖಿಸಿವೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X