Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋವಿಡ್ ಪರಿಸ್ಥಿತಿಗೆ ಅನುಗುಣವಾಗಿ...

ಕೋವಿಡ್ ಪರಿಸ್ಥಿತಿಗೆ ಅನುಗುಣವಾಗಿ ಪರ್ಯಾಯ ಮಹೋತ್ಸವ ಆಚರಣೆ: ಕೃಷ್ಣಾಪುರ ಶ್ರೀ

ವಾರ್ತಾಭಾರತಿವಾರ್ತಾಭಾರತಿ19 Sept 2021 8:12 PM IST
share
ಕೋವಿಡ್ ಪರಿಸ್ಥಿತಿಗೆ ಅನುಗುಣವಾಗಿ ಪರ್ಯಾಯ ಮಹೋತ್ಸವ ಆಚರಣೆ: ಕೃಷ್ಣಾಪುರ ಶ್ರೀ

ಉಡುಪಿ, ಸೆ.19: ಶ್ರೀಕೃಷ್ಣಾಪುರ ಮಠಾಧೀಶ ಶ್ರೀವಿದ್ಯಾಸಾಗರತೀರ್ಥ ಸ್ವಾಮೀಜಿಯ ಚತುರ್ಥ ಪರ್ಯಾಯ ಮಹೋತ್ಸವ ಸಮಿತಿ ಸಭೆ ಹಾಗೂ ಪರ್ಯಾಯ ಕಚೇರಿಯ ಉದ್ಘಾಟನಾ ಸಮಾರಂಭವು ರವಿವಾರ ಕೃಷ್ಣಾಪುರ ಮಠದ ಶ್ರೀಕೃಷ್ಣಸಭಾ ಮಂದಿರದಲ್ಲಿ ನಡೆಯಿತು.

ಕಚೇರಿಯನ್ನು ಉದ್ಘಾಟಿಸಿದ ಕೃಷ್ಣಾಪುರ ಮಠಾಧೀಶ ಶ್ರೀ ವಿದ್ಯಾಸಾಗರತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿ, ಪರ್ಯಾಯೋತ್ಸವವನ್ನು ಪ್ರತೀ ಬಾರಿಯಂತೆ ನಡೆಸಲು ಸಿದ್ಧತೆ ನಡೆಸಲಾಗುವುದು. ಆದರೆ ಆ ಅವಧಿಯ ಕೋವಿಡ್ ಪರಿಸ್ಥಿತಿಗೆ ಅನುಗುಣವಾಗಿ ಮಹೋತ್ಸವವನ್ನು ಆಚರಿಸಲಾಗುವುದು. ಮಹೋತ್ಸವವನ್ನು ವಿಜೃಂಭಣೆಯಿಂದ ಮಾಡಲು ಅವಕಾಶ ಇದ್ದರೆ ಮಾತ್ರ ಮಾಡಲಾಗುವುದು. ಇಲ್ಲದಿದ್ದರೆ ಪರಂಪರೆಯಾಗಿ ಮಾಡಿಕೊಂಡ ಕ್ರಮಗಳನ್ನು ಮಾತ್ರ ನೆರವೇರಿಸಲಾಗುವುದು ಎಂದರು.

ಸಮಿತಿಯ ಕಾರ್ಯಾಧ್ಯಕ್ಷ ಉಡುಪಿ ಶಾಸಕ ರಘುಪತಿ ಭಟ್ ಮಾತನಾಡಿ, ಕೋವಿಡ್ ನಿಯಮಾನುಸಾರ ಪರ್ಯಾಯೋತ್ಸವದ ರೂಪು ರೇಷೆಯನ್ನು ತಯಾರಿಸಲಾಗುವುದು. ನಾಳೆ ಅಧಿವೇಶನದಲ್ಲಿ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಪರ್ಯಾಯ ಮಹೋತ್ಸವ ಹಾಗೂ ಉಡುಪಿ ನಗರದ ಅಭಿವೃದ್ಧಿಗೆ ಸರಕಾರದಿಂದ ಗರಿಷ್ಠ ಅನುದಾನವನ್ನು ಬಿಡುಗಡೆ ಮಾಡಲು ವಿನಂತಿಸಲಾಗು ವುದು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಮೆರವಣಿಗೆಗೆ ಬೇಕಾದ ರಾಜ್ಯ ಮಟ್ಟದ ವಿಶೇಷ ಜಾನಪದ ತಂಡಗಳು ಭಾಗವಹಿುವಂತೆ ಮಾಡ ಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕಟೀಲು ಅರ್ಚಕರಾದ ವಾಸುದೇವ ಅಸ್ರಣ್ಣ, ಲಕ್ಷ್ಮೀನಾರಾ ಯಣ ಅಸ್ರಣ್ಣ, ಅನಂತ ಅಸ್ರಣ್ಣ, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಹಾಗೂ ಕಸಾಪ ದ.ಕ. ಜಿಲ್ಲಾಧ್ಯಕ್ಷ ಪ್ರದೀಪ್ ಕಲ್ಕೂರ್, ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಮಂಜುನಾಥ ಉಪಾಧ್ಯಾಯ ಮೊದಲಾದವರು ಉಪಸ್ಥಿತರಿದ್ದರು.

ಪರ್ಯಾಯ ಸಮಿತಿಯ ಅಧ್ಯಕ್ಷ ಸೂರ್ಯನಾರಾಯಣ ಉಪಾಧ್ಯಾಯ ಸ್ವಾಗತಿಸಿದರು. ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರು ಕಾರ್ಯಕಾರಿ ಸದಸ್ಯರ ವಿವರವನ್ನು ನೀಡಿದರು. ಸಾರ್ವಜನಿಕ ಸಂಪರ್ಕಾಧಿಕಾರಿ ಬಿ.ವಿ. ಲಕ್ಷ್ಮೀನಾರಾಯಣ ಕಾರ್ಯಕ್ರಮ ನಿರೂಪಿಸಿದರು. ಸಮಿತಿಯ ಸಂಯೋಜಕ ಯು.ಕೆ.ರಾಘವೇಂದ್ರ ರಾವ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X