Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪುತ್ರಿಯರು ಎಂದೆಂದೂ ಪುತ್ರಿಯರೇ,...

ಪುತ್ರಿಯರು ಎಂದೆಂದೂ ಪುತ್ರಿಯರೇ, ಪುತ್ರರು ಮದುವೆಯಾಗುವವರೆಗೆ ಮಾತ್ರ ಪುತ್ರರು: ಬಾಂಬೆ ಉಚ್ಚ ನ್ಯಾಯಾಲಯ

ವೃದ್ಧ ಹೆತ್ತವರ ಫ್ಲಾಟ್ ತೆರವುಗೊಳಿಸುವಂತೆ ಮಗನಿಗೆ ಆದೇಶ

ವಾರ್ತಾಭಾರತಿವಾರ್ತಾಭಾರತಿ19 Sept 2021 9:06 PM IST
share
ಪುತ್ರಿಯರು ಎಂದೆಂದೂ ಪುತ್ರಿಯರೇ, ಪುತ್ರರು ಮದುವೆಯಾಗುವವರೆಗೆ ಮಾತ್ರ ಪುತ್ರರು: ಬಾಂಬೆ ಉಚ್ಚ ನ್ಯಾಯಾಲಯ

ಮುಂಬೈ,ಸೆ.19: ಹಿರಿಯ ನಾಗರಿಕರು ಯಾವುದೇ ಕಿರುಕುಳಗಳಿಂದ ಮುಕ್ತವಾದ ಸಹಜ ಬದುಕನ್ನು ಸಾಗಿಸುವಂತಾಗಲು ಅವರ ಅಗತ್ಯಗಳನ್ನು ಪೂರೈಸಲು ಮಕ್ಕಳು ಅಥವಾ ಬಂಧುಗಳು ಬದ್ಧರಾಗಿದ್ದಾರೆ ಎಂದು ಹಿರಿಯ ನಾಗರಿಕರ ಕಾಯ್ದೆಯು ಸ್ಪಷ್ಟಪಡಿಸಿದೆ ಎಂದು ಹೇಳಿರುವ ಬಾಂಬೆ ಉಚ್ಚ ನ್ಯಾಯಾಲಯವು,ಒಂದು ತಿಂಗಳಲ್ಲಿ ತನ್ನ ವೃದ್ಧ ಹೆತ್ತವರ ಫ್ಲಾಟ್ ಅನ್ನು ಖಾಲಿ ಮಾಡುವಂತೆ ಮುಂಬೈ ನಿವಾಸಿ ಮತ್ತು ಆತನ ಪತ್ನಿಗೆ ಆದೇಶಿಸಿದೆ.

ಮಗ ತನ್ನ ಕುಟುಂಬದೊಂದಿಗೆ ತನ್ನ 90ರ ಹರೆಯದ ತಂದೆ ಪುತ್ರಿಗೆ ಉಡುಗೊರೆಯಾಗಿ ನೀಡಿರುವ ಫ್ಲಾಟ್ ಅನ್ನು ಬಲವಂತದಿಂದ ಕಬಳಿಸಲು ಹೆತ್ತವರ ಇಚ್ಛೆಗೆ ವಿರುದ್ಧವಾಗಿ ಅಲ್ಲಿ ವಾಸವಾಗಿದ್ದಾನೆ. ಇದು ಕಿರುಕುಳವಾಗಿದ್ದು,ಹೆತ್ತವರ ಸಹಜ ಬದುಕಿನ ಹಕ್ಕನ್ನು ಕಿತ್ತುಕೊಳ್ಳಲಾಗಿದೆ ಎಂದು ಹೇಳಿದ್ದ ನ್ಯಾಯಾಲಯವು, ಜೀವನಾಂಶ ನ್ಯಾಯಮಂಡಳಿಯು ಫ್ಲಾಟ್ ಅನ್ನು ತೆರವುಗೊಳಿಸುವಂತೆ ಸೂಚಿಸಿ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಮಗ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದೆ.

ಪುತ್ರಿಯರು ಎಂದಿಗೂ ಹೆತ್ತವರ ಬೆಂಬಲಕ್ಕಿರುತ್ತಾರೆ,ಆದರೆ ಪುತ್ರರು ಮದುವೆಯಾಗುವವರೆಗೆ ಮಾತ್ರ ಅವರೊಂದಿಗಿರುತ್ತಾರೆ ಎಂಬ ಹಳೆಯ ನಾಣ್ಣುಡಿಯನ್ನು ಪುನರುಚ್ಚರಿಸಿದ ನ್ಯಾಯಾಲಯವು,ಇದಕ್ಕೆ ಖಂಡಿತ ಅಪವಾದಗಳಿವೆಯಾದರೂ ತಮ್ಮ ಒಬ್ಬನೇ ಮಗ ಮತ್ತು ಸೊಸೆಯಿಂದ ವೃದ್ಧ ಹೆತ್ತವರು ನರಳುತ್ತಿರುವ ಈ ಪ್ರಕರಣ ಈ ಹಳೆಯ ನಾಣ್ಣುಡಿಯಲ್ಲಿ ಸತ್ಯವಿದೆ ಎನ್ನುವುದನ್ನು ತೋರಿಸಿದೆ. ಕಕ್ಷಿದಾರರ ನಡುವಿನ ಹಲವಾರು ಕಾನೂನು ಸಮರಗಳು ಹೆತ್ತವರು ಚಿತ್ರಹಿಂಸೆ ಮತ್ತು ಕಿರುಕುಳದ ಭಾವನೆಯನ್ನು ಅನುಭವಿಸುತ್ತಿದ್ದಾರೆ ಎನ್ನುವುದಕ್ಕೆ ನಿದರ್ಶನವಾಗಿದೆ. ಅಲ್ಲದೆ ವಿವಾದಿತ ಫ್ಲಾಟ್ ಮಗನು ಯಾವುದೇ ಕಾನೂನು ಹಕ್ಕನ್ನು ಮಂಡಿಸಬಹುದಾದ ಪೂರ್ವಾರ್ಜಿತ ಆಸ್ತಿಯೂ ಅಲ್ಲ ಎಂದು ನ್ಯಾಯಾಲಯವು ಬೆಟ್ಟು ಮಾಡಿದೆ.

ತನ್ನ ಹೆತ್ತವರು ಫ್ಲಾಟ್ ಅನ್ನು ಪುತ್ರಿಗೆ ಉಡುಗೊರೆಯಾಗಿ ನೀಡಿರುವುದರಿಂದ ಅವರು ಅದರ ಮೇಲೆ ಹಕ್ಕು ಸಾಧಿಸುವಂತಿಲ್ಲ ಎಂಬ ಮಗನ ವಾದವನ್ನು ತಿರಸ್ಕರಿಸಿದ ಉಚ್ಚ ನ್ಯಾಯಾಲಯವು,ಅವರು ಆಸ್ತಿಯಲ್ಲಿ ಹಕ್ಕುಗಳು ಮತ್ತು ಹಿತಾಸಕ್ತಿಗಳನ್ನು ಹೊಂದಿದ್ದಾರೆ ಎಂದು ಸ್ಪಷ್ಟಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X